ಮೈಸೂರು ಜಿಲ್ಲೆಯಲ್ಲಿ ಹಕ್ಕಿಜ್ವರಕ್ಕೆ ತೀವ್ರ ಕಟ್ಟೆಚ್ಚರ.

ಮೈಸೂರು :- ರಾಜ್ಯದ ವಿವಿಧೆಡೆ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಚ್ಚಿ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಇದು ವರೆಗೂ ಯಾವುದೇ ಪ್ರಕರಣ ವರದಿಯಾಗಿ ಲ್ಲದೇ ಇದ್ದರೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ
ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ, ಪಶು ಸಂಗೋಪನಾ ಇಲಾಖೆ ಹಕ್ಕಿಜ್ವರ ಹರ ಡುವಿಕೆ ತಡೆಗೆ ಸೂಕ್ತ ಕ್ರಮ ಕೈಗೊಂಡಿದೆ. ಪ್ರತಿ ವರ್ಷದಂತೆ ಕೇರಳದಲ್ಲಿ ಹಕ್ಕಿಜ್ವರ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಗಡಿ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್‌ ಪೋಸ್ಟ್‌ನಲ್ಲಿ ಕೋಳಿ ಸಾಗಾಣಿಕೆ ವಾಹನಗಳ ತಪಾ ಸಣೆ ನಡೆಸಲಾಗುತ್ತಿದೆ. ಈಗಾಗಲೇ ಪಶು ಸಂಗೋಪನಾ ಇಲಾಖೆ ಜಾಗೃತ ತಂಡ ರಚಿಸಿದ್ದು, ಕೋಳಿ ಸಾಕಣೆದಾರರಿಗೆ ಅರಿವು ಮೂಡಿಸುತ್ತಿದೆ. ಎಲ್ಲಾ ಕೋಳಿ ಸಾಕಣೆ ಕೇಂದ್ರಗಳು, ರೈತರ ಮನೆಗಳು, ಗ್ರಾಮಗಳಿಗೆ ಭೇಟಿ ನೀಡಿ ಕರಪತ್ರ ಹಂಚಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಾಗೃತಿ ಮೂಡಿಸಲಾಗುತ್ತಿದೆ.


ಯಾವುದೇ ಪಕ್ಷಿ ಅಥವಾ ಕೋಳಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿರು ವುದು ಗಮನಕ್ಕೆ ಬಂದರೆ ಪಶುಸಂಗೋ ಪನಾ ಇಲಾಖೆಯ ಗಮನಕ್ಕೆ ತರುವಂತೆ ರೈತರಿಗೆ ಮಾಹಿತಿ ನೀಡಲಾಗುತ್ತಿದೆ. ಕೋಳಿ ಸಾಕಣೆ ಕೇಂದ್ರ ಮತ್ತು ಮಾಂಸ ಸಂಸ್ಕ ರಣೆ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಹಕ್ಕಿಜ್ವರದ ಸೋಂಕು ತಗಲುವ ಸಾಧ್ಯತೆ ಇರುವುದರಿಂದ ಜಾಗೃತರಾಗಿರುವಂತೆ ತಿಳಿಸಲಾಗುತ್ತಿದೆ. ಕೋಳಿ ಸಾಗಣೆ ಮಾಡುವ
ವಾಹನಗಳಿಗೆ ಔಷಧಿ ಸಿಂಪಡಿಸಿ ಶುಚಿಗೊಳಿಸಲು ಸೂಚನೆ ನೀಡಲಾಗಿದೆ.
ರೋಗದ ಲಕ್ಷಣಗಳು: ಮನುಷ್ಯರಲ್ಲಿ ಸಾಮಾನ್ಯ ಜ್ವರದ ಲಕ್ಷಣ ಕಾಣಿಸಿಕೊಳ್ಳುತ್ತವೆ. ತೀವ್ರ ಜ್ವರ, ಭೇದಿ, ಹೊಟ್ಟೆನೋವು, ಮೂಗು, ವಸಡಿನಲ್ಲಿ ರಕ್ತ ಸ್ರಾವ, ಚಳಿಯ ಅನುಭವ, ತಲೆ ನೋವು, ಮೈ-ಕೈ ನೋವು, ಕೆಮ್ಮು, ಉಸಿರಾಟ ತೊಂದರೆ, ಗಂಟಲು ನೋವು, ಕೆಂಗಣ್ಣು ಬಾಧಿಸುತ್ತದೆ. ಈ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು.
ಕೋಳಿಗಳಲ್ಲಿ ಸೋಂಕಿನ ಲಕ್ಷಣಗಳು ತಕ್ಷಣಕ್ಕೆ ಕಾಣಿಸಿಕೊಳ್ಳುವುದಿಲ್ಲ. ಅವು ಬಹು ಬೇಗ ಹರಡುವುದರಿಂದ ರೋಗ ಪತ್ತೆ ಕಷ್ಟ ಸಾಮಾನ್ಯವಾಗಿ ಸೋಂಕಿತ ಕೋಳಿಗಳು ಆಹಾರ ತಿನ್ನುವುದಿಲ್ಲ. ಮೊಟ್ಟೆ ಉತ್ಪಾದನೆ ಕಡಿಮೆಯಾಗುತ್ತದೆ. ಹೆಚ್ಚು ಓಡಾಡು ವುದಿಲ್ಲ. ಕಣ್ಣುಗಳು ತೇವಗೊಂಡಿರುತ್ತವೆ. ರೆಕ್ಕೆಗಳು ಕೆದರಿರುತ್ತವೆ. ತಲೆ ಭಾಗ ಊದಿ ಕೊಳ್ಳುತ್ತದೆ. ಕಾಲಿನ ಚರ್ಮದ ಅಡಿಯಲ್ಲಿ ರಕ್ತಸ್ರಾವವೂ ಕಾಣಿಸಿಕೊಳ್ಳಬಹುದು. ದಿಢೀರ್ ಸಾವು ಸಂಭವಿಸುತ್ತದೆ.


ಹಕ್ಕಿ ಜ್ವರ ಹೇಗೆ ಹರಡುತ್ತದೆ: ಹಕ್ಕಿ ಜ್ವರದ ವೈರಸ್ ಪಕ್ಷಿಗಳಿಂದ ಪಕ್ಷಿಗಳಿಗೆ ಹರಡುತ್ತದೆ. ಪಕ್ಷಿಗಳು ವಲಸೆ ಹೋದಾಗ, ಗುಂಪಿನಲ್ಲಿ ಸೋಂಕಿತ ಪಕ್ಷಿ ಇದ್ದರೆ ಹೋದ ಸ್ಥಳದಲ್ಲಿರುವ ಎಲ್ಲಾ ಪಕ್ಷಿಗಳಿಗೂ ಸುಲಭವಾಗಿ ಹರಡುತ್ತದೆ. ಸೋಂಕಿತ ಕೋಳಿ ಅಥವಾ ಪಕ್ಷಿಗಳೊಂದಿಗೆ ನೇರ ಸಂಪರ್ಕಕ್ಕೆ ಬಂದ ಜನರು ಮತ್ತು ಪ್ರಾಣಿಗಳಿಗೂ ಸೋಂಕು ಹರಡುವ ಸಾಧ್ಯತೆ ಇದೆ. ಈ ವೈರಸ್ ತೇವ ಅಥವಾ ಒಣಗಿದ ಗೊಬ್ಬರದಲ್ಲಿ 8 ವಾರಗಳ ವರೆಗೂ ಜೀವಿಸುವ ಸಾಮರ್ಥ್ಯ ಹೊಂದಿದೆ. ಸೋಂಕಿತ ಪಕ್ಷಿ, ಪ್ರಾಣಿಗಳ ನೇರ ಸಂಪರ್ಕಕ್ಕೆ ಬಂದರೆ, ಕೈಯನ್ನು ಸಾಬೂನಿ ನಿಂದ ತೊಳೆದು ಸ್ವಚ್ಛಗೊಳಿಸುವುದರ ಮೂಲಕ ಈ ವೈರಸ್ ಮನುಷ್ಯನಿಗೆ ಹರಡುವುದನ್ನು ತಡೆಯಬಹುದು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು