ಲೈಂಗಿಕ ದೌರ್ಜನ್ಯ ವಿರುದ್ಧ ಚಾಟಿಯಿಂದ ಹೊಡೆದುಕೊಂಡು ವಿನೂತನವಾಗಿ ಪ್ರತಿಭಟನೆ ಮಾಡಿದ ಅಣ್ಣಾಮಲೈ..!

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದರು. ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಭೀಷ್ಮ ಶಪತ ಕೈಗೊಂಡಿದ್ದು. ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ.
ಇಂದು ಬೆಳಗ್ಗೆ ಅವರ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ. ಅಣ್ಣಾ ಯೂನಿರ್ವಸಿಟಿಯಲ್ಲಿ ಓದುತ್ತಿದ್ದ ಇಂಜಿನಿಯರಿಂಗ್ ವಿಧ್ಯಾರ್ಥಿನಿಯ ಮೇಲೆ ಕಾಲೇಜು ಕ್ಯಾಂಪಸ್ನಲ್ಲಿ ಅತ್ಯಾಚಾರ ನಡೆದಿದೆ. ಇದರ ವಿರುದ್ಧ ವಿಧ್ಯಾರ್ಥಿನಿ ಪೊಲೀಸರಿಗೆ ದೂರನ್ನು ನೀಡಿದ್ದರು.

ಪೊಲೀಸರು ಜ್ಞಾನಶೇಖರನ್ ಎಂಬಾತನನ್ನು ಬಂಧಿಸಿದ್ದರು. ಈತ ಯುವತಿಯ ಖಾಸಗಿ ವಿಡೀಯೋ ಚಿತ್ರಿಕರಿಸಿಕೊಂಡು ಬ್ಲಾಕ್ಮೇಲ್ ಮಾಡಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದನು ಎಂಬ ಆರೋಪವಿದೆ. ಆರೋಪಿಯ ಮೇಲೆ 2011ರಲ್ಲಿಯೂ ಇದೇ ರೀತಿಯ ಪ್ರಕರಣ ದಾಖಲಾಗಿದ್ದು. ಈತನ ವಿರುದ್ದ ಸುಮಾರು 17 ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಆದರೂ ಈ ಆರೋಪಿ ಸ್ವತಂತ್ರ್ಯವಾಗಿ ಓಡಾಡುತ್ತಿದ್ದಾನೆ.
ಡಿಎಂಕೆ ಸರ್ಕಾರದ ಆಡಳಿತದಲ್ಲಿ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲ ಎಂದು ಆರೋಪಿಸಿ ತಮಿಳುನಾಡು ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ 48 ದಿನಗಳ ಸುದೀರ್ಘ ಉಪವಾಸ ಕೈಗೊಂಡಿರುವ ಅಣ್ಣಾಮಲೈ , ಆರು ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ .

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!