‘ರೂಟ್’ ಕಿತ್ತರೆ ರೂಟ್ ಕ್ಲಿಯರ್; ಭಾರತ ಸರಣಿ ಗೆಲ್ಲಬಹುದು..!

ಜೋ ರೂಟ್ ಟೆಸ್ಟ್ ಕ್ರಿಕೆಟ್​ನಲ್ಲಿ ಈವರೆಗೆ 153 ಪಂದ್ಯಗಳನ್ನಾಡಿದ್ದು, ಈ ವೇಳೆ 279 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಇದರ ನಡುವೆ 22612 ಎಸೆತಗಳನ್ನು ಎದುರಿಸಿರುವ ಜೋ ರೂಟ್ ಒಟ್ಟು 13006 ರನ್ ಕಲೆಹಾಕಿದ್ದಾರೆ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ರೂಟ್ 5ನೇ ಸ್ಥಾನದಲ್ಲಿದ್ದಾರೆ. ಜೋ ರೂಟ್ ಅವರನ್ನು ಸಾಧ್ಯವಾದಷ್ಟು ಬೇಗನೆ ಔಟ್ ಮಾಡಲೇಬೇಕು. ಏಕೆಂದರೆ ಇಂಡೊ-ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಇರುವುದು ರೂಟ್ ಹೆಸರಿನಲ್ಲಿ. ಬಲಗೈ ದಾಂಡಿಗ ಈಗಾಗಲೇ ಲೆಜೆಂಡ್ ಸುನಿಲ್ ಗವಾಸ್ಕರ್ ಹಾಗೂ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.

ಭಾರತದ ವಿರುದ್ಧ ಈವರೆಗೆ 30 ಟೆಸ್ಟ್ ಪಂದ್ಯಗಳನ್ನಾಡಿರುವ ಜೋ ರೂಟ್ 55 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಕಲೆಹಾಕಿರುವುದು ಬರೋಬ್ಬರಿ 2846 ರನ್​ಗಳು. ಅಂದರೆ ಪ್ರತಿ ಪಂದ್ಯದ ರನ್ ಸರಾಸರಿ ಬರೋಬ್ಬರಿ 58.08 ರನ್​ಗಳು. ಇದರ ನಡುವೆ 10 ಶತಕಗಳು ಹಾಗೂ 11 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಇಲ್ಲಿ ಗಮನಿಸಬೇಕಾದ ಮತ್ತೊಂದು ಮುಖ್ಯ ಅಂಶವೆಂದರೆ ಟೀಮ್ ಇಂಡಿಯಾ ವಿರುದ್ಧ ಜೋ ರೂಟ್ ಎದುರಿಸಿರುವ ಎಸೆತಗಳು. ಅಂದರೆ ಭಾರತದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರೂಟ್ ಈವರೆಗೆ 5171 ಎಸೆತಗಳನ್ನು ಎದುರಿಸಿದ್ದಾರೆ. ಅಂದರೆ ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯಲ್ಲಿ 5 ಸಾವಿರಕ್ಕಿಂತ ಹೆಚ್ಚು ಎಸೆತಗಳನ್ನು ಎದುರಿಸಿರುವುದು ಕೇವಲ 3 ಬ್ಯಾಟರ್​ಗಳು ಮಾತ್ರ.

ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಲೆಜೆಂಡ್ ಸುನಿಲ್ ಗವಾಸ್ಕರ್ (6245 ಬಾಲ್ಸ್) ಅಗ್ರಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ತಂಡದ ಮಾಜಿ ನಾಯಕ ಅಲೆಸ್ಟರ್ ಕುಕ್ (5374 ಬಾಲ್ಸ್) ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು ಈ ಶತಮಾನದಲ್ಲಿ ಟೀಮ್ ಇಂಡಿಯಾ ಬೌಲರ್​ಗಳನ್ನು ದಿಟ್ಟವಾಗಿ ಎದುರಿಸಿದ ಏಕೈಕ ಬ್ಯಾಟರ್ ಜೋ ರೂಟ್. ಇದಕ್ಕೆ ಸಾಕ್ಷಿ ಭಾರತದ ವಿರುದ್ಧ 5171 ಎಸೆತಗಳಲ್ಲಿ ಕ್ರೀಸ್ ಕಚ್ಚಿ ನಿಂತು 2846 ರನ್ ಕಲೆಹಾಕಿರುವುದು. ಹಾಗೆಯೇ ಟೀಮ್ ಇಂಡಿಯಾ ವಿರುದ್ಧ 55 ಟೆಸ್ಟ್ ಇನಿಂಗ್ಸ್ ಆಡಿರುವ ಜೋ ರೂಟ್ ಶೂನ್ಯಕ್ಕೆ ಔಟಾಗಿರುವುದು ಕೇವಲ ಒಂದು ಬಾರಿ ಎಂದರೆ ನಂಬಲೇಬೇಕು. ಹೀಗಾಗಿಯೇ ಈ ಬಾರಿಯ ಸರಣಿಯನ್ನು ಜೋ ರೂಟ್ vs ಟೀಮ್ ಇಂಡಿಯಾ ಬೌಲರ್ಸ್ ಎಂದು ಬಿಂಬಿಸಲಾಗುತ್ತಿದೆ. ಈ ಕದನದಲ್ಲಿ ಅಂತಿಮವಾಗಿ ಗೆಲ್ಲುವವರು ಯಾರೆಂಬುದನ್ನು ಕಾದು ನೋಡೋಣ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!