ರೈತರು ಜಾಗೃತರಾದರೆ ಅಪಾಯ ಕಡಿಮೆ. ಶೋಷಣೆ ಮೆಟ್ಟಿ ನಿಲ್ಲಬಹುದು : ರಾಜ್ಯಾಧ್ಯಕ್ಷ ಶಾಂತಕುಮಾರ್.

ಇಂದು ಕೆರಗಳ್ಳಿಯಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಘಟಕ ತೆಂಗಿನ ಗಿಡ ನೆಡುವ ಮೂಲಕ ಉದ್ಘಾಟಿಸಿದ ರಾಜ್ಯಾಧ್ಯಕ್ಷ ರೈತರತ್ನ ಕುರುಬುರ್ ಶಾಂತಕುಮಾರ್ ಮಾತನಾಡುತ್ತ ರೈತ ಕೃಷಿಯಲ್ಲಿ ಜೂಜಾಟ ಆಡುತ್ತಿದ್ದಾನೆ ಪ್ರಕೃತಿ ಮುನಿದಾಗ ಜೂಜಾಟದಲ್ಲಿ ಸೋಲುತ್ತಿದ್ದಾನೆ ಎಂದು ತಿಳಿಸಿದರು.

ಕಳೆದ ವರ್ಷ ಶುಂಠಿ ಬೆಲೆ 12 ಸಾವಿರ ಇತ್ತು ಈಗ 1ಸಾವಿರ ರೂಗೆ ಇಳಿದಿದೆ. ರೈತರ ಒತ್ತಾಯಕ್ಕೆ ಈಗ ರಾಜ್ಯ ಸರ್ಕಾರ 7,000 ರೂಗೆ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲು ಕೇಂದ್ರಕ್ಕೆ ವರದಿ ಸಲ್ಲಿಸುತ್ತಿದೆ ರೈತರು ದಳ್ಳಾಳಿಗೆಗೆ ಮಾರಾಟ ಮಾಡದೆ ಸ್ವಲ್ಪ ದಿನ ಕಾಯುವಂತಾಗಬೇಕು ಇಂದು ಮಧ್ಯವರ್ತಿಗಳು ದಲ್ಲಾಳಿಗಳು ಬಂಡವಾಳ ಶಾಹಿಗಳು. ಭೂ ಮಾಫಿಯಾದವರು ರೈತರನ್ನ ಒಕ್ಕಲಿಬ್ಬಿಸುವ ಕಾರ್ಯದಲ್ಲಿ ಮುಂದಾಗುತ್ತಿದ್ದಾರೆ. ಸರ್ಕಾರದ ಇಬ್ಬಗೆಯ ನೀತಿಗಳು ರೈತರನ್ನ ಸಂಕಷ್ಟಕ್ಕೆ ತಳ್ಳುತ್ತಿವೆ. ತೊಗರಿ ಬೆಳೆಗೆ ಹೆಚ್ಚುವರಿ 500ರೂ ಪ್ರೋತ್ಸಾಹ ಧನ ನೀಡಿದ ರಾಜ್ಯ ಸರ್ಕಾರ ರಾಜ್ಯದಲ್ಲಿ 20 ಲಕ್ಷ ರೈತರು ಭತ್ತ ಬೆಳೆಯುತ್ತಿದ್ದರು ರಾಜ್ಯ ಸರ್ಕಾರದ ನಿರ್ಲಕ್ಷ ಧೋರಣೆಯಿಂದ ಖರೀದಿ ಕೇಂದ್ರಗಳು ಆರಂಭವಾಗದೆ ಹೆಚ್ಚುವರಿ ಪ್ರೋತ್ಸಾದನ ನೀಡದೇ ಇದ್ದ ಕಾರಣ ಭತ್ತ ಬೆಳೆದ ರೈತರು ಎಂ ಎಸ್ ಪಿ ಗಿಂತ ಕಡಿಮೆ ಬೆಲೆಗೆ ಬತ್ತ ಮಾರಾಟ ಮಾಡಿ ನಷ್ಟ ಅನುಭವಿಸುವಂತಾಯಿತು. ಇಂತಹ ಇಬ್ಬಂದಿ ನೀತಿಗಳು ರೈತರನ್ನ ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್ ಮಾತನಾಡಿ ದೆಹಲಿ ರೈತರ ಹೋರಾಟ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ನೀಡಿದೆ. ಭೂ ಮಾಫಿಯಾದವರು ರೈತರ ಜಮೀನು ಖರೀದಿಸಿ ವಂಚನೆ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕಲು ನಮ್ಮ ಸಂಘಟನೆ ಕಾರ್ಯಕ್ರಮ ರೂಪಿಸುತ್ತದೆ ಎಂದು ತಿಳಿಸಿದರು.
ಕೇರಗಳ್ಳಿ ಘಟಕ ಅಧ್ಯಕ್ಷ ಸತೀಶ್ ರವರು ಮಾತನಾಡಿ ರಾಜ್ಯ ಸರ್ಕಾರ ಹಾಲು ಉತ್ಪಾದಕರ ಪ್ರೂತ್ಸಹ ಧನ 5 ರೂ ಬಿಡುಗಡೆಗೆ ಒತ್ತಾಯಿಸಿದರು. ತಾಲೂಕ ಅಧ್ಯಕ್ಷ ಪೈಲ್ವಾನ್ ವೆಂಕಟೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು

ಸಿಎಂ ಸಿದ್ದರಾಮಯ್ಯ ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿದ್ದಾರೆ


ಉಪಾಧ್ಯಕ್ಷ ವಾಜಮಂಗಲ ಮಹದೇವ್. ನೀಲಕಂಠಪ್ಪ. ಕೇರಗಹಳ್ಳಿಘಟಕದ ಗೌರವ ಅಧ್ಯಕ್ಷ ನಾಗರಾಜು.ಶಿವಕುಮಾರ.ಬಾಲು. ವಿಜೇಯೆಂದ್ರ. ಮಹದೇವಸ್ವಾಮಿ ವರಕೂಡ ನಾಗೇಶ. ಮಂಜುನಾಥ. ಉಪಾಧ್ಯಕ್ಷರು ಬಾಲು ಆರ್, ಉಪಾಧ್ಯಕ್ಷರು ಶಿವಕುಮಾರ್. ಬಿ ಸಂದೀಪ್ ಸಿ ಕಾರ್ಯದರ್ಶಿ, ಅಭಿಷೇಕ್ ಎಂ ಖಜಾಂಚಿ, ಮಂಜುನಾಥ್ ಸಂಘಟನಾ ಕಾರ್ಯದರ್ಶಿ ಹಾಗೂ ಗ್ರಾಮದ ಯಜಮಾನರು ಬಸವರಾಜ್, ಬಸವಗೌಡ,ಶಿವಪ್ಪ, ಮಲ್ಲೇಶ, ಬಸವರಾಜು, ದೊಳೇಗೌಡ್ರು, ನಾಗಣ್ಣ ಮುಂತಾದವರು ಇದ್ದರು.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. “ಖರ್ಗೆಯವರೇ, ನಿಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಅನುಭವಕ್ಕೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ. ನಿಮ್ಮ ಇತ್ತೀಚಿನ ವರ್ತನೆಗಳನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು