ಮೈಸೂರು ಹುಡುಗರ Reels ಗೆ ಫಿದಾ ಆದ ಧ್ರುವ, ಪ್ರೇಮ್

ಧ್ರುವ ಸರ್ಜಾ ಹಾಗೂ ಪ್ರೇಮ್ ಕಾಂಬಿನೇಷನ್ನಲ್ಲಿ ‘ಕೆಡಿ’ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಪ್ರೇಮ್ ಸಿನಿಮಾಗಳಲ್ಲಿ ಹೆಚ್ಚು ಹೈಲೈಟ್ ಆಗೋದು ಹಾಡುಗಳು. 2024ರ ಅಂತ್ಯದಲ್ಲಿ ‘ಕೆಡಿ’ ಚಿತ್ರದ ‘ಶಿವ ಶಿವ..’ ಹಾಡನ್ನು ರಿಲೀಸ್ ಮಾಡಲಾಯಿತು. ಈ ಹಾಡು ಕೇಳುಗರಿಗೆ ಇಷ್ಟ ಆಗಿದೆ. ಈ ಹಾಡಿಗೆ ಸಾಕಷ್ಟು ಮಂದಿ ರೀಲ್ಸ್ ಮಾಡುತ್ತಿದ್ದಾರೆ. ಈಗ ಮೈಸೂರಿನ ಹುಡುಗರು ಮಾಡಿದ ರೀಲ್ಸ್ ನಿರ್ದೇಶಕ ಪ್ರೇಮ್ ಹಾಗೂ ನಟ ಧ್ರುವ ಅವರಿಗೆ ಸಖತ್ ಇಷ್ಟ ಆಗಿದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.

ಮೈಸೂರಿನವರಾದ ಸಿದ್ದಾರ್ಥ್, ಅಭಿರಥ, ಹರ್ಷ, ಮಂಜು, ಸಂಜಯ್ ‘ಶಿವ ಶಿವ..’ ಹಾಡಿಗೆ ರೀಲ್ಸ್ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಈ ವಿಡಿಯೋನ ಹಂಚಿಕೊಳ್ಳಲಾಗಿದ್ದು, ಅದು ಸಖತ್ ವೈರಲ್ ಆಗಿದೆ. ಈ ಹಾಡು 45 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಈ ರೀಲ್ಸ್ನ ಧ್ರುವ ಹಾಗೂ ಪ್ರೇಮ್ ಮೆಚ್ಚಿಕೊಂಡು ಹೊಗಳಿದ್ದಾರೆ.
ಈ ರೀಲ್ಸ್ಗೆ ಕಮೆಂಟ್ ಮಾಡಿರೋ ಧ್ರುವ ಸರ್ಜಾ, ‘ಫೆಂಟಾಸ್ಟಿಕ್, ಧನ್ಯವಾದಗಳು, ಜೈ ಹನುಮಾನ್’ ಎಂದಿದ್ದಾರೆ. ರೀಷ್ಮಾ ನಾಣಯ್ಯ ಅವರು ‘ಬೆಂಕಿ’ ಎಂದು ಕಮೆಂಟ್ ಮಾಡಿದ್ದಾರೆ. ಈ ರೀಲ್ಸ್ಗೆ ಈ ರೀತಿಯ ಹಲವು ಕಮೆಂಟ್ಗಳು ಬಂದಿವೆ. ಇನ್ನು ಪ್ರೇಮ್ ಅವರು ಇವರಿಗೆ ದೂರವಾಣಿ ಕರೆ ಮಾಡಿ ಭೇಟಿ ಮಾಡುವ ಆಶಯ ಹೊರಹಾಕಿದ್ದಾರೆ.

‘ನಿಮ್ಮ ವಿಡಿಯೋ ನೋಡಿದೆ. ಸಖತ್ ಆಗಿ ಮಾಡಿದ್ದೀರಾ. ಇನ್ನು ಕೆಲವೇ ದಿನಗಳಲ್ಲಿ ಕಾಲ್ ಮಾಡ್ತೀನಿ. ಭೇಟಿ ಮಾಡೋಣ. ವಿಡಿಯೋ ಉತ್ತಮವಾಗಿದೆ, ಧನ್ಯವಾದಗಳು’ ಎಂದು ಪ್ರೇಮ್ ಅವರು ರೀಲ್ಸ್ ಮಾಡಿದವರ ಜೊತೆ ಮಾತನಾಡಿದ್ದಾರೆ. ಅವರ ಮಾತನ್ನು ಕೇಳಿ ಸಖತ್ ಖುಷಿ ಆಗಿದೆ. ಆ ವಿಡಿಯೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಪ್ರೇಮ್ ಅವರ ನಿರ್ದೇಶನದಲ್ಲಿ ‘ಕೆಡಿ’ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದಲ್ಲಿ ಸಂಜಯ್ ದತ್, ಶಿಲ್ಪಾ ಶೆಟ್ಟಿ ಕೂಡ ನಟಿಸಿದ್ದಾರೆ. ‘ಶಿವ ಶಿವ..’ ಹಾಡಿಗೆ ಪ್ರೇಮ್ ಹಾಗೂ ಖೈಲಾಶ್ ಖೇರ್ ಧ್ವನಿ ಆಗಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಈ ವರ್ಷ ಸಿನಿಮಾ ರಿಲೀಸ್ ಆಗಲಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!