ಮೇ 31ಕ್ಕೆ ಡೆಡ್ ಲೈನ್ ನೀಡಿದ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಜಿ.ಎಸ್ ಸಂಗ್ರೇಶಿ.

ಗುಡ್ ನ್ಯೂಸ್ ಕನ್ನಡ ವಾಹಿನಿಯೊಂದಿಗೆ ಸಂದರ್ಶನ ನೀಡಿದ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಜಿ.ಎಸ್ ಸಂಗ್ರೇಶಿ. ZP,TP ಕಾರ್ಪೊರೇಷನ್ ಎಲೆಕ್ಷನ್ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆ ಚುನಾವಣೆ ಕುರಿತು ಹಲವಾರು ಹೇಳಿಕೆಗಳನ್ನು ನೀಡಿದ್ದಾರೆ. ಸರ್ಕಾರದ ಮಂದ ನಡೆಯಿಂದ ಲೋಕಲ್ ವಾರ್ ಗೆ ಬೆಲೆ ಆಗ್ತಾ ಇದೆ. ಈ ಡಿಲೆಯಿಂದ ಸರ್ಕಾರಕ್ಕೂ ಸಹ ಕೆಟ್ಟ ಪರಿಣಾಮ ಬೀರಬಹುದು.

ಈ ಚುನಾವಣೆ ಕುರಿತಂತೆ ಮೇ 31ಕ್ಕೆ ಸರ್ಕಾರಕ್ಕೆ ಡೆಡ್ ಲೈನ್ ಇರುತ್ತದೆ. ಅಷ್ಟರೊಳಗೆ ಸರ್ಕಾರ ಪಟ್ಟಿ ಕೊಡಲಿಲ್ಲವಾದರೆ, ಸುಪ್ರೀಂ ಕೋರ್ಟ್ ನ ಮೊರೆ ಹೋಗುತ್ತೇವೆ. ಚುನಾವಣೆಗೆ ನಾವು ಸಂಪೂರ್ಣವಾಗಿ ತಯಾರಿದ್ದೇವೆ. ಈ ವಿಷಯದ ಕುರಿತಂತೆ ನಾವು ಹೋದಲ್ಲಿ ಬಂದಲ್ಲಿ ಚುನಾವಣೆಯ ಬಗ್ಗೆ ಪ್ರಸ್ತಾಪವನ್ನು ಮಾಡ್ತಾ ಇದ್ದಾರೆ. ಈ ಚುನಾವಣಾ ವಿಷಯದಲ್ಲಿ ಇನ್ನೂ ತಡವಾದರೆ ನಾವು ಖಂಡಿತವಾಗಿಯೂ ಸುಪ್ರೀಂಕೋರ್ಟ್ ಮೊರೆ ಹೋಗುತ್ತೇವೆ ಎಂದು ಕಡಾ ಖಂಡಿತವಾಗಿ ಹೇಳಿಕೆ ನೀಡಿದ್ದಾರೆ.

ಇನ್ನು ಮತದಾರರ ಪಟ್ಟಿ ಕೂಡ ರೆಡಿ ಇದೆ ರಿಸರ್ವೇಶನ್ ಕೊಡಬೇಕಾಗಿರೋದು ಬಾಕಿ ಇದೆ ಅಷ್ಟೇ. ಸ್ಥಳೀಯ ಸಂಸ್ಥೆ ಚುನಾವಣೆ ಡಿಲೆ ಆಗ್ತಾ ಇರೋದ್ರ ಬಗ್ಗೆ ಬೇಸರವನ್ನ ವ್ಯಕ್ತಪಡಿಸಿ ಸರ್ಕಾರದ ವಿರುದ್ಧ ಗರಂ ಆಗಿ ಮಾತನಾಡಿದರು. ಅಷ್ಟೇ ಅಲ್ಲದೆ ನಾಲ್ಕು ಎಂಎಲ್ಎ ಕ್ಷೇತ್ರಗಳ ಬಗ್ಗೆ ಮಾಹಿತಿ ಸಂಗ್ರಹಣೆಯೂ ಸಹ ಈಗಾಗಲೇ ನಡೆದಿದೆ. ನಾಲಕ್ಕು ಕ್ಷೇತ್ರದಿಂದ 7 ಲಕ್ಷಕ್ಕೂ ಹೆಚ್ಚು ಮತದಾರರು ಇದ್ದಾರೆ. ಅಷ್ಟೇ ಅಲ್ಲದೆ ಭಾರತೀಯ ಚುನಾವಣಾ ಆಯೋಗ ಮತದಾರರ ಪಟ್ಟಿಯನ್ನು ಸಹ ರೆಡಿ ಮಾಡಿಕೊಂಡಿದ್ದಾರೆ. ಅದರ ಆಧಾರದ ಮೇಲೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮಾಡ್ತೀವಿ ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲದೆ ಸಂವಿಧಾನದ ನೀತಿ ನಿಯಮಗಳನ್ನು ಸಹ ಹೇಳಿದರು. ಐದು ವರ್ಷ ಅವಧಿ ಮುಗಿಯುವ ಆರು ತಿಂಗಳ ಮುಂಚೆ ಚುನಾವಣೆ ಮಾಡ್ಬೇಕು, ಇದರ ಬಗ್ಗೆ ಸ್ಪಷ್ಟವಾಗಿ ಸಂವಿಧಾನದಲ್ಲಿ ಉಲ್ಲೇಖ ಆಗಿದೆ ಆದರೆ ಸರ್ಕಾರಗಳು ಮೀಸಲಾತಿ ಪಟ್ಟಿ ಕೊಡದೆ ವಿಳಂಬ ಮಾಡ್ತಾ ಇದ್ದಾರೆ. ಜನಗಳಿಗೆ ನಾವು ಉತ್ತರ ಹೇಳಿ ಸಾಕಾಗಿದೆ. ಮೇ 31ಕ್ಕೆ ಅಂತಿಮವಾಗಿ ಸರ್ಕಾರಕ್ಕೆ ಡೆಡ್ ಲೈನ್, ಅದರ ಒಳಗಾಗಿ ಅವರು ಸರಿಪಡಿಸಿಕೊಳ್ಳದಿದ್ದರೆ, ಕೋರ್ಟ್ ಮೂಲಕ ಹೋಗಿ ಚುನಾವಣೆಯನ್ನು ಮಾಡೇ ಮಾಡ್ತೀವಿ. ಈಗಾಗಲೇ ಸಾಕಷ್ಟು ಬಾರಿ ಸರ್ಕಾರಕ್ಕೆ ಪತ್ರವನ್ನು ಬರೆದು ಆಗಿದೆ ಇನ್ನೇನಿದ್ರೂ ಸುಪ್ರೀಂಕೋರ್ಟ್ ಮೊರೆ ಹೋಗಿ ಕಲೆಕ್ಷನ್ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ಮೈಸೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಜಿಎಸ್ ಸಂಗ್ರೇಶಿ ಹೇಳಿಕೆಯನ್ನು ನೀಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!