ರೈನೋ ರೋಮಾರಿಯೋ ಶೆಫರ್ಡ್ ದಾಳಿಗೆ ಸಿಎಸ್‌ಕೆ ಧೂಳಿಪಟ….

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ,ರೊಮಾರಿಯೊ ಶೆಫರ್ಡ್ ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ. ಈ ಅರ್ಧಶತಕದೊಂದಿಗೆ ಐಪಿಎಲ್ನಲ್ಲಿ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಯಶಸ್ವಿ ಜೈಸ್ವಾಲ್ (13 ಎಸೆತಗಳು) ಅಗ್ರಸ್ಥಾನದಲ್ಲಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ 52 ನೇ ಪಂದ್ಯದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರೊಮಾರಿಯೊ ಶೆಫರ್ಡ್ 14 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ ಅಜೇಯ 53 ರನ್ ಬಾರಿಸಿದ್ದರು, ಅದು ಸಹ 378.6 ಸ್ಟ್ರೈಕ್ ರೇಟ್ ನೊಂದಿಗೆ ಎಂಬುದು ವಿಶೇಷ ಹಾಗೂ ಅಚ್ಚರಿ ಮೂಡಿಸುವಂತದ್ದು. ಈ ಸ್ಪೋಟಕ ಅರ್ಧಶತಕದೊಂದಿಗೆ ಆರ್ಸಿಬಿ ಪರ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ ದಾಖಲೆ ರೊಮಾರಿಯೊ ಪಾಲಾಯಿತು.

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. 2013 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಗೇಲ್ ಪುಣೆ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದರು.ಇದೀಗ ಬರೋಬ್ಬರಿ 12 ವರ್ಷಗಳ ಬಳಿಕ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆ ಮುರಿಯುವಲ್ಲಿ ವೆಸ್ಟ್ ಇಂಡೀಸ್ ಆಟಗಾರನೇ ಆಗಿರುವ ರೊಮಾರಿಯೊ ಶೆಫರ್ಡ್ ಯಶಸ್ವಿಯಾಗಿದ್ದಾರೆ. ಅದು ಕೂಡ 14 ಎಸೆತಗಳಲ್ಲಿ ಸ್ಪೋಟಕ ಹಾಫ್ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ.

ಇನ್ನು ರೊಮಾರಿಯೊ ಶೆಫರ್ಡ್ ಬಾರಿಸಿದ ಈ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಆರ್ಸಿಬಿ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 213 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 211 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆರ್ಸಿಬಿ ತಂಡ 2 ರನ್ಗಳ ರೋಚಕ ಜಯ ಸಾಧಿಸಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!