ಮೈಸೂರಿನ ಫುಟ್ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದ ಹೈಕೋರ್ಟ್.

ಮೈಸೂರು, ಫೆಬ್ರವರಿ 24: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ ಸಂಬಂಧ ಮೈಸೂರಿನ ಫುಟ್ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಪ್ರತಿಭಟನೆಗೆ ಅವಕಾಶ ಕೋರಿ ರಾಷ್ಟ್ರೀಯ ಸುರಕ್ಷಾ ಜನಾಂದೋಲನ ಸಮಿತಿ ಪೊಲೀಸರಿಗೆ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸಮಿತಿಯು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ಪ್ರತಿಭಟನೆಗೆ ಅವಕಾಶ ನೀಡುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ. ಜತೆಗೆ, 1 ಲಕ್ಷ ರೂಪಾಯಿ ಬಾಂಡ್ ನೀಡಲು ಆಯೋಜಕರಿಗೆ ನಿರ್ದೇಶನ ನೀಡಿದೆ.

ಹೈಕೋರ್ಟ್ ಷರತ್ತುಗಳೇನು?
1 ಲಕ್ಷ ರೂಪಾಯಿ ಬಾಂಡ್ ನೀಡಬೇಕು. ಪ್ರತಿಭಟನೆ ಶಾಂತಿಯುತವಾಗಿರಬೇಕು ಹಾಗೂ ಸಂಪೂರ್ಣ ಚಿತ್ರೀಕರಣ ಮಾಡಬೇಕು. ಶಾಂತಿಭಂಗವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಬಾರದು. ಅಹಿತಕರ ಘಟನೆಯಾದರೆ ಅರ್ಜಿದಾರರನ್ನೇ ಹೊಣೆ ಮಾಡಲಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.
ಸಂಜೆ 3.30 ರಿಂದ ಪ್ರತಿಭಟನೆ ನಡೆಸಲು ಅವಕಾಶ ನೀಡಲು ಸೂಚನೆ ಮೈಸೂರಿನ ಪೊಲೀಸ್ ಆಯುಕ್ತರಿಗೆ ನ್ಯಾ.ಆರ್. ದೇವದಾಸ್ ಅವರಿದ್ದ ಪೀಠ ಸೂಚನೆ ನೀಡಿದೆ.
40 ಸಾವಿರ ಕೋಟಿ ಸಾಲದ ಹೊರೆ ಹೊರಿಸಿದ್ದಾರೆ!
ಸರ್ಕಾರದ ಪರ ವಕೀಲರ ವಾದ?
ಪ್ರತಿಭಟನೆಗೆ ಅವಕಾಶ ನೀಡಿದರೆ ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಬಹುದು. 8 ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ, 9 ಮಂದಿ ಪೊಲೀಸರಿಗೆ ಗಾಯವಾಗಿದೆ. ಬೇರೆ ಸಂಘಟನೆಗಳು ಧರಣಿ ನಡೆಸಲು ಅನುಮತಿ ಕೋರಿದ್ದರು, ನೀಡಿಲ್ಲ. ಸೂಕ್ಷ್ಮತೆ ಪರಿಗಣಿಸಿ ಪ್ರತಿಭಟನೆ ನಿರ್ಬಂಧಿಸಿ ನಿಷೇಧಾಜ್ಞೆ ಹೇರಲಾಗಿದೆ ಎಂದು ಸರ್ಕಾರದ ಪರ ಹೆಚ್ಚುವರಿ ಎಜಿ ಭಾನು ಪ್ರಕಾಶ್ ಹೈಕೋರ್ಟ್ಗೆ ತಿಳಿಸಿದರು. ಜತೆಗೆ, ಫುಟ್ಬಾಲ್ ಮೈದಾನ, ಮಹಾರಾಜ ಕಾಲೇಜ್ ಗ್ರೌಂಡ್ನಲ್ಲಿ ಅವಕಾಶ ನೀಡಬಹುದು, ಆದರೆ 300ಕ್ಕಿಂತ ಹೆಚ್ಚಿನ ಜನರಿಗೆ ಅವಕಾಶ ನೀಡದಂತೆ ಮನವಿ ಮಾಡಿದರು.
ಅರ್ಜಿದಾರರ ವಾದ?
ರಾಷ್ಟ್ರೀಯ ಸುರಕ್ಷಾ ಜನಾಂದೋಲನ ಸಮಿತಿಯ ರಿಟ್ ಅರ್ಜಿ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ಪ್ರತಿಭಟನೆಗೆ ಅನುಮತಿ ನೀಡಲು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಏನಾದರೂ ಅಹಿತಕರ ಘಟನೆ ನಡೆದರೆ ಯಾರು ಹೊಣೆ? ರಸ್ತೆ ಬಿಟ್ಟು ಬೇರೆ ಮೈದಾನದಲ್ಲಿ ಪ್ರತಿಭಟನೆ ನಡೆಸಿದರೆ ಪರಿಗಣಿಸುವುದಾಗಿ ತಿಳಿಸಿತು. ನಂತರ ಸೂಕ್ತ ಸ್ಥಳ ತಿಳಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಕೆಲಕಾಲ ಮುಂದೂಡಿತು. ನಂತರ ಸರ್ಕಾರದ ಪರ ವಕೀಲರ ವಾದ ಆಲಿಸಿ, ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ ನೀಡಿತು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!