ರಾಷ್ಟ್ರಪತಿಗೆ ‘ಪೂವರ್ ಲೇಡಿ’ ಎಂದ ; ಸೋನಿಯಾ ಗಾಂಧಿ ವಿರುದ್ಧ ಉತ್ತರ ಪ್ರದೇಶದಲ್ಲಿ ಪ್ರಕರಣ ದಾಖಲು!

ನವದೆಹಲಿ : ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಂಕಷ್ಟ ಎದುರಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ಪೂವರ್ ಲೇಡಿ’ ಎಂದು ಕರೆದಿದ್ದಕ್ಕಾಗಿ ಬಿಹಾರದ ಮುಜಾಫರ್ಪುರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಧೀರ್ ಓಜಾ ಎಂಬ ವಕೀಲರು ಶನಿವಾರ ಸಿಜಿಎಂ ನ್ಯಾಯಾಲಯದಲ್ಲಿ ಈ ದೂರು ನೀಡಿದ್ದಾರೆ. ನ್ಯಾಯಾಲಯ ಅದನ್ನು ಅಂಗೀಕರಿಸಿದ್ದು, ಫೆಬ್ರವರಿ 10 ರಂದು ಪ್ರಕರಣದ ವಿಚಾರಣೆ ನಿಗದಿಪಡಿಸಿದೆ. ಅರ್ಜಿದಾರರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಸಹ ಆರೋಪಿಗಳೆಂದು ಹೆಸರಿಸಿದ್ದಾರೆ ಮತ್ತು ಅವರ ವಿರುದ್ಧವೂ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ದ್ರೌಪದಿ ಮುರ್ಮು ಅವರನ್ನು ಸೋನಿಯಾ ಗಾಂಧಿ ಅವಮಾನಿಸಿದ್ದಾರೆ ಎಂದು ಅರ್ಜಿದಾರ ಸುಧೀರ್ ಹೇಳಿದ್ದಾರೆ. ಬಜೆಟ್ ಅಧಿವೇಶನದ ವೇಳೆ ರಾಷ್ಟ್ರಪತಿ ಭಾಷಣದ ನಂತರ ಸೋನಿಯಾ ಗಾಂಧಿ ಅವರು ನೀಡಿದ ಹೇಳಿಕೆ ಅತ್ಯಂತ ಆಕ್ಷೇಪಾರ್ಹವಾಗಿದೆ. ರಾಷ್ಟ್ರಪತಿ ಮಹಿಳೆಯಾಗಿದ್ದಾರೆ ಮತ್ತು ಬುಡಕಟ್ಟು ಸಮುದಾಯದಿಂದ ಬಂದವರು. ಅವರ ವಿರುದ್ಧ ಈ ಹೇಳಿಕೆ ಆಕ್ಷೇಪಾರ್ಹ ಎಂದು ಓಜಾ ಪ್ರತಿಪಾದಿಸಿದ್ದಾರೆ.
ಸೋನಿಯಾ ಗಾಂಧಿ ಹೇಳಿದ್ದೇನು?

ದ್ರೌಪದಿ ಮುರ್ಮು ಅವರ ಭಾಷಣದ ನಂತರ ಪತ್ರಕರ್ತರ ಬಳಿ ಪ್ರತಿಕ್ರಿಯಿಸಿದ ಸೋನಿಯಾ ಗಾಂಧಿ, ರಾಷ್ಟ್ರಪತಿಗಳ ಭಾಷಣ ಬೋರಿಂಗ್ ಆಗಿತ್ತು. ಭಾಷಣದ ಕೊನೆಯಲ್ಲಿ ‘ಪೂವರ್ ಲೇಡಿ’ ದಣಿದಿದ್ದರು ಎಂದಿದ್ದರು. ಸೋನಿಯಾ ಗಾಂಧಿ ಈ ಹೇಳಿಕೆ ನೀಡುವ ವೇಳೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಕೂಡ ಹಾಜರಿದ್ದರು. ಸೋನಿಯಾ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ದುರದೃಷ್ಟಕರ ಮತ್ತು ಅವಮಾನಕರ ಹೇಳಿಕೆ ಎಂದು ರಾಷ್ಟ್ರಪತಿ ಭವನ ಕೂಡ ಹೇಳಿದೆ.

ಕಾಂಗ್ರೆಸ್ ರಾಜಮನೆತನದ ದುರಹಂಕಾರ: ಮೋದಿ

ಸೋನಿಯಾ ಗಾಂಧಿಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಇಂದು ದೇಶವು ಮತ್ತೆ ಕಾಂಗ್ರೆಸ್ ರಾಜಮನೆತನದ ದುರಹಂಕಾರವನ್ನು ನೋಡಿದೆ ಎಂದು ಹೇಳಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನಲ್ಲಿ ಮಾತನಾಡಿದರು. ಅಭಿವೃದ್ಧಿ ಹೊಂದಿದ ಭಾರತದ ಸಾಧನೆಗಳು ಮತ್ತು ದೂರದೃಷ್ಟಿಯ ಬಗ್ಗೆ ದೇಶವಾಸಿಗಳಿಗೆ ತಿಳಿಸಿದರು. ಹಿಂದಿ ಅವರ ಮಾತೃಭಾಷೆಯಲ್ಲ, ಆದರೂ ಅವರು ಅತ್ಯುತ್ತಮ ಭಾಷಣ ಮಾಡಿದರು. ಆದರೆ ಕಾಂಗ್ರೆಸ್ನ ರಾಜಮನೆತನದವರು ಅವರನ್ನು ಅವಮಾನಿಸಿದರು ಎಂದು ಮೋದಿ ಹೇಳಿದ್ದಾರೆ. ಕಾಂಗ್ರೆಸ್ನವರು ರಾಷ್ಟ್ರಪತಿಗಳನ್ನು ಪೂವರ್ ಲೇಡಿ ಎಂದು ಕರೆದಿದ್ದಾರೆ. ದಣಿದವರು ಎಂದು ಜರೆದಿದ್ದಾರೆ. ಇದು ದೇಶದ ಆದಿವಾಸಿ ಸಹೋದರ ಸಹೋದರಿಯರಿಗೆ ಮಾಡಿದ ಅವಮಾನ ಎಂದು ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Posts

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

16 ದಾಖಲೆಗಳ ನೀಡಿದ್ರೂ ಸಿಗದ ಭಾರತೀಯ ಪೌರತ್ವ

ಗುವಾಹಟಿ ಹೈಕೋರ್ಟ್ ಇತ್ತೀಚೆಗೆ ವ್ಯಕ್ತಿಯೊಬ್ಬರ ಪೌರತ್ವ ಸಾಬೀತುಪಡಿಸಲು ಸಲ್ಲಿಸಿದ್ದ 16 ಪ್ರಮುಖ ದಾಖಲೆಗಳನ್ನು ತಿರಸ್ಕರಿಸಿದೆ. ಪ್ಯಾನ್, ವೋಟರ್ ಐಡಿ ಸೇರಿದಂತೆ ಹಲವು ದಾಖಲೆಗಳಲ್ಲಿನ ಲೋಪದೋಷಗಳಿಂದಾಗಿ ಅರ್ಜಿದಾರರನ್ನು ವಿದೇಶಿ ಎಂದು ಘೋಷಿಸಲಾಗಿದೆ. ಭಾರತೀಯ ಪೌರತ್ವ ಸಾಬೀತಿಗೆ ವ್ಯಕ್ತಿಯ ಮೇಲೆ ಇರುವ ಹೊಣೆಯ ಜೊತೆಗೆ,…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!