ರೈಟ್ ರೈಟ್ … ಫೈನ್ ಬಿದ್ದರೂ ನಿಲ್ಲದ ನೋಟ್ಬುಕ್ ಸೆಲೆಬ್ರೇಷನ್ ಆಲ್ರೈಟ್ ಅಂತಾರೆ ದಿಗ್ವೇಶ್….

ಬಿಸಿಸಿಐ ದಿಗ್ವೇಶ್ ರಾಥಿಯವರಿಗೆ ಮೊದಲನೇ ಬಾರಿಗೆ,ತಮ್ಮ ಪಂದ್ಯ ಶುಲ್ಕದ ಶೇಕಡ 25ರಷ್ಟು ದಂಡ ವಿಧಿಸಿದರು, ಎರಡನೆಯದಾಗಿ ತಮ್ಮ ಪಂದ್ಯ ಶುಲ್ಕದ ಶೇಕಡ 50ರಷ್ಟು ದಂಡ ವಿಧಿಸಿದ್ದರು. ಅದಾಗಿಯೂ ಸಹ ದಿಗ್ವೇಶ್ ರಾಥಿ ತಮ್ಮ ನೋಟ್ಬುಕ್ ಸೆಲೆಬ್ರೇಶನ್ ಅನ್ನ ಮುಂದುವರಿಸಿದ್ದಾರೆ. ಎಲ್ ಎಸ್ ಟಿ ತಂಡದ ಅಭಿಮಾನಿಗಳಿಗೆ ಇದು ಸಂತಸ ನೀಡಿದರಾದರು, ಇವರು ಫೈನ್ ಕಟ್ಟಲೇಬೇಕು. ಇನ್ನು ಕೆಲ ಕ್ರಿಕೆಟ್ ಅಭಿಮಾನಿಗಳು ಫೈನ್ ಕಟ್ಟುವುದಾದರೆ ಇಂತಹ ಸೆಲೆಬ್ರೇಶನ್ ಗಳನ್ನು ಯಾಕೆ ಮಾಡಬೇಕು ಎಂದು ಸಮ್ಮಿಶ್ರ ಪ್ರತಿಕ್ರಿಯೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನೀಡುತ್ತಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ತಂಡದ ಯುವ ಸ್ಪಿನ್ನರ್ ದಿಗ್ವೇಶ್ ರಾಥಿ ನೋಟ್ಬುಕ್ ಸೆಲೆಬ್ರೇಷನ್ ಮುಂದುವರೆದಿದೆ. ಈ ಹಿಂದೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿ ನೋಟ್ ಬುಕ್ ಸೆಲೆಬ್ರೇಷನ್ ಮಾಡಿದ್ದ ದಿಗ್ವೇಶ್ಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಿದ್ದರು. ಅಲ್ಲದೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು.

ಇದಾದ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತದೇ ನೋಟ್ ಬುಕ್ ಸೆಲೆಬ್ರೇಷನ್ನೊಂದಿಗೆ ದಿಗ್ವೇಶ್ ರಾಥಿ ಕಾಣಿಸಿಕೊಂಡಿದ್ದರು. ಅಲ್ಲದೆ ಐಪಿಎಲ್ ನಿಯಮ ಉಲ್ಲಂಘಿಸಿದ್ದಕಾಗಿ ಈ ಬಾರಿ ದಿಗ್ವೇಶ್ಗೆ ಪಂದ್ಯ ಶುಲ್ಕದ ಶೇ. 50 ರಷ್ಟು ದಂಡ ಹಾಗೂ 2 ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು.ಇದೀಗ ಮತ್ತೆ ನೋಟ್ಬುಕ್ ಸೆಲೆಬ್ರೇಷನ್ನೊಂದಿಗೆ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ಗೆ ಬೀಳ್ಕೊಡುಗೆ ನೀಡಿದ್ದಾರೆ. ಧರ್ಮಶಾಲಾದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅಯ್ಯರ್ ವಿಕೆಟ್ ಪಡೆದ ದಿಗ್ವೇಶ್ ಎಂದಿನಂತೆ ನೋಟ್ಬುಕ್ ಸಹಿಯೊಂದಿಗೆ ಸಂಭ್ರಮಿಸಿದರು. ಇದೀಗ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 236 ರನ್ ಕಲೆಹಾಕಿದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡ 20 ಓವರ್ಗಳಲ್ಲಿ 199 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡ 37 ರನ್ಗಳ ಜಯ ಸಾಧಿಸಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!