ಲೈನ್‌ಮ್ಯಾನ್‌ ಹಿಂದೆಯೇ ದೊಣ್ಣೆ ಹಿಡಿದು: ವಿದ್ಯುತ್ ಕಂಬವನ್ನೇರಿ ಅವಾಜ್ ಹಾಕಿದ ಮಹಿಳೆ.

ಉತ್ತರ ಪ್ರದೇಶ :- ಅಚ್ಚರಿಯ ಪ್ರಕರಣಗಳಿಗೆ ಸಂಬಂಧಿಸಿದ ಕೆಲವೊಂದು ವಿಡಿಯೋ ತುಣುಕುಗಳು ಸೋಷಿಯಲ್ ಮೀಡಿಯಾದಲ್ಲಿ ಆಗಾಗ್ಗೆ ಕಾಣ ಸಿಗುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ವಿಡಿಯೋ ವೈರಲ್ ಆಗಿದ್ದು, ಮಹಿಳೆಯೊಬ್ಬರು ಕರೆಂಟ್ ಕಂಬವನ್ನೇರಿ ಲೈನ್ಮ್ಯಾನ್ಗೆ ಧಮ್ಕಿ ಹಾಕಿದ್ದಾರೆ. ಹೌದು ಕರೆಂಟ್ ಬಿಲ್ ಸರಿಯಾಗಿ ಪಾವತಿಸದ ಕಾರಣ ವಿದ್ಯುತ್ ಕಂಬವನ್ನೇರಿ ಲೈನ್ಮ್ಯಾನ್ ವಿದ್ಯುತ್ ಕಡಿತಗೊಳಿಸಲು ಮುಂದಾದ ಸಂದರ್ಭದಲ್ಲಿ ಆತನ ಹಿಂದೆಯೇ ದೊಣ್ಣೆ ಹಿಡಿದು ಕಂಬವನ್ನೇರಿದ ಮಹಿಳೆಯೊಬ್ಬರು ಅವಾಸ್ ಹಾಕಿ ಆತನನ್ನು ಕಂಬದಿಂದ ಕೆಳಗಿಳಿಸಿದ್ದಾರೆ. ಮಹಿಳೆಯ ಭಂಡ ಧೈರ್ಯವನ್ನು ಕಂಡು ನೆಟ್ಟಿಗರು ಬೆರಗಾಗಿದ್ದಾರೆ.

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಈ ಅಚ್ಚರಿಯ ಪ್ರಕರಣ ನಡೆದಿದ್ದು, ಹಲವು ತಿಂಗಳುಗಳಿಂದ ವಿದ್ಯುತ್ ಬಿಲ್ ಪಾವತಿಸುತ್ತಿಲ್ಲ ಎಂಬ ಕಾರಣಕ್ಕೆ ಲೈನ್ಮ್ಯಾನ್ ಬಂದು ನೇರವಾಗಿ ಕರೆಂಟ್ ಕಂಬದಿಂದಲೇ ವಿದ್ಯುತ್ ಕಡಿತಗೊಳಿಸಲು ಮುಂದಾಗಿದ್ದಾನೆ. ಇದನ್ನು ಕಂಡಂತಹ ಮಹಿಳೆಯೊಬ್ಬರು ತಾನು ಕೂಡಾ ಕೈಯಲ್ಲೊಂದು ದೊಣ್ಣೆ ಹಿಡಿದು ಏಣಿಯ ಮೂಲಕ ಕಂಬವನ್ನೇರಿ ಕರೆಂಟ್ ತೆಗೆದ್ರೆ ಜಾಗ್ರತೆ ಎಂದು ಆತನಿಗೆ ಬೈದಿದ್ದಾರೆ. ಈ ಮಹಿಳೆಯ ಬೈಗುಳಕ್ಕೆ ಹೆದರಿದ ಲೈನ್ಮ್ಯಾನ್ ಕರೆಂಟ್ ಕಟ್ ಮಾಡದೆಯೇ ಕಂಬದಿಂದ ಇಳಿದು ಸೀದಾ ಹೋಗಿದ್ದಾನೆ.
Gharkakalesh ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಕೈಯಲ್ಲೊಂದು ದೊಣ್ಣೆ ಹಿಡಿದು ಕರೆಂಟ್ ಕಂಬವನ್ನೇರಿ ಲೈನ್ಮ್ಯಾನ್ಗೆ ಕರೆಂಟ್ ತೆಗೆದ್ರೆ ಜಾಗ್ರತೆ ಎಂದು ಧಮ್ಕಿ ಹಾಕುತ್ತಿರುವ ದೃಶ್ಯವನ್ನು ಕಾಣಬಹುದು.
ಡಿಸೆಂಬರ್ 31 ರಂದು ಹಂಚಿಕೊಳ್ಳಲಾದ ಈ ವಿಡಿಯೋ 62 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ಮಹಿಳೆ ನಿಜಕ್ಕೂ ಗಟ್ಟಿಗಿತ್ತಿʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇಷ್ಟೆಲ್ಲಾ ಧಮ್ಕಿ ಹಾಕುವ ಬದಲು ಆಕೆಗೆ ಕರೆಂಟ್ ಬಿಲ್ ಪಾವತಿಸಬಹುದಿತ್ತಲ್ವಾʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

You Missed

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ