ಲವ್ ಹೆಸರಿನಲ್ಲಿ ಆಕೆಯನ್ನು ಬಳಸಿಕೊಂಡು ಮೋಸ- ತಾಯಿ ಮಗಳು ಬ*ಲಿ…!

ಪ್ರೇಮಿಗಳಿಬ್ಬರೂ ಅಕ್ಕಪಕ್ಕದ ಗ್ರಾಮದವರು. ಇಬ್ಬರ ನಡುವೆ ಪರಿಚಯವಾಗಿ ಪ್ರೇಮಾಂಕುರವಾಗಿತ್ತು. ಆತನ ಬಣ್ಣ ಬಣ್ಣದ ಮಾತನ್ನೇ ನಿಜವಾದ ಪ್ರೀತಿ ಅಂದುಕೊಂಡಿದ್ದ ಆಕೆ, ತನ್ನನ್ನ ತಾನು ಅರ್ಪಿಸಿಕೊಂಡಿದ್ದಳು. ಆಕೆಯ ಮುಗ್ದತೆಯನ್ನ ಬಳಸಿಕೊಂಡಿದ್ದ ಪ್ರೇಮಿ, ಆಕೆಯನ್ನ ಬಳಸಿಕೊಂಡು ಮೋಸ ಮಾಡಿದ್ದಾನೆ. ಇದರಿಂದ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಮಗಳ ಸಾವಿನ ಮನನೊಂದಿದ್ದ ತಾಯಿ, ಮಗಳ ಸಾವಿಗೆ ನ್ಯಾಯ ಸಿಗಲಿಲ್ಲವೆಂದು ನೇಣಿಗೆ ಶರಣಾಗಿದ್ದಾಳೆ. ಸಕ್ಕರಿನಗರಿ ಮಂಡ್ಯದಲ್ಲಿ ನಡೆದ ಮನಕಲಕುವ ಘಟನೆ ವಿವರ ಇಲ್ಲಿದೆ.
ಯುವಕ ಆಕೆಯನ್ನು ನಿಜವಾಗಿಯೂ ಪ್ರೀತಿಸುತ್ತಿದ್ದಾನೆ ಎಂದು ತಿಳಿದಿದ್ದಳು, ಆದರೆ ಅಲ್ಲಿ ನಿಜವಾಗಿಯೂ ನಡೆದಿದ್ದೇ ಬೇರೆ. ಲವ್, ಸೆಕ್ಸ್ ದೋಖಾಕ್ಕೆ ತಾಯಿ ಮಗಳು ಇಬ್ಬರು ಬಲಿಯಾಗಿರುವ ದಾರುಣ ಘಟನೆ ಸಕ್ಕರೆ ನಗರಿ ಮಂಡ್ಯದಲ್ಲಿ ನಡೆದಿದೆ. ಹೌದು..ಯುವಕನ ಪ್ರೀತಿ ಹುಚ್ಚಾಟಕ್ಕೆ ತಾಯಿ ಲಕ್ಷ್ಮಿ ಹಾಗೂ ಮಗಳು ವಿಜಯಲಕ್ಷ್ಮೀ ಬಲಿಯಾಗಿರುವ ಮನಕಲಕುವ ಘಟನೆ ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದಿದೆ. ಪ್ರೀತಿಸಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಪ್ರಿಯತಮ ಹರಿಕೃಷ್ಣ ಮೋಸ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಮನನೊಂದ ಯುವತಿ ವಿಜಯಲಕ್ಷ್ಮೀ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದರಿಂದ ಮನನೊಂದಿದ್ದ ಯುವತಿ ತಾಯಿ ಲಕ್ಷ್ಮೀ ಸಹ ಮಗಳ ಸಾವಿಗೆ ನ್ಯಾಯ ಸಿಗಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವಕನ ಪ್ರೀತಿಯ ಹುಚ್ಚಾಟಕ್ಕೆ 21 ದಿನಗಳಲ್ಲಿ ತಾಯಿ ಮಗಳು ದುರಂತ ಅಂತ್ಯಕಂಡಿದ್ದಾರೆ.
ಈ ಅಮಾನವೀಯ ಘಟನೆ ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದ ವಿಜಯಲಕ್ಷ್ಮೀ ಇತ್ತೀಚೆಗಷ್ಟೇ ಡಿಗ್ರಿ ಮುಗಿಸಿ ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಳು. ಈ ಮಧ್ಯೆ ಓದುವಾಗಲೇ ತನ್ನೂರಿನ ಮೊಮ್ಮಗ, ಪಕ್ಕದ ಗ್ರಾಮ ಮಾರಸಿಂಗನಹಳ್ಳಿ ಗ್ರಾಮದ ಹರಿಕೃಷ್ಣ ಎಂಬಾತನ ಪ್ರೀತಿ ಬಲೆಗೆ ಬಿದ್ದಿದ್ದಳು. ಪರಸ್ಪರ ಇಬ್ಬರು ಒಂದೂವರೆ ವರ್ಷದಿಂದ ಪ್ರೀತಿಸಿದ್ದರು. ಹರಿಕೃಷ್ಣ ಪ್ರೀತಿಯ ಹರಿ ಕಥೆಗೆ ಮರುಳಾಗಿ ವಿಜಯಲಕ್ಷ್ಮೀ ತನ್ನನ್ನ ನಂಬಿ ಮನಸ್ಸಿಗೆ ಹಚ್ಚಿಕೊಂಡಿದ್ದಳು.

ಆದರೆ, ಈ ಮಧ್ಯೆ ಹರಿಕೃಷ್ಣಬೇರೆ ಹುಡುಗಿಯರ ಜೊತೆ ಸಂಪರ್ಕದಲ್ಲಿ ಇರುವ ವಿಚಾರ ಗೊತ್ತಗಿತ್ತು. ಈ ಬಗ್ಗೆ ವಿಜಯಲಕ್ಷ್ಮೀ ಪ್ರಶ್ನಿಸಿ ಮದುವೆಗೆ ಪಟ್ಟು ಹಿಡಿದಿದ್ದಳು. ಆದರೆ ದುರುಳ ಹರಿಕೃಷ್ಣ, ಮದುವೆಯನ್ನ ನಿರಾಕರಿಸಿ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ. ಇದರಿಂದ ಮನನೊಂದಿದ್ದ ವಿಜಯಲಕ್ಷ್ಮೀ ಫೆಬ್ರವರಿ 21 ರಂದು ಮಂಡ್ಯದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಳು. ರೈಲ್ವೆ ಪೊಲೀಸರು ಯುಡಿಆರ್ ಮಾಡಿಕೊಂಡಿದ್ದರು. ಕುಟುಂಬಸ್ಥರಿಗೆ ಪ್ರಾರಂಭದಲ್ಲಿ ಅಸಲಿ ಸತ್ಯ ಗೊತ್ತಾಗಿರಲಿಲ್ಲ. ಆದರೆ ಆನಂತರ ಯುವತಿಯ ಮೊಬೈಲ್ ಹಾಗೂ ಸ್ನೇಹಿತರ ಹೇಳಿಕೆಯಿಂದ ಅಸಲಿ ಸತ್ಯ ಗೊತ್ತಾಗಿದೆ.
ಇಂತಹದೊಂದು ಆಘಾತಕಾರಿ ಘಟನೆ ನಡೆದ ತಕ್ಷಣವೇ ವಿಜಯಲಕ್ಷ್ಮೀ ಕುಟುಂಬಸ್ಥರು ಮಂಡ್ಯದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ನಂತರ ನ್ಯಾಯ ಕೇಳಲು ಹರಿಕೃಷ್ಣನ ಮನೆಯ ಬಳಿ ಹೋಗಿ ಗಲಾಟೆ ಮಾಡಿದ್ದರು. ಹೀಗಾಗಿ ವಿಜಯಲಕ್ಷ್ಮೀ ಕುಟುಂಬಸ್ಥರು ಸೇರಿ ಗ್ರಾಮಸ್ಥರ ವಿರುದ್ಧವೇ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರಿಂದ ಮೃತ ವಿಜಯಲಕ್ಷ್ಮೀ ತಾಯಿ ಲಕ್ಷ್ಮಿ ಸಾಕಷ್ಟು ಮನನೊಂದಿದ್ದರು. ಮಗಳ ಸಾವಿಗೆ ನ್ಯಾಯ ಸಿಗಲಿಲ್ಲ. ತಮ್ಮವರ ವಿರುದ್ದವೇ ದೂರು ದಾಖಲಾಯ್ತು ಎಂದು ವಿಜಯಲಕ್ಷ್ಮೀ ತಾಯಿ ಲಕ್ಷ್ಮಿ ಕೂಡ ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾಳೆ. ಆನಂತರ ಪೊಲೀಸರ ವಿರುದ್ದವೇ ಕುಟುಂಬಸ್ಥರು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ, ಮೃತದೇಹ ಎತ್ತಲು ಬಿಟ್ಟಿರಲಿಲ್ಲ. ಆದರೆ ಇದರಿಂದ ಎಚ್ಚೆತ್ತ ಪೊಲೀಸರು, ಕೊನೆಗೂ ಹರಿಕೃಷ್ಣ ಹಾಗೂ ಕುಟುಂಬಸ್ಥರ ವಿರುದ್ಧ ದೂರು ದಾಖಲು ಮಾಡಿಕೊಂಡು ಐವರನ್ನ ವಶಕ್ಕೆ ಪಡೆದಿದ್ದಾರೆ. ಆದರೆ ಪ್ರಿಯಕರ ಹರಿಕೃಷ್ಣ ಪರಾರಿಯಾಗಿದ್ದಾನೆ.
ಒಟ್ಟಾರೆಯಾಗಿ ಹೇಳುವುದಾದರೆ, ಯುವಕನ ಕಾಮತೃಷೆಗಾಗಿ ಒಂದೇ ಕುಟುಂಬದ ಇಬ್ಬರು ದಾರುಣ ಅಂತ್ಯ ಕಂಡಿದ್ದಾರೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕಿದೆ. ವಿಜಯಲಕ್ಷ್ಮೀ ಹಾಗೂ ಆಕೆಯ ಕುಟುಂಬಕ್ಕೆ ನ್ಯಾಯವನ್ನು ಸಲ್ಲಿಸಬೇಕಾಗಿರುವುದು ಕಾನೂನಿನ ಕೈಯಲ್ಲಿದೆ ಮುಂದೆ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!