ವಾಹನಗಳಿಗೆ ಇನ್ಷೂರೆನ್ಸ್ ಇಲ್ಲಾಂದ್ರೆ ಪೆಟ್ರೋಲ್ ಸಿಗಲ್ಲ? ಜಾರಿ ಬರುತ್ತಿವೆ ಹೊಸ ನಿಯಮಗಳು.

ಥರ್ಡ್ ಪಾರ್ಟಿ ಇನ್ಷೂರೆನ್ಸ್ ಇಲ್ಲದ ವಾಹನಗಳಿಗೆ ಸಾಕಷ್ಟು ನಿರ್ಬಂಧಗಳನ್ನು ವಿಧಿಸಲು ಸರ್ಕಾರ ಯೋಜಿಸಿದೆ. ಪೆಟ್ರೋಲ್, ಡೀಸಲ್ ಸಿಗುವುದಿಲ್ಲ. ಹೆದ್ದಾರಿಯಲ್ಲಿ ಫಾಸ್ಟ್ಯಾಗ್ ಲೇನ್ನಲ್ಲಿ ಹೋಗಲು ಆಗುವುದಿಲ್ಲ. ದೊಡ್ಡ ಮೊತ್ತದ ದಂಡ ಕಟ್ಟಬೇಕಾಗಬಹುದು. ವಾಹನಗಳಿಗೆ ಥರ್ಡ್ ಪಾರ್ಟಿ ಇನ್ಷೂರೆನ್ಸ್ ಅಳವಡಿಕೆಗೆ ಉತ್ತೇಜಿಸಲು ಹಲವು ಕ್ರಮಗಳನ್ನು ಸರ್ಕಾರ ಯೋಜಿಸುತ್ತಿದೆ.
ನವದೆಹಲಿ : ನಿಮ್ಮ ವಾಹನಗಳಿಗೆ ಥರ್ಡ್ ಪಾರ್ಟಿ ಇನ್ಷೂರೆನ್ಸ್ ಮಾಡಿಸದೇ ಇದ್ದರೆ ಪೆಟ್ರೋಲ್ ಬಂಕ್ನಲ್ಲಿ ನಿಮಗೆ ಪೆಟ್ರೋಲ್ ಅಥವಾ ಡೀಸಲ್ ಸಿಕ್ಕೋದೇ ಹೋಗಬಹುದು. ಹೆದ್ದಾರಿಯಲ್ಲಿ ಟೋಲ್ ಬಳಿ ಫಾಸ್ಟ್ಯಾಗ್ ಲೇನ್ನಲ್ಲಿ ಸಾಗಲು ನಿಮ್ಮ ವಾಹನಕ್ಕೆ ಅವಕಾಶ ಸಿಗದೇ ಹೋಗಬಹುದು. ಇನ್ಷೂರೆನ್ಸ್ ಇಲ್ಲದ ವಾಹನ ಮಾಲೀಕರಿಗೆ ಡ್ರೈವಿಂಗ್ ಲೈಸೆನ್ಸ್ ನವೀಕರಣ ಸಾಧ್ಯವಾಗದೇ ಹೋಗಬಹುದು. ಗಾಡಿಗೆ ಇನ್ಷೂರೆನ್ಸ್ ಇಲ್ಲದಿದ್ದರೆ ಇನ್ನೂ ಬೇರೆ ಬೇರೆ ನಿರ್ಬಂಧಗಳು, ದಂಡಗಳನ್ನು ನೀವು ಎದುರಿಸಬೇಕಾಗಬಹುದು. ಕೇಂದ್ರ ಸರ್ಕಾರ ಈ ರೀತಿಯ ಆಲೋಚನೆಯಲ್ಲಿದೆ.
ವಾಹನಗಳಿಗೆ ಥರ್ಡ್ ಪಾರ್ಟಿ ಇನ್ಷೂರೆನ್ಸ್ ಕವರೇಜ್ ಅಳವಡಿಕೆಗೆ ಉತ್ತೇಜಿಸಲು ವಿವಿಧ ಕ್ರಮಗಳನ್ನು ಅವಲೋಕಿಸುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಹಣಕಾಸು ಸಚಿವಾಲಯ ಮನವಿ ಮಾಡಿದೆ. ಭಾರತದಲ್ಲಿ ಈಗಲೂ ಕೂಡ ಹೆಚ್ಚಿನ ವಾಹನಗಳು ಥರ್ಡ್ ಪಾರ್ಟಿ ಇನ್ಷೂರೆನ್ಸ್ ಹೊಂದಿಲ್ಲ. 1988ರ ಮೋಟಾರು ವಾಹನ ಕಾಯ್ದೆ ಪ್ರಕಾರ ಎಲ್ಲಾ ಮೋಟಾರು ವಾಹನಗಳು ಥರ್ಡ್ ಪಾರ್ಟಿ ಇನ್ಷೂರೆನ್ಸ್ ಪಾಲಿಸಿ ಮಾಡಿಸುವುದು ಕಡ್ಡಾಯವಾಗಿದೆ.
ವಾಹನಗಳಿಗೆ ಥರ್ಡ್ ಪಾರ್ಟಿ ವಿಮಾ ಕವರೇಜ್ ಅನ್ನು ಅಳವಡಿಸಲು ಉತ್ತೇಜಿಸಲು ಸಂಸದೀಯ ಸ್ಥಾಯಿ ಸಮಿತಿಯೊಂದು ಸರ್ಕಾರಕ್ಕೆ ಕೆಲ ಶಿಫಾರಸುಗಳನ್ನು ನೀಡಿತ್ತು. ಸರ್ಕಾರ ಈ ವಿಚಾರದಲ್ಲಿ ಗಂಭೀರವಾಗಿದೆ.

ವಾಹನಗಳಿಗೆ ಥರ್ಡ್ ಪಾರ್ಟಿ ಇನ್ಷೂರೆನ್ಸ್ ಯಾಕೆ ?
ವಾಹನಗಳ ಇನ್ಷೂರೆನ್ಸ್ನಲ್ಲಿ ಮೂರು ವಿಧಗಳಿವೆ. ಫಸ್ಟ್ ಪಾರ್ಟಿ ಇನ್ಷೂರೆನ್ಸ್, ಥರ್ಡ್ ಪಾರ್ಟಿ ಇನ್ಷೂರೆನ್ಸ್ ಮತ್ತು ಕಾಂಪ್ರೆಹೆನ್ಸಿವ್ ಇನ್ಷೂರೆನ್ಸ್. ಇದರಲ್ಲಿ ಫಸ್ಟ್ ಪಾರ್ಟಿ ಇನ್ಷೂರೆನ್ಸ್ ಎಂಬುದು ಪಾಲಿಸಿದಾರನಿಗೆ ಮತ್ತು ವಾಹನಕ್ಕೆ ಮಾತ್ರ ಇನ್ಷೂರೆನ್ಸ್ ಕವರೇಜ್ ಸಿಗುತ್ತದೆ.
ಥರ್ಡ್ ಪಾರ್ಟಿ ಇನ್ಷೂರೆನ್ಸ್ನಲ್ಲಿ, ಥರ್ಡ್ ಪಾರ್ಟಿ ಅಥವಾ ಮೂರನೇ ವ್ಯಕ್ತಿಗೆ ವಿಮಾ ಕವರೇಜ್ ಸಿಗುತ್ತದೆ. ಅಂದರೆ, ಥರ್ಡ್ ಪಾರ್ಟಿ ಇನ್ಷೂರೆನ್ಸ್ ಹೊಂದಿರುವ ವಾಹನದಿಂದ ಯಾವುದಾದರೂ ಅಪಘಾತ ಸಂಭವಿಸಿದರೆ, ಅದರಿಂದ ಬೇರೆ ವ್ಯಕ್ತಿಗಳಿಗೆ ಹಾನಿಯಾದರೆ, ಅದಕ್ಕೆ ವಿಮಾ ಕವರೇಜ್ ಇರುತ್ತದೆ.
ಕಾಂಪ್ರೆಹೆನ್ಸಿವ್ ಇನ್ಷೂರೆನ್ಸ್ ಪಾಲಿಸಿಯು ಫಸ್ಟ್ ಪಾರ್ಟಿ ಮತ್ತು ಥರ್ಡ್ ಪಾರ್ಟಿ ಎರಡನ್ನೂ ಒಳಗೊಂಡಿರುವ ಪಾಲಿಸಿಯಾಗಿದೆ. ವಾಹನದಿಂದ ಬೇರೆಯವರಿಗೆ ಹಾನಿಯಾದ ಸಂದರ್ಭದಲ್ಲಿ ನಷ್ಟ ಭರಿಸಲು ಥರ್ಡ್ ಪಾರ್ಟಿ ಇನ್ಷೂರೆನ್ಸ್ ಬಹಳ ಅಗತ್ಯ. ಈ ಕಾರಣಕ್ಕೆ ಸರ್ಕಾರವು ಈ ವಿಮೆ ಅಳವಡಿಕೆಗೆ ಒತ್ತು ನೀಡುತ್ತಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು