ಯಮನ ರೀತಿಯಲ್ಲಿ ಫುಟ್ಪಾತ್ ಗೆ ವಿಸಿಟ್ ಕೊಟ್ಟ ಸಿಂಹ….

ಸಾಮಾಜಿಕ ಜಾಲತಾಣದಲ್ಲಿ ದಿನನಿತ್ಯ ಒಂದಲ್ಲ ಒಂದು ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಕೆಲವು ವಿಡಿಯೋಗಳನ್ನು ನೋಡಿದಾಗ ಎದೆಯಲ್ಲಿ ನಡುಕ ಉಂಟಾಗುತ್ತದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪುಟ್‌ಪಾತ್‌ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬನ ಪಕ್ಕದಲ್ಲಿ ಸಿಂಹವೊಂದು ನಡೆದುಕೊಂಡು ಹೋಗಿದ್ದು ಈ ದೃಶ್ಯವು ಎಂತಹವರ ಎದೆಯನ್ನು ಝಲ್ ಎನ್ನುವಂತೆ ಮಾಡುತ್ತದೆ.. ಈ ವಿಡಿಯೋಗೆ ನೆಟ್ಟಿಗರು ಪ್ರತಿಕ್ರಿಯೆಗಳನ್ನು ನೀಡಿದ್ದು, ಈ ವ್ಯಕ್ತಿಯ ಅದೃಷ್ಟ ಚೆನ್ನಾಗಿದ್ದೀರಬೇಕು ಎಂದು ಇನ್ನು ನಾನಾ ರೀತಿಯ ವಿಭಿನ್ನ ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಮನುಷ್ಯನ ಸ್ವಾರ್ಥದಿಂದ ಕಾಡು ಸಂಪೂರ್ಣವಾಗಿ ನಾಶವಾಗಿದೆ. ಈ ಕಾಡಿನ ವಿನಾಶದಿಂದ ಅರಣ್ಯದಲ್ಲಿನ ಪ್ರಾಣಿಗಳೆಲ್ಲಾ ಆಹಾರವನ್ನರಸುತ್ತಾ ನಾಡಿನ ಕಡೆಗೆ ಬರುವುದು ಹೊಸದೇನಲ್ಲ. ಹೀಗೆ ಆಹಾರವನ್ನರಸುತ್ತಾ ಬರುವ ಈ ಪ್ರಾಣಿಗಳು ಜನರು, ಶ್ವಾನ ಮತ್ತು ದನಕರುಗಳ ಮೇಲೆ ದಾಳಿ ಮಾಡುತ್ತವೆ. ಆದರೆ ಇದೀಗ ಎದೆ ಝಲ್ ಎನಿಸುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪುಟ್‌ಪಾತ್‌ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬನ ಪಕ್ಕದಲ್ಲೇ ರಾಜಾರೋಷವಾಗಿ ಸಿಂಹಿಣಿಯೊಂದು ನಡೆದುಕೊಂಡು ಹೋಗಿದೆ. ಈ ಬಗ್ಗೆ ಅರಿವಿಲ್ಲದೇ ವ್ಯಕ್ತಿಯೂ ಗಾಢ ನಿದ್ರೆಯಲ್ಲಿ ಮುಳುಗಿದ್ದಾನೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈ ದೃಶ್ಯ ಕಂಡು ಬೆಚ್ಚಿ ಬಿದ್ದಿದ್ದಾರೆ.

ವೈರಲ್ ಆಗಿರುವ ಈ ವಿಡಿಯೋಗೆ ಹಲವಾರು ಬಳಕೆದಾರರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ. ಒಬ್ಬ ಬಳಕೆದಾರರು, ಇದು ಎಐನಿಂದ ರಚಿಸಲಾದ ವಿಡಿಯೋ ಎಂದಿದ್ದಾರೆ. ಮತ್ತೊಬ್ಬರು, ಆ ವ್ಯಕ್ತಿಯೂ ಈ ವಿಡಿಯೋ ನೋಡಿದರೆ ಇನ್ನು ಜನ್ಮದಲ್ಲಿಯೂ ಈ ಪುಟ್ ಪಾತ್ ನಲ್ಲಿ ಮಲಗುವ ಸಾಹಸಕ್ಕೆ ಕೈ ಹಾಕಲ್ಲ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ. ಇನ್ನೊಬ್ಬ ಬಳಕೆದಾರ, ಈ ಸ್ಥಳ ಗುಜರಾತ್ ಆಗಿರಬೇಕು, ಅಲ್ಲಿ ಇಂತಹ ದೃಶ್ಯಗಳು ಆಗಾಗ ಕಾಣಸಿಗುತ್ತದೆ ಎಂದಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು