ಮೇ 31ಕ್ಕೆ ಡೆಡ್ ಲೈನ್ ನೀಡಿದ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಜಿ.ಎಸ್ ಸಂಗ್ರೇಶಿ.

ಗುಡ್ ನ್ಯೂಸ್ ಕನ್ನಡ ವಾಹಿನಿಯೊಂದಿಗೆ ಸಂದರ್ಶನ ನೀಡಿದ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಜಿ.ಎಸ್ ಸಂಗ್ರೇಶಿ. ZP,TP ಕಾರ್ಪೊರೇಷನ್ ಎಲೆಕ್ಷನ್ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆ ಚುನಾವಣೆ ಕುರಿತು ಹಲವಾರು ಹೇಳಿಕೆಗಳನ್ನು ನೀಡಿದ್ದಾರೆ. ಸರ್ಕಾರದ ಮಂದ ನಡೆಯಿಂದ ಲೋಕಲ್ ವಾರ್ ಗೆ ಬೆಲೆ ಆಗ್ತಾ ಇದೆ. ಈ ಡಿಲೆಯಿಂದ ಸರ್ಕಾರಕ್ಕೂ ಸಹ ಕೆಟ್ಟ ಪರಿಣಾಮ ಬೀರಬಹುದು.

ಈ ಚುನಾವಣೆ ಕುರಿತಂತೆ ಮೇ 31ಕ್ಕೆ ಸರ್ಕಾರಕ್ಕೆ ಡೆಡ್ ಲೈನ್ ಇರುತ್ತದೆ. ಅಷ್ಟರೊಳಗೆ ಸರ್ಕಾರ ಪಟ್ಟಿ ಕೊಡಲಿಲ್ಲವಾದರೆ, ಸುಪ್ರೀಂ ಕೋರ್ಟ್ ನ ಮೊರೆ ಹೋಗುತ್ತೇವೆ. ಚುನಾವಣೆಗೆ ನಾವು ಸಂಪೂರ್ಣವಾಗಿ ತಯಾರಿದ್ದೇವೆ. ಈ ವಿಷಯದ ಕುರಿತಂತೆ ನಾವು ಹೋದಲ್ಲಿ ಬಂದಲ್ಲಿ ಚುನಾವಣೆಯ ಬಗ್ಗೆ ಪ್ರಸ್ತಾಪವನ್ನು ಮಾಡ್ತಾ ಇದ್ದಾರೆ. ಈ ಚುನಾವಣಾ ವಿಷಯದಲ್ಲಿ ಇನ್ನೂ ತಡವಾದರೆ ನಾವು ಖಂಡಿತವಾಗಿಯೂ ಸುಪ್ರೀಂಕೋರ್ಟ್ ಮೊರೆ ಹೋಗುತ್ತೇವೆ ಎಂದು ಕಡಾ ಖಂಡಿತವಾಗಿ ಹೇಳಿಕೆ ನೀಡಿದ್ದಾರೆ.

ಇನ್ನು ಮತದಾರರ ಪಟ್ಟಿ ಕೂಡ ರೆಡಿ ಇದೆ ರಿಸರ್ವೇಶನ್ ಕೊಡಬೇಕಾಗಿರೋದು ಬಾಕಿ ಇದೆ ಅಷ್ಟೇ. ಸ್ಥಳೀಯ ಸಂಸ್ಥೆ ಚುನಾವಣೆ ಡಿಲೆ ಆಗ್ತಾ ಇರೋದ್ರ ಬಗ್ಗೆ ಬೇಸರವನ್ನ ವ್ಯಕ್ತಪಡಿಸಿ ಸರ್ಕಾರದ ವಿರುದ್ಧ ಗರಂ ಆಗಿ ಮಾತನಾಡಿದರು. ಅಷ್ಟೇ ಅಲ್ಲದೆ ನಾಲ್ಕು ಎಂಎಲ್ಎ ಕ್ಷೇತ್ರಗಳ ಬಗ್ಗೆ ಮಾಹಿತಿ ಸಂಗ್ರಹಣೆಯೂ ಸಹ ಈಗಾಗಲೇ ನಡೆದಿದೆ. ನಾಲಕ್ಕು ಕ್ಷೇತ್ರದಿಂದ 7 ಲಕ್ಷಕ್ಕೂ ಹೆಚ್ಚು ಮತದಾರರು ಇದ್ದಾರೆ. ಅಷ್ಟೇ ಅಲ್ಲದೆ ಭಾರತೀಯ ಚುನಾವಣಾ ಆಯೋಗ ಮತದಾರರ ಪಟ್ಟಿಯನ್ನು ಸಹ ರೆಡಿ ಮಾಡಿಕೊಂಡಿದ್ದಾರೆ. ಅದರ ಆಧಾರದ ಮೇಲೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮಾಡ್ತೀವಿ ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲದೆ ಸಂವಿಧಾನದ ನೀತಿ ನಿಯಮಗಳನ್ನು ಸಹ ಹೇಳಿದರು. ಐದು ವರ್ಷ ಅವಧಿ ಮುಗಿಯುವ ಆರು ತಿಂಗಳ ಮುಂಚೆ ಚುನಾವಣೆ ಮಾಡ್ಬೇಕು, ಇದರ ಬಗ್ಗೆ ಸ್ಪಷ್ಟವಾಗಿ ಸಂವಿಧಾನದಲ್ಲಿ ಉಲ್ಲೇಖ ಆಗಿದೆ ಆದರೆ ಸರ್ಕಾರಗಳು ಮೀಸಲಾತಿ ಪಟ್ಟಿ ಕೊಡದೆ ವಿಳಂಬ ಮಾಡ್ತಾ ಇದ್ದಾರೆ. ಜನಗಳಿಗೆ ನಾವು ಉತ್ತರ ಹೇಳಿ ಸಾಕಾಗಿದೆ. ಮೇ 31ಕ್ಕೆ ಅಂತಿಮವಾಗಿ ಸರ್ಕಾರಕ್ಕೆ ಡೆಡ್ ಲೈನ್, ಅದರ ಒಳಗಾಗಿ ಅವರು ಸರಿಪಡಿಸಿಕೊಳ್ಳದಿದ್ದರೆ, ಕೋರ್ಟ್ ಮೂಲಕ ಹೋಗಿ ಚುನಾವಣೆಯನ್ನು ಮಾಡೇ ಮಾಡ್ತೀವಿ. ಈಗಾಗಲೇ ಸಾಕಷ್ಟು ಬಾರಿ ಸರ್ಕಾರಕ್ಕೆ ಪತ್ರವನ್ನು ಬರೆದು ಆಗಿದೆ ಇನ್ನೇನಿದ್ರೂ ಸುಪ್ರೀಂಕೋರ್ಟ್ ಮೊರೆ ಹೋಗಿ ಕಲೆಕ್ಷನ್ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ಮೈಸೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಜಿಎಸ್ ಸಂಗ್ರೇಶಿ ಹೇಳಿಕೆಯನ್ನು ನೀಡಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು