ವರನ ಕೆಲಸ, ಕುಟುಂಬದ ಹಿನ್ನಲೆ ಜೊತೆಗೆ, ಡಿಜಿಟಲ್ ಹಿನ್ನಲೆಯನ್ನೂ ನೋಡಿ ಎಂದ ಯುವತಿ….

ಈಗಿನ ಕಾಲದಲ್ಲಿ ಯುವತಿಯರು ಮದುವೆ ವಿಷಯದಲ್ಲಿ ಎಷ್ಟು ಜಾಗರೂಕರಾಗಿದ್ದರೂ ಸಾಲದು. ಸುಳ್ಳು ಹೇಳಿ ಮದುವೆ ಮಾಡಿಕೊಂಡು ಮೋಸ ಮಾಡುವ ಸುದ್ದಿಗಳನ್ನು ನೀವು ಆಗಾಗ ಕೇಳಿರುತ್ತೀರಿ. ಆದರೆ ಇಲ್ಲೊಬ್ಬ ಯುವತಿಯೂ ತನ್ನ ಬುದ್ಧಿವಂತಿಕೆಯಿಂದ ಅಪಾಯಕಾರಿ ಪುರುಷನಿಂದ ಹೇಗೆ ತಪ್ಪಿಸಿಕೊಂಡೆ ಹಾಗೂ ವೈವಾಹಿಕ ಜೀವನಕ್ಕೆ ಕಾಲಿಡುವ ಮುನ್ನ ವರನ ಡಿಜಿಟಲ್ ಹಿನ್ನಲೆಯ ಬಗ್ಗೆ ತಿಳಿದುಕೊಳ್ಳುವುದು ಎಷ್ಟು ಮುಖ್ಯ ಎನ್ನುವುದನ್ನು ಒತ್ತಿ ಹೇಳಿದ್ದಾರೆ. ಯುವತಿಯ ಪೋಸ್ಟ್ವೊಂದು ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈಕೆ ನೀಡಿದ ಸಲಹೆಯನ್ನು ಸ್ವೀಕರಿಸಿದ್ದಾರೆ.

ಈಗಿನ ಕಾಲದಲ್ಲಿ ಯಾರು ಹೇಗೆ ಇರುತ್ತಾರೆ ಎಂದು ಹೇಳುವುದೇ ಕಷ್ಟ. ಎದುರುಗಡೆಯಿಂದ ನೋಡಲು ಒಳ್ಳೆಯವರಂತೆ ಕಂಡರೂ ಕೆಟ್ಟ ಗುಣನಡತೆಯನ್ನು ಹೊಂದಿರಬಹುದು. ಅದರಲ್ಲಿಯೂ ಮದುವೆಯಾಗುವ ಮುನ್ನ ಹುಡುಗನೇ ಆಗಿರಲಿ, ಹುಡುಗಿಯೇ ಇರಲಿ, ಜೀವನ ಸಂಗಾತಿಯಾಗಿ ಆಯ್ಕೆ ಮಾಡಿಕೊಳ್ಳುವ ವ್ಯಕ್ತಿಯ ಕುಟುಂಬ ಹಾಗೂ ಉದ್ಯೋಗದ ಹಿನ್ನಲೆಯನ್ನು ಪರಿಶೀಲಿಸುವುದು ಮಾತ್ರವಲ್ಲ, ಡಿಜಿಟಲ್ ಹಿನ್ನಲೆಯನ್ನು ಗಮನಿಸಬೇಕಂತೆ. ಇಲ್ಲದಿದ್ದರೆ ಗೊತ್ತಿಲ್ಲದೇ ಯಾಮಾರುವುದು ಗ್ಯಾರಂಟಿಯಂತೆ. ಈ ಬಗ್ಗೆ 22 ವರ್ಷದ ಯುವತಿಯೊಬ್ಬಳು ಮಾಡಿದ ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾಳೆ. ತಾನು ಹೇಗೆ ಅಪಾಯಕಾರಿ ಮದುವೆಯಿಂದ ಪಾರಾದೆ ಎನ್ನುವ ಬಗ್ಗೆ ವಿವರಿಸಿದ್ದು ಈ ಪೋಸ್ಟ್ವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ರೆಡ್ಡಿಟ್ ಖಾತೆಯಲ್ಲಿ ಯುವತಿಯೂ ಶೇರ್ ಮಾಡಿದ ಪೋಸ್ಟ್ನಲ್ಲಿ, 2025ರಲ್ಲಿ ಅರೇಂಜ್ಡ್ ಮ್ಯಾರೇಜ್: ಹುಡುಗಿಯರು ಡಿಜಿಟಲ್ ಹಿನ್ನೆಲೆ ಪರಿಶೀಲನೆ ಮಾಡಬೇಕಾದ ಅಗತ್ಯ’ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾಳೆ. ಈ ಪೋಸ್ಟ್ನಲ್ಲಿ, ನಾನು ಎಲ್ಲವನ್ನೂ ಪರಿಶೀಲಿಸಿದೆ. ಕೆಲವು ಉತ್ತಮ ಸ್ಥಾನದಲ್ಲಿರುವ ಪುರುಷರು ಎಷ್ಟು ಅಪಾಯಕಾರಿ ಎಂಬುದು ನನಗೆ ಚೆನ್ನಾಗಿ ಅರಿವಾಯಿತು. ಸಾಮಾನ್ಯವಾಗಿ ಹೆಚ್ಚಿನ ಹುಡುಗಿಯರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಕಲಿಯುವುದಕ್ಕಾಗಿ ನಾನು ಈ ವಿಚಾರವನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ ಎಂದು ಆಕೆ ಬರೆದುಕೊಂಡಿದ್ದಾಳೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!