
ಹೈಕೋರ್ಟ್ ಷರತ್ತುಗಳೇನು?
1 ಲಕ್ಷ ರೂಪಾಯಿ ಬಾಂಡ್ ನೀಡಬೇಕು. ಪ್ರತಿಭಟನೆ ಶಾಂತಿಯುತವಾಗಿರಬೇಕು ಹಾಗೂ ಸಂಪೂರ್ಣ ಚಿತ್ರೀಕರಣ ಮಾಡಬೇಕು. ಶಾಂತಿಭಂಗವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಬಾರದು. ಅಹಿತಕರ ಘಟನೆಯಾದರೆ ಅರ್ಜಿದಾರರನ್ನೇ ಹೊಣೆ ಮಾಡಲಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.
ಸಂಜೆ 3.30 ರಿಂದ ಪ್ರತಿಭಟನೆ ನಡೆಸಲು ಅವಕಾಶ ನೀಡಲು ಸೂಚನೆ ಮೈಸೂರಿನ ಪೊಲೀಸ್ ಆಯುಕ್ತರಿಗೆ ನ್ಯಾ.ಆರ್. ದೇವದಾಸ್ ಅವರಿದ್ದ ಪೀಠ ಸೂಚನೆ ನೀಡಿದೆ.
40 ಸಾವಿರ ಕೋಟಿ ಸಾಲದ ಹೊರೆ ಹೊರಿಸಿದ್ದಾರೆ!
ಸರ್ಕಾರದ ಪರ ವಕೀಲರ ವಾದ?
ಪ್ರತಿಭಟನೆಗೆ ಅವಕಾಶ ನೀಡಿದರೆ ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಬಹುದು. 8 ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ, 9 ಮಂದಿ ಪೊಲೀಸರಿಗೆ ಗಾಯವಾಗಿದೆ. ಬೇರೆ ಸಂಘಟನೆಗಳು ಧರಣಿ ನಡೆಸಲು ಅನುಮತಿ ಕೋರಿದ್ದರು, ನೀಡಿಲ್ಲ. ಸೂಕ್ಷ್ಮತೆ ಪರಿಗಣಿಸಿ ಪ್ರತಿಭಟನೆ ನಿರ್ಬಂಧಿಸಿ ನಿಷೇಧಾಜ್ಞೆ ಹೇರಲಾಗಿದೆ ಎಂದು ಸರ್ಕಾರದ ಪರ ಹೆಚ್ಚುವರಿ ಎಜಿ ಭಾನು ಪ್ರಕಾಶ್ ಹೈಕೋರ್ಟ್ಗೆ ತಿಳಿಸಿದರು. ಜತೆಗೆ, ಫುಟ್ಬಾಲ್ ಮೈದಾನ, ಮಹಾರಾಜ ಕಾಲೇಜ್ ಗ್ರೌಂಡ್ನಲ್ಲಿ ಅವಕಾಶ ನೀಡಬಹುದು, ಆದರೆ 300ಕ್ಕಿಂತ ಹೆಚ್ಚಿನ ಜನರಿಗೆ ಅವಕಾಶ ನೀಡದಂತೆ ಮನವಿ ಮಾಡಿದರು.
ಅರ್ಜಿದಾರರ ವಾದ?
ರಾಷ್ಟ್ರೀಯ ಸುರಕ್ಷಾ ಜನಾಂದೋಲನ ಸಮಿತಿಯ ರಿಟ್ ಅರ್ಜಿ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ಪ್ರತಿಭಟನೆಗೆ ಅನುಮತಿ ನೀಡಲು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಏನಾದರೂ ಅಹಿತಕರ ಘಟನೆ ನಡೆದರೆ ಯಾರು ಹೊಣೆ? ರಸ್ತೆ ಬಿಟ್ಟು ಬೇರೆ ಮೈದಾನದಲ್ಲಿ ಪ್ರತಿಭಟನೆ ನಡೆಸಿದರೆ ಪರಿಗಣಿಸುವುದಾಗಿ ತಿಳಿಸಿತು. ನಂತರ ಸೂಕ್ತ ಸ್ಥಳ ತಿಳಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಕೆಲಕಾಲ ಮುಂದೂಡಿತು. ನಂತರ ಸರ್ಕಾರದ ಪರ ವಕೀಲರ ವಾದ ಆಲಿಸಿ, ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ ನೀಡಿತು.





