ವಾಹನಗಳಿಗೆ ಇನ್ಷೂರೆನ್ಸ್ ಇಲ್ಲಾಂದ್ರೆ ಪೆಟ್ರೋಲ್ ಸಿಗಲ್ಲ? ಜಾರಿ ಬರುತ್ತಿವೆ ಹೊಸ ನಿಯಮಗಳು.

ಥರ್ಡ್ ಪಾರ್ಟಿ ಇನ್ಷೂರೆನ್ಸ್ ಇಲ್ಲದ ವಾಹನಗಳಿಗೆ ಸಾಕಷ್ಟು ನಿರ್ಬಂಧಗಳನ್ನು ವಿಧಿಸಲು ಸರ್ಕಾರ ಯೋಜಿಸಿದೆ. ಪೆಟ್ರೋಲ್, ಡೀಸಲ್ ಸಿಗುವುದಿಲ್ಲ. ಹೆದ್ದಾರಿಯಲ್ಲಿ ಫಾಸ್ಟ್ಯಾಗ್ ಲೇನ್ನಲ್ಲಿ ಹೋಗಲು ಆಗುವುದಿಲ್ಲ. ದೊಡ್ಡ ಮೊತ್ತದ ದಂಡ ಕಟ್ಟಬೇಕಾಗಬಹುದು. ವಾಹನಗಳಿಗೆ ಥರ್ಡ್ ಪಾರ್ಟಿ ಇನ್ಷೂರೆನ್ಸ್ ಅಳವಡಿಕೆಗೆ ಉತ್ತೇಜಿಸಲು ಹಲವು ಕ್ರಮಗಳನ್ನು ಸರ್ಕಾರ ಯೋಜಿಸುತ್ತಿದೆ.
ನವದೆಹಲಿ : ನಿಮ್ಮ ವಾಹನಗಳಿಗೆ ಥರ್ಡ್ ಪಾರ್ಟಿ ಇನ್ಷೂರೆನ್ಸ್ ಮಾಡಿಸದೇ ಇದ್ದರೆ ಪೆಟ್ರೋಲ್ ಬಂಕ್ನಲ್ಲಿ ನಿಮಗೆ ಪೆಟ್ರೋಲ್ ಅಥವಾ ಡೀಸಲ್ ಸಿಕ್ಕೋದೇ ಹೋಗಬಹುದು. ಹೆದ್ದಾರಿಯಲ್ಲಿ ಟೋಲ್ ಬಳಿ ಫಾಸ್ಟ್ಯಾಗ್ ಲೇನ್ನಲ್ಲಿ ಸಾಗಲು ನಿಮ್ಮ ವಾಹನಕ್ಕೆ ಅವಕಾಶ ಸಿಗದೇ ಹೋಗಬಹುದು. ಇನ್ಷೂರೆನ್ಸ್ ಇಲ್ಲದ ವಾಹನ ಮಾಲೀಕರಿಗೆ ಡ್ರೈವಿಂಗ್ ಲೈಸೆನ್ಸ್ ನವೀಕರಣ ಸಾಧ್ಯವಾಗದೇ ಹೋಗಬಹುದು. ಗಾಡಿಗೆ ಇನ್ಷೂರೆನ್ಸ್ ಇಲ್ಲದಿದ್ದರೆ ಇನ್ನೂ ಬೇರೆ ಬೇರೆ ನಿರ್ಬಂಧಗಳು, ದಂಡಗಳನ್ನು ನೀವು ಎದುರಿಸಬೇಕಾಗಬಹುದು. ಕೇಂದ್ರ ಸರ್ಕಾರ ಈ ರೀತಿಯ ಆಲೋಚನೆಯಲ್ಲಿದೆ.
ವಾಹನಗಳಿಗೆ ಥರ್ಡ್ ಪಾರ್ಟಿ ಇನ್ಷೂರೆನ್ಸ್ ಕವರೇಜ್ ಅಳವಡಿಕೆಗೆ ಉತ್ತೇಜಿಸಲು ವಿವಿಧ ಕ್ರಮಗಳನ್ನು ಅವಲೋಕಿಸುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಹಣಕಾಸು ಸಚಿವಾಲಯ ಮನವಿ ಮಾಡಿದೆ. ಭಾರತದಲ್ಲಿ ಈಗಲೂ ಕೂಡ ಹೆಚ್ಚಿನ ವಾಹನಗಳು ಥರ್ಡ್ ಪಾರ್ಟಿ ಇನ್ಷೂರೆನ್ಸ್ ಹೊಂದಿಲ್ಲ. 1988ರ ಮೋಟಾರು ವಾಹನ ಕಾಯ್ದೆ ಪ್ರಕಾರ ಎಲ್ಲಾ ಮೋಟಾರು ವಾಹನಗಳು ಥರ್ಡ್ ಪಾರ್ಟಿ ಇನ್ಷೂರೆನ್ಸ್ ಪಾಲಿಸಿ ಮಾಡಿಸುವುದು ಕಡ್ಡಾಯವಾಗಿದೆ.
ವಾಹನಗಳಿಗೆ ಥರ್ಡ್ ಪಾರ್ಟಿ ವಿಮಾ ಕವರೇಜ್ ಅನ್ನು ಅಳವಡಿಸಲು ಉತ್ತೇಜಿಸಲು ಸಂಸದೀಯ ಸ್ಥಾಯಿ ಸಮಿತಿಯೊಂದು ಸರ್ಕಾರಕ್ಕೆ ಕೆಲ ಶಿಫಾರಸುಗಳನ್ನು ನೀಡಿತ್ತು. ಸರ್ಕಾರ ಈ ವಿಚಾರದಲ್ಲಿ ಗಂಭೀರವಾಗಿದೆ.

ವಾಹನಗಳಿಗೆ ಥರ್ಡ್ ಪಾರ್ಟಿ ಇನ್ಷೂರೆನ್ಸ್ ಯಾಕೆ ?
ವಾಹನಗಳ ಇನ್ಷೂರೆನ್ಸ್ನಲ್ಲಿ ಮೂರು ವಿಧಗಳಿವೆ. ಫಸ್ಟ್ ಪಾರ್ಟಿ ಇನ್ಷೂರೆನ್ಸ್, ಥರ್ಡ್ ಪಾರ್ಟಿ ಇನ್ಷೂರೆನ್ಸ್ ಮತ್ತು ಕಾಂಪ್ರೆಹೆನ್ಸಿವ್ ಇನ್ಷೂರೆನ್ಸ್. ಇದರಲ್ಲಿ ಫಸ್ಟ್ ಪಾರ್ಟಿ ಇನ್ಷೂರೆನ್ಸ್ ಎಂಬುದು ಪಾಲಿಸಿದಾರನಿಗೆ ಮತ್ತು ವಾಹನಕ್ಕೆ ಮಾತ್ರ ಇನ್ಷೂರೆನ್ಸ್ ಕವರೇಜ್ ಸಿಗುತ್ತದೆ.
ಥರ್ಡ್ ಪಾರ್ಟಿ ಇನ್ಷೂರೆನ್ಸ್ನಲ್ಲಿ, ಥರ್ಡ್ ಪಾರ್ಟಿ ಅಥವಾ ಮೂರನೇ ವ್ಯಕ್ತಿಗೆ ವಿಮಾ ಕವರೇಜ್ ಸಿಗುತ್ತದೆ. ಅಂದರೆ, ಥರ್ಡ್ ಪಾರ್ಟಿ ಇನ್ಷೂರೆನ್ಸ್ ಹೊಂದಿರುವ ವಾಹನದಿಂದ ಯಾವುದಾದರೂ ಅಪಘಾತ ಸಂಭವಿಸಿದರೆ, ಅದರಿಂದ ಬೇರೆ ವ್ಯಕ್ತಿಗಳಿಗೆ ಹಾನಿಯಾದರೆ, ಅದಕ್ಕೆ ವಿಮಾ ಕವರೇಜ್ ಇರುತ್ತದೆ.
ಕಾಂಪ್ರೆಹೆನ್ಸಿವ್ ಇನ್ಷೂರೆನ್ಸ್ ಪಾಲಿಸಿಯು ಫಸ್ಟ್ ಪಾರ್ಟಿ ಮತ್ತು ಥರ್ಡ್ ಪಾರ್ಟಿ ಎರಡನ್ನೂ ಒಳಗೊಂಡಿರುವ ಪಾಲಿಸಿಯಾಗಿದೆ. ವಾಹನದಿಂದ ಬೇರೆಯವರಿಗೆ ಹಾನಿಯಾದ ಸಂದರ್ಭದಲ್ಲಿ ನಷ್ಟ ಭರಿಸಲು ಥರ್ಡ್ ಪಾರ್ಟಿ ಇನ್ಷೂರೆನ್ಸ್ ಬಹಳ ಅಗತ್ಯ. ಈ ಕಾರಣಕ್ಕೆ ಸರ್ಕಾರವು ಈ ವಿಮೆ ಅಳವಡಿಕೆಗೆ ಒತ್ತು ನೀಡುತ್ತಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!