‘ರೂಟ್’ ಕಿತ್ತರೆ ರೂಟ್ ಕ್ಲಿಯರ್; ಭಾರತ ಸರಣಿ ಗೆಲ್ಲಬಹುದು..!

ಜೋ ರೂಟ್ ಟೆಸ್ಟ್ ಕ್ರಿಕೆಟ್​ನಲ್ಲಿ ಈವರೆಗೆ 153 ಪಂದ್ಯಗಳನ್ನಾಡಿದ್ದು, ಈ ವೇಳೆ 279 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಇದರ ನಡುವೆ 22612 ಎಸೆತಗಳನ್ನು ಎದುರಿಸಿರುವ ಜೋ ರೂಟ್ ಒಟ್ಟು 13006 ರನ್ ಕಲೆಹಾಕಿದ್ದಾರೆ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ರೂಟ್ 5ನೇ ಸ್ಥಾನದಲ್ಲಿದ್ದಾರೆ. ಜೋ ರೂಟ್ ಅವರನ್ನು ಸಾಧ್ಯವಾದಷ್ಟು ಬೇಗನೆ ಔಟ್ ಮಾಡಲೇಬೇಕು. ಏಕೆಂದರೆ ಇಂಡೊ-ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಇರುವುದು ರೂಟ್ ಹೆಸರಿನಲ್ಲಿ. ಬಲಗೈ ದಾಂಡಿಗ ಈಗಾಗಲೇ ಲೆಜೆಂಡ್ ಸುನಿಲ್ ಗವಾಸ್ಕರ್ ಹಾಗೂ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.

ಭಾರತದ ವಿರುದ್ಧ ಈವರೆಗೆ 30 ಟೆಸ್ಟ್ ಪಂದ್ಯಗಳನ್ನಾಡಿರುವ ಜೋ ರೂಟ್ 55 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಕಲೆಹಾಕಿರುವುದು ಬರೋಬ್ಬರಿ 2846 ರನ್​ಗಳು. ಅಂದರೆ ಪ್ರತಿ ಪಂದ್ಯದ ರನ್ ಸರಾಸರಿ ಬರೋಬ್ಬರಿ 58.08 ರನ್​ಗಳು. ಇದರ ನಡುವೆ 10 ಶತಕಗಳು ಹಾಗೂ 11 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಇಲ್ಲಿ ಗಮನಿಸಬೇಕಾದ ಮತ್ತೊಂದು ಮುಖ್ಯ ಅಂಶವೆಂದರೆ ಟೀಮ್ ಇಂಡಿಯಾ ವಿರುದ್ಧ ಜೋ ರೂಟ್ ಎದುರಿಸಿರುವ ಎಸೆತಗಳು. ಅಂದರೆ ಭಾರತದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರೂಟ್ ಈವರೆಗೆ 5171 ಎಸೆತಗಳನ್ನು ಎದುರಿಸಿದ್ದಾರೆ. ಅಂದರೆ ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯಲ್ಲಿ 5 ಸಾವಿರಕ್ಕಿಂತ ಹೆಚ್ಚು ಎಸೆತಗಳನ್ನು ಎದುರಿಸಿರುವುದು ಕೇವಲ 3 ಬ್ಯಾಟರ್​ಗಳು ಮಾತ್ರ.

ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಲೆಜೆಂಡ್ ಸುನಿಲ್ ಗವಾಸ್ಕರ್ (6245 ಬಾಲ್ಸ್) ಅಗ್ರಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ತಂಡದ ಮಾಜಿ ನಾಯಕ ಅಲೆಸ್ಟರ್ ಕುಕ್ (5374 ಬಾಲ್ಸ್) ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು ಈ ಶತಮಾನದಲ್ಲಿ ಟೀಮ್ ಇಂಡಿಯಾ ಬೌಲರ್​ಗಳನ್ನು ದಿಟ್ಟವಾಗಿ ಎದುರಿಸಿದ ಏಕೈಕ ಬ್ಯಾಟರ್ ಜೋ ರೂಟ್. ಇದಕ್ಕೆ ಸಾಕ್ಷಿ ಭಾರತದ ವಿರುದ್ಧ 5171 ಎಸೆತಗಳಲ್ಲಿ ಕ್ರೀಸ್ ಕಚ್ಚಿ ನಿಂತು 2846 ರನ್ ಕಲೆಹಾಕಿರುವುದು. ಹಾಗೆಯೇ ಟೀಮ್ ಇಂಡಿಯಾ ವಿರುದ್ಧ 55 ಟೆಸ್ಟ್ ಇನಿಂಗ್ಸ್ ಆಡಿರುವ ಜೋ ರೂಟ್ ಶೂನ್ಯಕ್ಕೆ ಔಟಾಗಿರುವುದು ಕೇವಲ ಒಂದು ಬಾರಿ ಎಂದರೆ ನಂಬಲೇಬೇಕು. ಹೀಗಾಗಿಯೇ ಈ ಬಾರಿಯ ಸರಣಿಯನ್ನು ಜೋ ರೂಟ್ vs ಟೀಮ್ ಇಂಡಿಯಾ ಬೌಲರ್ಸ್ ಎಂದು ಬಿಂಬಿಸಲಾಗುತ್ತಿದೆ. ಈ ಕದನದಲ್ಲಿ ಅಂತಿಮವಾಗಿ ಗೆಲ್ಲುವವರು ಯಾರೆಂಬುದನ್ನು ಕಾದು ನೋಡೋಣ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!