ರಣವೀರ್ ಸಿಂಗ್ ಕನ್ನಡದಲ್ಲಿ ದೀಪಿಕಾಗೆ ಪ್ರಪೋಸ್ !

ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರ ಪ್ರೇಮಕಥೆ, ವಿವಾಹ ಮತ್ತು ಮಗುವಿನ ಬಗ್ಗೆ ಈ ಸ್ಟೋರಿಯಲ್ಲಿ ಚರ್ಚೆ ಆಗುತ್ತಿದೆ. ರಣವೀರ್ ಅವರು ದೀಪಿಕಾಗೆ ಕನ್ನಡದಲ್ಲಿ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆಗಿದೆ. ಅವರ ಪ್ರೀತಿಯ ಆರಂಭ, ಮದುವೆ ಮತ್ತು ಈಗ ಮಗುವಿನ ಜನ್ಮದ ಸಂತೋಷದ ಕುರಿತು ವಿವರಗಳಿವೆ. ದೀಪಿಕಾ ಅವರ ಜನ್ಮದಿನದ ಸಂದರ್ಭದಲ್ಲಿ ಈ ವಿಡಿಯೋಗಳು ಮತ್ತೆ ವೈರಲ್ ಆಗಿವೆ.
ದೀಪಿಕಾ ಹಾಗೂ ರಣವೀರ್ ಪ್ರೀತಿಸಿ ವಿವಾಹ ಆದವರು. ಒಂದೇ ಸಿನಿಮಾದಲ್ಲಿ ನಟಿಸಿದ ಇವರಿಗೆ ಸೆಟ್ನಲ್ಲೇ ಪ್ರೀತಿ ಮೂಡಿತು. ರಣವೀರ್ ಸಿಂಗ್ ಹಾಗೂ ದೀಪಿಕಾ ಈಗ ಪಾಲಕರೂ ಹೌದು. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ದೀಪಿಕಾ ಕಳೆದ ವರ್ಷ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ರಣವೀರ್ ಹಾಗೂ ದೀಪಿಕಾ ಪ್ರೀತಿ ಶುರುವಾಗಿದ್ದು ದಶಕಗಳ ಹಿಂದೆ. ಈಗ ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ದೀಪಿಕಾ ಪಡುಕೋಣೆ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಈ ವೇಳೆ ಅವರ ಹಳೆಯ ವಿಡಿಯೋಗಳು ವೈರಲ್ ಆಗುತ್ತಿವೆ.
ದೀಪಿಕಾ ಪಡುಕೋಣೆ ಅವರು ಕರ್ನಾಟಕದವರು. ಅವರಿಗೆ ಕನ್ನಡ ಬರುತ್ತದೆ. ಬೆಂಗಳೂರಲ್ಲಿ ದೀಪಿಕಾ ಶಿಕ್ಷಣ ಪಡೆದಿದ್ದರು. ಅವರು ನಟಿಸಿದ ಮೊದಲ ಸಿನಿಮಾ ‘ಐಶ್ವರ್ಯಾ’ ಕನ್ನಡದ್ದು. ಅವರಿಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ ಇದೆ. ರಣವೀರ್ ಸಿಂಗ್ ಅವರದ್ದು ಪಂಜಾಬಿ ಕುಟುಂಬ. ಅವರು ಕೆಲವೊಮ್ಮೆ ಬೆಂಗಳೂರಿಗೆ ಬಂದ ಉದಾಹರಣೆ ಇದೆ. ಅವರಿಗೆ ಕನ್ನಡದ ಬರುವುದಿಲ್ಲ. ಅವರು ಈ ಮೊದಲು ಕನ್ನಡದಲ್ಲಿ ದೀಪಿಕಾಗೆ ಪ್ರಪೋಸ್ ಮಾಡಿದ್ದರು ಅನ್ನೋದು ವಿಶೇಷ.
ರಣವೀರ್ ಸಿಂಗ್ ಅವರು ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಾ ಇರುತ್ತಾರೆ. ಅದೇ ರೀತಿ ಅವರು ಅವಾರ್ಡ್ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿ ಯಶ್ ಸೇರಿದಂತೆ ಅನೇಕರು ಇದ್ದರು. ಈ ವೇಳೆ ಅವರ ಜೊತೆ ಇದ್ದಿದ್ದು, ಕನ್ನಡದ ಅಕುಲ್ ಬಾಲಾಜಿ. ಅವರು ಕನ್ನಡದ ಹಲವು ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಆ ಶೋನ ಅಕುಲ್ ನಡೆಸಿಕೊಡುತ್ತಾ ಇದ್ದರು. ಈ ವೇಳೆ ರಣವೀರ್ ಸಿಂಗ್ಗೆ ಕನ್ನಡದಲ್ಲಿ ಪ್ರಪೋಸ್ ಮಾಡೋದನ್ನು ಹೇಗೆ ಎಂದು ಹೇಳಿಕೊಟ್ಟರು ಅಕುಲ್.
‘ದೀಪಿಕಾ, ಓ ನನ್ನ ದೀಪಿಕಾ’ ಎಂದರು ಅಕುಲ್. ರಣವೀರ್ ಸಿಂಗ್ಗೆ ತಪ್ಪಾಗಿ ಏನಾದರೂ ಹೇಳಿಕೊಟ್ಟರೆ ಎಂಬ ಭಯ ಅತಿಯಾಗಿ ಕಾಡಿತ್ತು. ಈ ಕಾರಣದಿಂದಲೇ ‘ನನಗೆ ಮನೆಗೆ ಹೋಗಬೇಕು, ನಾನು ಇದನ್ನು’ ಎಂದರು ರಣವೀರ್ ಸಿಂಗ್. ಆಗ, ಅಕುಲ್ ಅವರು ತಪ್ಪಾಗಿ ಏನನ್ನೂ ಹೇಳಿಕೊಡಲ್ಲ ಎಂದು ಪ್ರಾಮಿಸ್ ಮಾಡಿದರು. ಆ ಬಳಿಕ ‘ದೀಪಿಕಾ, ಓ ನನ್ನ ದೀಪಿಕಾ, ನೀನೆ ನನ್ನ ಜೀವನದ ದೀಪ’ ಎಂದು ಅಕುಲ್ ಹೇಳಿಕೊಟ್ಟರು. ದೀಪ ಎನ್ನುತ್ತಿದ್ದಂತೆ ‘ಯು ಆರ್ ದಿ ಲೈಟ್ ಆಫ್ ಮೈ ಲೈಫ್’ ಎಂದರು
ರಣವೀರ್ ಸಿಂಗ್ ..

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!