‘ರೂಟ್’ ಕಿತ್ತರೆ ರೂಟ್ ಕ್ಲಿಯರ್; ಭಾರತ ಸರಣಿ ಗೆಲ್ಲಬಹುದು..!

ಜೋ ರೂಟ್ ಟೆಸ್ಟ್ ಕ್ರಿಕೆಟ್​ನಲ್ಲಿ ಈವರೆಗೆ 153 ಪಂದ್ಯಗಳನ್ನಾಡಿದ್ದು, ಈ ವೇಳೆ 279 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಇದರ ನಡುವೆ 22612 ಎಸೆತಗಳನ್ನು ಎದುರಿಸಿರುವ ಜೋ ರೂಟ್ ಒಟ್ಟು 13006 ರನ್ ಕಲೆಹಾಕಿದ್ದಾರೆ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ರೂಟ್ 5ನೇ ಸ್ಥಾನದಲ್ಲಿದ್ದಾರೆ. ಜೋ ರೂಟ್ ಅವರನ್ನು ಸಾಧ್ಯವಾದಷ್ಟು ಬೇಗನೆ ಔಟ್ ಮಾಡಲೇಬೇಕು. ಏಕೆಂದರೆ ಇಂಡೊ-ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಇರುವುದು ರೂಟ್ ಹೆಸರಿನಲ್ಲಿ. ಬಲಗೈ ದಾಂಡಿಗ ಈಗಾಗಲೇ ಲೆಜೆಂಡ್ ಸುನಿಲ್ ಗವಾಸ್ಕರ್ ಹಾಗೂ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.

ಭಾರತದ ವಿರುದ್ಧ ಈವರೆಗೆ 30 ಟೆಸ್ಟ್ ಪಂದ್ಯಗಳನ್ನಾಡಿರುವ ಜೋ ರೂಟ್ 55 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಕಲೆಹಾಕಿರುವುದು ಬರೋಬ್ಬರಿ 2846 ರನ್​ಗಳು. ಅಂದರೆ ಪ್ರತಿ ಪಂದ್ಯದ ರನ್ ಸರಾಸರಿ ಬರೋಬ್ಬರಿ 58.08 ರನ್​ಗಳು. ಇದರ ನಡುವೆ 10 ಶತಕಗಳು ಹಾಗೂ 11 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಇಲ್ಲಿ ಗಮನಿಸಬೇಕಾದ ಮತ್ತೊಂದು ಮುಖ್ಯ ಅಂಶವೆಂದರೆ ಟೀಮ್ ಇಂಡಿಯಾ ವಿರುದ್ಧ ಜೋ ರೂಟ್ ಎದುರಿಸಿರುವ ಎಸೆತಗಳು. ಅಂದರೆ ಭಾರತದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರೂಟ್ ಈವರೆಗೆ 5171 ಎಸೆತಗಳನ್ನು ಎದುರಿಸಿದ್ದಾರೆ. ಅಂದರೆ ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯಲ್ಲಿ 5 ಸಾವಿರಕ್ಕಿಂತ ಹೆಚ್ಚು ಎಸೆತಗಳನ್ನು ಎದುರಿಸಿರುವುದು ಕೇವಲ 3 ಬ್ಯಾಟರ್​ಗಳು ಮಾತ್ರ.

ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಲೆಜೆಂಡ್ ಸುನಿಲ್ ಗವಾಸ್ಕರ್ (6245 ಬಾಲ್ಸ್) ಅಗ್ರಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ತಂಡದ ಮಾಜಿ ನಾಯಕ ಅಲೆಸ್ಟರ್ ಕುಕ್ (5374 ಬಾಲ್ಸ್) ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು ಈ ಶತಮಾನದಲ್ಲಿ ಟೀಮ್ ಇಂಡಿಯಾ ಬೌಲರ್​ಗಳನ್ನು ದಿಟ್ಟವಾಗಿ ಎದುರಿಸಿದ ಏಕೈಕ ಬ್ಯಾಟರ್ ಜೋ ರೂಟ್. ಇದಕ್ಕೆ ಸಾಕ್ಷಿ ಭಾರತದ ವಿರುದ್ಧ 5171 ಎಸೆತಗಳಲ್ಲಿ ಕ್ರೀಸ್ ಕಚ್ಚಿ ನಿಂತು 2846 ರನ್ ಕಲೆಹಾಕಿರುವುದು. ಹಾಗೆಯೇ ಟೀಮ್ ಇಂಡಿಯಾ ವಿರುದ್ಧ 55 ಟೆಸ್ಟ್ ಇನಿಂಗ್ಸ್ ಆಡಿರುವ ಜೋ ರೂಟ್ ಶೂನ್ಯಕ್ಕೆ ಔಟಾಗಿರುವುದು ಕೇವಲ ಒಂದು ಬಾರಿ ಎಂದರೆ ನಂಬಲೇಬೇಕು. ಹೀಗಾಗಿಯೇ ಈ ಬಾರಿಯ ಸರಣಿಯನ್ನು ಜೋ ರೂಟ್ vs ಟೀಮ್ ಇಂಡಿಯಾ ಬೌಲರ್ಸ್ ಎಂದು ಬಿಂಬಿಸಲಾಗುತ್ತಿದೆ. ಈ ಕದನದಲ್ಲಿ ಅಂತಿಮವಾಗಿ ಗೆಲ್ಲುವವರು ಯಾರೆಂಬುದನ್ನು ಕಾದು ನೋಡೋಣ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!