ರೈಟ್ ರೈಟ್ … ಫೈನ್ ಬಿದ್ದರೂ ನಿಲ್ಲದ ನೋಟ್ಬುಕ್ ಸೆಲೆಬ್ರೇಷನ್ ಆಲ್ರೈಟ್ ಅಂತಾರೆ ದಿಗ್ವೇಶ್….

ಬಿಸಿಸಿಐ ದಿಗ್ವೇಶ್ ರಾಥಿಯವರಿಗೆ ಮೊದಲನೇ ಬಾರಿಗೆ,ತಮ್ಮ ಪಂದ್ಯ ಶುಲ್ಕದ ಶೇಕಡ 25ರಷ್ಟು ದಂಡ ವಿಧಿಸಿದರು, ಎರಡನೆಯದಾಗಿ ತಮ್ಮ ಪಂದ್ಯ ಶುಲ್ಕದ ಶೇಕಡ 50ರಷ್ಟು ದಂಡ ವಿಧಿಸಿದ್ದರು. ಅದಾಗಿಯೂ ಸಹ ದಿಗ್ವೇಶ್ ರಾಥಿ ತಮ್ಮ ನೋಟ್ಬುಕ್ ಸೆಲೆಬ್ರೇಶನ್ ಅನ್ನ ಮುಂದುವರಿಸಿದ್ದಾರೆ. ಎಲ್ ಎಸ್ ಟಿ ತಂಡದ ಅಭಿಮಾನಿಗಳಿಗೆ ಇದು ಸಂತಸ ನೀಡಿದರಾದರು, ಇವರು ಫೈನ್ ಕಟ್ಟಲೇಬೇಕು. ಇನ್ನು ಕೆಲ ಕ್ರಿಕೆಟ್ ಅಭಿಮಾನಿಗಳು ಫೈನ್ ಕಟ್ಟುವುದಾದರೆ ಇಂತಹ ಸೆಲೆಬ್ರೇಶನ್ ಗಳನ್ನು ಯಾಕೆ ಮಾಡಬೇಕು ಎಂದು ಸಮ್ಮಿಶ್ರ ಪ್ರತಿಕ್ರಿಯೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನೀಡುತ್ತಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ತಂಡದ ಯುವ ಸ್ಪಿನ್ನರ್ ದಿಗ್ವೇಶ್ ರಾಥಿ ನೋಟ್ಬುಕ್ ಸೆಲೆಬ್ರೇಷನ್ ಮುಂದುವರೆದಿದೆ. ಈ ಹಿಂದೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿ ನೋಟ್ ಬುಕ್ ಸೆಲೆಬ್ರೇಷನ್ ಮಾಡಿದ್ದ ದಿಗ್ವೇಶ್ಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಿದ್ದರು. ಅಲ್ಲದೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು.

ಇದಾದ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತದೇ ನೋಟ್ ಬುಕ್ ಸೆಲೆಬ್ರೇಷನ್ನೊಂದಿಗೆ ದಿಗ್ವೇಶ್ ರಾಥಿ ಕಾಣಿಸಿಕೊಂಡಿದ್ದರು. ಅಲ್ಲದೆ ಐಪಿಎಲ್ ನಿಯಮ ಉಲ್ಲಂಘಿಸಿದ್ದಕಾಗಿ ಈ ಬಾರಿ ದಿಗ್ವೇಶ್ಗೆ ಪಂದ್ಯ ಶುಲ್ಕದ ಶೇ. 50 ರಷ್ಟು ದಂಡ ಹಾಗೂ 2 ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು.ಇದೀಗ ಮತ್ತೆ ನೋಟ್ಬುಕ್ ಸೆಲೆಬ್ರೇಷನ್ನೊಂದಿಗೆ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ಗೆ ಬೀಳ್ಕೊಡುಗೆ ನೀಡಿದ್ದಾರೆ. ಧರ್ಮಶಾಲಾದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅಯ್ಯರ್ ವಿಕೆಟ್ ಪಡೆದ ದಿಗ್ವೇಶ್ ಎಂದಿನಂತೆ ನೋಟ್ಬುಕ್ ಸಹಿಯೊಂದಿಗೆ ಸಂಭ್ರಮಿಸಿದರು. ಇದೀಗ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 236 ರನ್ ಕಲೆಹಾಕಿದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡ 20 ಓವರ್ಗಳಲ್ಲಿ 199 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡ 37 ರನ್ಗಳ ಜಯ ಸಾಧಿಸಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!