ಯಡಿಯೂರಪ್ಪನವರು ಮಹದಾಯಿ ಯೋಜನೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಿಲ್ಲ; ಸಿಎಂ ವ್ಯಂಗ್ಯ.

ಮನಮೋಹನ್ ಸಿಂಗ್ ಅವಧಿಯಲ್ಲಿ ಕಚ್ಛಾತೈಲದ ಬೆಲೆ ಹೆಚ್ಚಿದ್ದರೂ ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಇತ್ತು: ಈಗ ಕಚ್ಛಾ ತೈಲ ಬೆಲೆ ಕಡಿಮೆ ಇದ್ದರೂ ಮೋದಿ ಡೀಸೆಲ್-ಪೆಟ್ರೋಲ್ ಬೆಲೆ ವಿಪರೀತ ಹೆಚ್ಚಿಸಿದ್ದಾರೆ.
ಗೃಹಲಕ್ಷ್ಮಿ ಹಣ ಆರು ತಿಂಗಳಿಂದ ಬಾಕಿ ಇದೆ ಎಂದು ವಿರೋಧಪಕ್ಷದ ನಾಯಕರು ತಿಳಿಸಿದ್ದಾರೆ. ಇದು ಅಪ್ಪಟ ಸುಳ್ಳು. ಆದರೆ ಗೃಹಲಕ್ಷ್ಮಿ ಯೋಜನೆಯ ಕೇವಲ ಜನವರಿಯಿಂದ ಉಳಿದಿದ್ದು, ಅದನ್ನೂ ಪಾವತಿಸಲಾಗುವುದು. ಶಿಕ್ಷಣ ಇಲಾಖೆಯಡಿ 11400 ಶಿಕ್ಷಕರ ಕೊರತೆ ಇದೆ. 6400 ಶಾಲೆಗಳಲ್ಲಿ ಏಕ ಶಿಕ್ಷಕರು ಇದ್ದಾರೆ. ಬಿಜೆಪಿಯು 4 ವರ್ಷದಲ್ಲಿ ಎಷ್ಟು ಜನ ಶಿಕ್ಷಕರ ನೇಮಕಾತಿ ಮಾಡಿದ್ದಾರೆಂದು ತಿಳಿಸಲಿ ಎಂದು ಸವಾಲು ಹಾಕಿದರು. ಎಲ್ಲಾ ದುರ್ಬಲವರ್ಗದವರನ್ನೂ ನಾನು ಪ್ರೀತಿಸುತ್ತೇನೆ. ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಆದರೆ ವಿವಿ.ಗಳನ್ನು ಮುಚ್ಚುವುದಿಲ್ಲ. ಆದರೆ ಸಚಿವಸಂಪುಟ ಉಪಸಮಿತಿಯ ವರದಿ ಬಂದ ನಂತರ ವಿವಿಗಳನ್ನು ಮುಂದುವರೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು.

ರೈತರ ಆತ್ಮಹತ್ಯೆಗಳು ಹೆಚ್ಚಿರುವ ಬಗ್ಗೆ ಕೇಳಲಾಗಿದೆ. ಆದರೆ ವಾಸ್ತವಿಕವಾಗಿ 40% ವರೆಗೆ ಆತ್ಮಹತ್ಯೆಗಳು ಕಡಿಮೆಯಾಗಿದೆ. ಫೆಬ್ರವರಿ ಅಂತ್ಯದವರಗೆ 644 ಆಗಿವೆ. ಆತ್ಮಹತ್ಯೆಗಳು ಇಳಿಮುಖವಾಗಿದೆ. ಬೆಲೆ ಏರಿಕೆಯನ್ನು ಪ್ರಶ್ನಿಸಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಕಚ್ಚಾ ತೈಲದ ಬೆಲೆ 108-125 ಡಾಲರ್ ಇತ್ತು,, ಆಗ ಡೀಸೆಲ್ ಬೆಲೆ 46.59 ಇತ್ತು, ಮೋದಿಯವರ ಕಾಲದಲ್ಲಿ ಕಚ್ಚಾ ತೈಲದ ಬೆಲೆ 73-76 ಡಾಲರ್ ಇದೆ, ಆದರೆ ಡೀಸೆಲ್ ಬೆಲೆ 90 ರೂ. ಆಗಿದೆ. ಅರ್ದದಷ್ಟು ಬೆಲೆ ಹೆಚ್ಚಾಗಿದೆ. ನಾವು ಎಲ್ಲಾ ಬಾಬ್ತುಗಳಿಂದ 7 ರಿಂದ 8 ಸಾವಿರ ರೂ. ಹೆಚ್ಚಿಸಿದ್ದೇವೆ . ಆದರೆ ಗ್ಯಾರಂಟಿಗಳಿಗೆ 51 ಸಾವಿರ ಕೋಟಿ ರೂ. ನೀಡಿದ್ದೇವೆ , ನೀರಾವರಿಗೆ ಈ ಬಾರಿ ಸಣ್ಣ ನೀರಾವರಿಗೆ 1000 ಕೋಟಿ ರೂ. ಹೆಚ್ಚಿಸಲಾಗಿದೆ ಎಂದರು.
ಯಡಿಯೂರಪ್ಪನವರು ಮಹದಾಯಿ ಯೋಜನೆ ಅನುಷ್ಠಾನ ಮಾಡುವುದಾಗಿ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದಿದ್ದರು. ಆದರೆ ಅವರಿಂದ ಯೋಜನೆ ಅನುಷ್ಠಾನಗೊಳಿಸಲು ಸಾಧ್ಯವಾಗಲಿಲ್ಲ.

ಹಿಂದೆ 2013ರಲ್ಲಿ ಕೂಡಲಸಂಗಮದಲ್ಲಿ ಪ್ರತಿ ವರ್ಷ 10 ಸಾವಿರ ಕೋಟಿಗಳನ್ನು ನೀರಾವರಿಗೆ ಇಡುತ್ತೇವೆ , 56000 ಕೋಟಿ ರೂ.ಗಳನ್ನು ನೀರಾವರಿಗೆ ಖರ್ಚು ಮಾಡಿದ್ದೇವೆ. ಪ್ರತಿ ವರ್ಷ 1.50 ಲಕ್ಷ ಕೋಟಿ ಖರ್ಚು ಮಾಡುತ್ತೇವೆ. ಎಂದಿದ್ದ ಬಿಜೆಪಿಯವರು ನಾಲ್ಕು ವರ್ಷ ಪ್ರತಿ ವರ್ಷ ಕೇವಲ ಸರಾಸರಿ 16 ಸಾವಿರ ಕೋಟಿ ಖರ್ಚು ಮಾಡಿದ್ದೀರಿ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!