ರಾಷ್ಟ್ರಧ್ವಜದ ರಂಗೋಲಿಯಲ್ಲಿ ಅಶೋಕ ಚಕ್ರದ ಬದಲು ಕರ್ನಾಟಕ ನಕ್ಷೆ : ಫೋಟೋ ವೈರಲ್!

ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ರಂಗೋಲಿಯನ್ನು ಬಿಡಿಸುವುದು ಸಾಮಾನ್ಯವಾಗಿದೆ. ಆದ್ರೆ ಇಲ್ಲೊಂದು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಬಿಡಿಸಿದ ರಂಗೋಲಿ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಹೌದು ಬೆಂಗಳೂರಿನ ಆರ್ವಿಐಟಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಅಲ್ಲಿನ ವಿದ್ಯಾರ್ಥಿಗಳು ತಾವು ಬಿಡಿಸಿದ ರಾಷ್ಟ್ರ ಧ್ವಜದ ರಂಗೋಲಿಯಲ್ಲಿ ಅಶೋಕ ಚಕ್ರದ ಬದಲಿಗೆ ಕರ್ನಾಟಕದ ನಕ್ಷೆಯನ್ನು ಬಿಡಿಸಿದ್ದು, ಈ ಕುರಿತ ಫೋಟೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

ರಾಷ್ಟ್ರ ಧ್ವಜದ ರಂಗೋಲಿಯ ಮಧ್ಯಭಾಗದಲ್ಲಿ ಅಶೋಕ ಚಕ್ರದ ಬದಲಿಗೆ ಕರ್ನಾಟಕದ ನಕ್ಷೆ ಬಿಡಿಸಿದ್ದಾರೆ. ಈ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಇದು ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿದಂತಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಈ ಪೋಸ್ಟ್ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದನ್ನು ಫ್ಲ್ಯಾಗ್ ಏರಿಯಾ ಆರ್ಟ್ ಎಂದು ಕರೆಯಲಾಗುತ್ತದೆ. ಇದರಲ್ಲಿ ಧ್ವಜದೊಳಗೆ ಭಾರತದ ಹೆಮ್ಮೆಯ ಸಾಧನೆಗಳ ವಿಷಯಗಳ ಚಿತ್ರವನ್ನು ಸಹ ಬಿಡಿಸಲಾಗುತ್ತದೆ. ಅದೇ ರೀತಿ ವಿದ್ಯಾರ್ಥಿಗಳು ಪ್ರೀತಿಯಿಂದ ಕರ್ನಾಟಕದ ನಕ್ಷೆ ಬಿಡಿಸಿದ್ದಾರೆ, ಇದನ್ನು ದೊಡ್ಡ ವಿಷಯ ಮಾಡುವ ಅಗತ್ಯವೇ ಇಲ್ಲʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಭಾರತ ಮತ್ತು ಕರ್ನಾಟಕದ ಧ್ವಜವನ್ನು ಸಂಯೋಜಿಸಿರುವ ರೀತಿ ಸುಂದರವಾಗಿದೆ. ಇದರಲ್ಲಿ ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿದ ವಿಷಯ ಏನೂ ಇಲ್ಲ, ದಯವಿಟ್ಟು ದ್ವೇಷ ಹರಡದಿರಿʼ ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಹೀಗೆ ಕೆಲವರು ಇದಕ್ಕೆ ಬೆಂಬಲ ನೀಡಿದರೆ, ಇನ್ನೂ ಕೆಲವರು ಇದು ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿದಂತಾಗಿದೆ ಎಂದು ಹೇಳಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!