ವಾಹನಗಳಿಗೆ ಇನ್ಷೂರೆನ್ಸ್ ಇಲ್ಲಾಂದ್ರೆ ಪೆಟ್ರೋಲ್ ಸಿಗಲ್ಲ? ಜಾರಿ ಬರುತ್ತಿವೆ ಹೊಸ ನಿಯಮಗಳು.

ಥರ್ಡ್ ಪಾರ್ಟಿ ಇನ್ಷೂರೆನ್ಸ್ ಇಲ್ಲದ ವಾಹನಗಳಿಗೆ ಸಾಕಷ್ಟು ನಿರ್ಬಂಧಗಳನ್ನು ವಿಧಿಸಲು ಸರ್ಕಾರ ಯೋಜಿಸಿದೆ. ಪೆಟ್ರೋಲ್, ಡೀಸಲ್ ಸಿಗುವುದಿಲ್ಲ. ಹೆದ್ದಾರಿಯಲ್ಲಿ ಫಾಸ್ಟ್ಯಾಗ್ ಲೇನ್ನಲ್ಲಿ ಹೋಗಲು ಆಗುವುದಿಲ್ಲ. ದೊಡ್ಡ ಮೊತ್ತದ ದಂಡ ಕಟ್ಟಬೇಕಾಗಬಹುದು. ವಾಹನಗಳಿಗೆ ಥರ್ಡ್ ಪಾರ್ಟಿ ಇನ್ಷೂರೆನ್ಸ್ ಅಳವಡಿಕೆಗೆ ಉತ್ತೇಜಿಸಲು ಹಲವು ಕ್ರಮಗಳನ್ನು ಸರ್ಕಾರ ಯೋಜಿಸುತ್ತಿದೆ.
ನವದೆಹಲಿ : ನಿಮ್ಮ ವಾಹನಗಳಿಗೆ ಥರ್ಡ್ ಪಾರ್ಟಿ ಇನ್ಷೂರೆನ್ಸ್ ಮಾಡಿಸದೇ ಇದ್ದರೆ ಪೆಟ್ರೋಲ್ ಬಂಕ್ನಲ್ಲಿ ನಿಮಗೆ ಪೆಟ್ರೋಲ್ ಅಥವಾ ಡೀಸಲ್ ಸಿಕ್ಕೋದೇ ಹೋಗಬಹುದು. ಹೆದ್ದಾರಿಯಲ್ಲಿ ಟೋಲ್ ಬಳಿ ಫಾಸ್ಟ್ಯಾಗ್ ಲೇನ್ನಲ್ಲಿ ಸಾಗಲು ನಿಮ್ಮ ವಾಹನಕ್ಕೆ ಅವಕಾಶ ಸಿಗದೇ ಹೋಗಬಹುದು. ಇನ್ಷೂರೆನ್ಸ್ ಇಲ್ಲದ ವಾಹನ ಮಾಲೀಕರಿಗೆ ಡ್ರೈವಿಂಗ್ ಲೈಸೆನ್ಸ್ ನವೀಕರಣ ಸಾಧ್ಯವಾಗದೇ ಹೋಗಬಹುದು. ಗಾಡಿಗೆ ಇನ್ಷೂರೆನ್ಸ್ ಇಲ್ಲದಿದ್ದರೆ ಇನ್ನೂ ಬೇರೆ ಬೇರೆ ನಿರ್ಬಂಧಗಳು, ದಂಡಗಳನ್ನು ನೀವು ಎದುರಿಸಬೇಕಾಗಬಹುದು. ಕೇಂದ್ರ ಸರ್ಕಾರ ಈ ರೀತಿಯ ಆಲೋಚನೆಯಲ್ಲಿದೆ.
ವಾಹನಗಳಿಗೆ ಥರ್ಡ್ ಪಾರ್ಟಿ ಇನ್ಷೂರೆನ್ಸ್ ಕವರೇಜ್ ಅಳವಡಿಕೆಗೆ ಉತ್ತೇಜಿಸಲು ವಿವಿಧ ಕ್ರಮಗಳನ್ನು ಅವಲೋಕಿಸುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಹಣಕಾಸು ಸಚಿವಾಲಯ ಮನವಿ ಮಾಡಿದೆ. ಭಾರತದಲ್ಲಿ ಈಗಲೂ ಕೂಡ ಹೆಚ್ಚಿನ ವಾಹನಗಳು ಥರ್ಡ್ ಪಾರ್ಟಿ ಇನ್ಷೂರೆನ್ಸ್ ಹೊಂದಿಲ್ಲ. 1988ರ ಮೋಟಾರು ವಾಹನ ಕಾಯ್ದೆ ಪ್ರಕಾರ ಎಲ್ಲಾ ಮೋಟಾರು ವಾಹನಗಳು ಥರ್ಡ್ ಪಾರ್ಟಿ ಇನ್ಷೂರೆನ್ಸ್ ಪಾಲಿಸಿ ಮಾಡಿಸುವುದು ಕಡ್ಡಾಯವಾಗಿದೆ.
ವಾಹನಗಳಿಗೆ ಥರ್ಡ್ ಪಾರ್ಟಿ ವಿಮಾ ಕವರೇಜ್ ಅನ್ನು ಅಳವಡಿಸಲು ಉತ್ತೇಜಿಸಲು ಸಂಸದೀಯ ಸ್ಥಾಯಿ ಸಮಿತಿಯೊಂದು ಸರ್ಕಾರಕ್ಕೆ ಕೆಲ ಶಿಫಾರಸುಗಳನ್ನು ನೀಡಿತ್ತು. ಸರ್ಕಾರ ಈ ವಿಚಾರದಲ್ಲಿ ಗಂಭೀರವಾಗಿದೆ.

ವಾಹನಗಳಿಗೆ ಥರ್ಡ್ ಪಾರ್ಟಿ ಇನ್ಷೂರೆನ್ಸ್ ಯಾಕೆ ?
ವಾಹನಗಳ ಇನ್ಷೂರೆನ್ಸ್ನಲ್ಲಿ ಮೂರು ವಿಧಗಳಿವೆ. ಫಸ್ಟ್ ಪಾರ್ಟಿ ಇನ್ಷೂರೆನ್ಸ್, ಥರ್ಡ್ ಪಾರ್ಟಿ ಇನ್ಷೂರೆನ್ಸ್ ಮತ್ತು ಕಾಂಪ್ರೆಹೆನ್ಸಿವ್ ಇನ್ಷೂರೆನ್ಸ್. ಇದರಲ್ಲಿ ಫಸ್ಟ್ ಪಾರ್ಟಿ ಇನ್ಷೂರೆನ್ಸ್ ಎಂಬುದು ಪಾಲಿಸಿದಾರನಿಗೆ ಮತ್ತು ವಾಹನಕ್ಕೆ ಮಾತ್ರ ಇನ್ಷೂರೆನ್ಸ್ ಕವರೇಜ್ ಸಿಗುತ್ತದೆ.
ಥರ್ಡ್ ಪಾರ್ಟಿ ಇನ್ಷೂರೆನ್ಸ್ನಲ್ಲಿ, ಥರ್ಡ್ ಪಾರ್ಟಿ ಅಥವಾ ಮೂರನೇ ವ್ಯಕ್ತಿಗೆ ವಿಮಾ ಕವರೇಜ್ ಸಿಗುತ್ತದೆ. ಅಂದರೆ, ಥರ್ಡ್ ಪಾರ್ಟಿ ಇನ್ಷೂರೆನ್ಸ್ ಹೊಂದಿರುವ ವಾಹನದಿಂದ ಯಾವುದಾದರೂ ಅಪಘಾತ ಸಂಭವಿಸಿದರೆ, ಅದರಿಂದ ಬೇರೆ ವ್ಯಕ್ತಿಗಳಿಗೆ ಹಾನಿಯಾದರೆ, ಅದಕ್ಕೆ ವಿಮಾ ಕವರೇಜ್ ಇರುತ್ತದೆ.
ಕಾಂಪ್ರೆಹೆನ್ಸಿವ್ ಇನ್ಷೂರೆನ್ಸ್ ಪಾಲಿಸಿಯು ಫಸ್ಟ್ ಪಾರ್ಟಿ ಮತ್ತು ಥರ್ಡ್ ಪಾರ್ಟಿ ಎರಡನ್ನೂ ಒಳಗೊಂಡಿರುವ ಪಾಲಿಸಿಯಾಗಿದೆ. ವಾಹನದಿಂದ ಬೇರೆಯವರಿಗೆ ಹಾನಿಯಾದ ಸಂದರ್ಭದಲ್ಲಿ ನಷ್ಟ ಭರಿಸಲು ಥರ್ಡ್ ಪಾರ್ಟಿ ಇನ್ಷೂರೆನ್ಸ್ ಬಹಳ ಅಗತ್ಯ. ಈ ಕಾರಣಕ್ಕೆ ಸರ್ಕಾರವು ಈ ವಿಮೆ ಅಳವಡಿಕೆಗೆ ಒತ್ತು ನೀಡುತ್ತಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!