ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಲಗಾಮು, ಸುಗ್ರೀವಾಜ್ಞೆಗೆ ರಾಜ್ಯ ಸಂಪುಟ ಅನುಮೋದನೆ.

ಬೆಂಗಳೂರು :-ಮೈಕ್ರೋ ಫೈನಾನ್ಸ್ ಕಂಪನಿಗಳ ಮೇಲೆ ಲಗಾಮು ಹಾಕುವ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಸುಗ್ರೀವಾಜ್ಞೆಯನ್ನು ಯಾವ ರೀತಿ ಜಾರಿಗೊಳಿಸಬೇಕೆಂಬ ಅಧಿಕಾರವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ.
ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸ ದೀಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ. ಪಾಟೀಲ್, ಸುಗ್ರೀವಾಜ್ಞೆಯಲ್ಲಿ ಸಾಲಗಾರರ ಹಿತ ಕಾಪಾಡುವ ಅಂಶಗಳನ್ನು ಅಳವಡಿಸಲಾಗಿದೆ.
ಆದರೆ, ಇದರಲ್ಲಿ ಸಣ್ಣ-ಪುಟ್ಟ ಲೋಪ ದೋಷಗಳಿವೆ ಎಂದು ಕಾನೂನು ಮತ್ತು ಆರ್ಥಿಕ ಇಲಾಖೆ ಸಲಹೆ ಹಿನ್ನೆಲೆಯಲ್ಲಿ ಸಂಪುಟ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿ, ಇರುವ ಸಣ್ಣ-ಪುಟ್ಟ ಲೋಪದೋಷಗಳನ್ನು ಬಗೆಹರಿಸಿ ಜಾರಿಗೆ ತರುವ ಅಧಿಕಾರವನ್ನು ಮುಖ್ಯಮಂತ್ರಿ ಅವರಿಗೆ ನೀಡಿದೆ. ಅವರು, ಹಣಕಾಸು, ಕಾನೂನು, ಕಂದಾಯ, ಗೃಹ ಇಲಾಖೆ ಸಚಿವರು ಮತ್ತು ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಕಾಯ್ದೆಗೆ ಒಂದು ರೂಪ ನೀಡಲಿದ್ದಾರೆ ಎಂದರು.
ಜಲ ಭದ್ರತೆಗೆ 5000 ಕೋಟಿ ಬೃಹತ್ ಯೋಜನೆ: ಸತತ ಬರಗಾಲಕ್ಕೆ ತುತ್ತಾಗುವ ಕರ್ನಾಟಕವನ್ನು ಪಾರು ಮಾಡಲು ಜಲ ಭದ್ರತೆಗಾಗಿ 5,000 ಕೋಟಿ ರೂ.ಗಳ ಬೃಹತ್ ಯೋಜನೆಗೆ ಸಂಪುಟ ಹಸಿರು ನಿಶಾನೆ ತೋರಿದೆ. ವಿಶ್ವಬ್ಯಾಂಕ್ ನಿಂದ 3,500 ಕೋಟಿ ರೂ. ಸಾಲ ಪಡೆದು ಅದಕ್ಕೆ ಸರಿಸಮನಾಗಿ ರಾಜ್ಯ ಸರ್ಕಾರ 1,500 ಕೋಟಿ ರೂ. ಒದಗಿಸಿ ಯೋಜನೆ ಕೈಗೆತ್ತಿಕೊಳ್ಳಲು ನಿರ್ಧರಿಸಿದೆ. ಮಳೆಗಾಲದಲ್ಲಿ ಹೆಚ್ಚುವರಿಯಾಗಿ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ತಡೆದು ಅಣೆಕಟ್ಟೆ, ಚೆಕ್‌ಡ್ಯಾಂ ನಿರ್ಮಾಣ ಮತ್ತು ಕೆರೆ ತುಂಬಿಸುವುದು ಇದರ ಉದ್ದೇಶವಾಗಿದೆ.

ಬೆಂಗಳೂರು ಅರಮನೆ ಮೈದಾನ ಜಾಗ ಬಳಕೆ ಮತ್ತು ನಿಯಂತ್ರಣಕ್ಕೆ ಕಳೆದ ಸಂಪುಟ ಸಭೆಯಲ್ಲಿ ಹೊರಡಿಸಿದ ಸುಗ್ರೀವಾಜ್ಞೆ ಅನುಷ್ಠಾನಕ್ಕೆ ಸಂಪುಟ ಸಮ್ಮತಿಸಿದೆ. ರಾಜಧಾನಿ ಹೊರವಲಯದ ಹೆಸರ ಘಟ್ಟದ 5,678 ಎಕರೆ ಪ್ರದೇಶವನ್ನು ವನ್ಯ ಜೀವಿ ಸಂರಕ್ಷಣಾ ನಿಯಮದಡಿ ಮೀಸಲು ಪ್ರದೇಶ ಎಂದು ಘೋಷಣೆ ಮಾಡಲಾಗಿದೆ.
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 19 ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಕಟ್ಟಡಗಳನ್ನು 304 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣಕ್ಕೆ ಅನುಮತಿ ನೀಡ ಲಾಗಿದೆ. ಸರ್ಕಾರದಿಂದ ನೇರವಾಗಿ ಮತ್ತು ಪರೋಕ್ಷವಾಗಿ ನೇಮಕಗೊಂಡಿರುವ ವಿವಿಧ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತಾ ವ್ಯವಸ್ಥೆ ಜಾರಿಗೆ ತರಲು ತೀರ್ಮಾನಿಸಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!