ವಾಹನಗಳಿಗೆ ಇನ್ಷೂರೆನ್ಸ್ ಇಲ್ಲಾಂದ್ರೆ ಪೆಟ್ರೋಲ್ ಸಿಗಲ್ಲ? ಜಾರಿ ಬರುತ್ತಿವೆ ಹೊಸ ನಿಯಮಗಳು.

ಥರ್ಡ್ ಪಾರ್ಟಿ ಇನ್ಷೂರೆನ್ಸ್ ಇಲ್ಲದ ವಾಹನಗಳಿಗೆ ಸಾಕಷ್ಟು ನಿರ್ಬಂಧಗಳನ್ನು ವಿಧಿಸಲು ಸರ್ಕಾರ ಯೋಜಿಸಿದೆ. ಪೆಟ್ರೋಲ್, ಡೀಸಲ್ ಸಿಗುವುದಿಲ್ಲ. ಹೆದ್ದಾರಿಯಲ್ಲಿ ಫಾಸ್ಟ್ಯಾಗ್ ಲೇನ್ನಲ್ಲಿ ಹೋಗಲು ಆಗುವುದಿಲ್ಲ. ದೊಡ್ಡ ಮೊತ್ತದ ದಂಡ ಕಟ್ಟಬೇಕಾಗಬಹುದು. ವಾಹನಗಳಿಗೆ ಥರ್ಡ್ ಪಾರ್ಟಿ ಇನ್ಷೂರೆನ್ಸ್ ಅಳವಡಿಕೆಗೆ ಉತ್ತೇಜಿಸಲು ಹಲವು ಕ್ರಮಗಳನ್ನು ಸರ್ಕಾರ ಯೋಜಿಸುತ್ತಿದೆ.
ನವದೆಹಲಿ : ನಿಮ್ಮ ವಾಹನಗಳಿಗೆ ಥರ್ಡ್ ಪಾರ್ಟಿ ಇನ್ಷೂರೆನ್ಸ್ ಮಾಡಿಸದೇ ಇದ್ದರೆ ಪೆಟ್ರೋಲ್ ಬಂಕ್ನಲ್ಲಿ ನಿಮಗೆ ಪೆಟ್ರೋಲ್ ಅಥವಾ ಡೀಸಲ್ ಸಿಕ್ಕೋದೇ ಹೋಗಬಹುದು. ಹೆದ್ದಾರಿಯಲ್ಲಿ ಟೋಲ್ ಬಳಿ ಫಾಸ್ಟ್ಯಾಗ್ ಲೇನ್ನಲ್ಲಿ ಸಾಗಲು ನಿಮ್ಮ ವಾಹನಕ್ಕೆ ಅವಕಾಶ ಸಿಗದೇ ಹೋಗಬಹುದು. ಇನ್ಷೂರೆನ್ಸ್ ಇಲ್ಲದ ವಾಹನ ಮಾಲೀಕರಿಗೆ ಡ್ರೈವಿಂಗ್ ಲೈಸೆನ್ಸ್ ನವೀಕರಣ ಸಾಧ್ಯವಾಗದೇ ಹೋಗಬಹುದು. ಗಾಡಿಗೆ ಇನ್ಷೂರೆನ್ಸ್ ಇಲ್ಲದಿದ್ದರೆ ಇನ್ನೂ ಬೇರೆ ಬೇರೆ ನಿರ್ಬಂಧಗಳು, ದಂಡಗಳನ್ನು ನೀವು ಎದುರಿಸಬೇಕಾಗಬಹುದು. ಕೇಂದ್ರ ಸರ್ಕಾರ ಈ ರೀತಿಯ ಆಲೋಚನೆಯಲ್ಲಿದೆ.
ವಾಹನಗಳಿಗೆ ಥರ್ಡ್ ಪಾರ್ಟಿ ಇನ್ಷೂರೆನ್ಸ್ ಕವರೇಜ್ ಅಳವಡಿಕೆಗೆ ಉತ್ತೇಜಿಸಲು ವಿವಿಧ ಕ್ರಮಗಳನ್ನು ಅವಲೋಕಿಸುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಹಣಕಾಸು ಸಚಿವಾಲಯ ಮನವಿ ಮಾಡಿದೆ. ಭಾರತದಲ್ಲಿ ಈಗಲೂ ಕೂಡ ಹೆಚ್ಚಿನ ವಾಹನಗಳು ಥರ್ಡ್ ಪಾರ್ಟಿ ಇನ್ಷೂರೆನ್ಸ್ ಹೊಂದಿಲ್ಲ. 1988ರ ಮೋಟಾರು ವಾಹನ ಕಾಯ್ದೆ ಪ್ರಕಾರ ಎಲ್ಲಾ ಮೋಟಾರು ವಾಹನಗಳು ಥರ್ಡ್ ಪಾರ್ಟಿ ಇನ್ಷೂರೆನ್ಸ್ ಪಾಲಿಸಿ ಮಾಡಿಸುವುದು ಕಡ್ಡಾಯವಾಗಿದೆ.
ವಾಹನಗಳಿಗೆ ಥರ್ಡ್ ಪಾರ್ಟಿ ವಿಮಾ ಕವರೇಜ್ ಅನ್ನು ಅಳವಡಿಸಲು ಉತ್ತೇಜಿಸಲು ಸಂಸದೀಯ ಸ್ಥಾಯಿ ಸಮಿತಿಯೊಂದು ಸರ್ಕಾರಕ್ಕೆ ಕೆಲ ಶಿಫಾರಸುಗಳನ್ನು ನೀಡಿತ್ತು. ಸರ್ಕಾರ ಈ ವಿಚಾರದಲ್ಲಿ ಗಂಭೀರವಾಗಿದೆ.

ವಾಹನಗಳಿಗೆ ಥರ್ಡ್ ಪಾರ್ಟಿ ಇನ್ಷೂರೆನ್ಸ್ ಯಾಕೆ ?
ವಾಹನಗಳ ಇನ್ಷೂರೆನ್ಸ್ನಲ್ಲಿ ಮೂರು ವಿಧಗಳಿವೆ. ಫಸ್ಟ್ ಪಾರ್ಟಿ ಇನ್ಷೂರೆನ್ಸ್, ಥರ್ಡ್ ಪಾರ್ಟಿ ಇನ್ಷೂರೆನ್ಸ್ ಮತ್ತು ಕಾಂಪ್ರೆಹೆನ್ಸಿವ್ ಇನ್ಷೂರೆನ್ಸ್. ಇದರಲ್ಲಿ ಫಸ್ಟ್ ಪಾರ್ಟಿ ಇನ್ಷೂರೆನ್ಸ್ ಎಂಬುದು ಪಾಲಿಸಿದಾರನಿಗೆ ಮತ್ತು ವಾಹನಕ್ಕೆ ಮಾತ್ರ ಇನ್ಷೂರೆನ್ಸ್ ಕವರೇಜ್ ಸಿಗುತ್ತದೆ.
ಥರ್ಡ್ ಪಾರ್ಟಿ ಇನ್ಷೂರೆನ್ಸ್ನಲ್ಲಿ, ಥರ್ಡ್ ಪಾರ್ಟಿ ಅಥವಾ ಮೂರನೇ ವ್ಯಕ್ತಿಗೆ ವಿಮಾ ಕವರೇಜ್ ಸಿಗುತ್ತದೆ. ಅಂದರೆ, ಥರ್ಡ್ ಪಾರ್ಟಿ ಇನ್ಷೂರೆನ್ಸ್ ಹೊಂದಿರುವ ವಾಹನದಿಂದ ಯಾವುದಾದರೂ ಅಪಘಾತ ಸಂಭವಿಸಿದರೆ, ಅದರಿಂದ ಬೇರೆ ವ್ಯಕ್ತಿಗಳಿಗೆ ಹಾನಿಯಾದರೆ, ಅದಕ್ಕೆ ವಿಮಾ ಕವರೇಜ್ ಇರುತ್ತದೆ.
ಕಾಂಪ್ರೆಹೆನ್ಸಿವ್ ಇನ್ಷೂರೆನ್ಸ್ ಪಾಲಿಸಿಯು ಫಸ್ಟ್ ಪಾರ್ಟಿ ಮತ್ತು ಥರ್ಡ್ ಪಾರ್ಟಿ ಎರಡನ್ನೂ ಒಳಗೊಂಡಿರುವ ಪಾಲಿಸಿಯಾಗಿದೆ. ವಾಹನದಿಂದ ಬೇರೆಯವರಿಗೆ ಹಾನಿಯಾದ ಸಂದರ್ಭದಲ್ಲಿ ನಷ್ಟ ಭರಿಸಲು ಥರ್ಡ್ ಪಾರ್ಟಿ ಇನ್ಷೂರೆನ್ಸ್ ಬಹಳ ಅಗತ್ಯ. ಈ ಕಾರಣಕ್ಕೆ ಸರ್ಕಾರವು ಈ ವಿಮೆ ಅಳವಡಿಕೆಗೆ ಒತ್ತು ನೀಡುತ್ತಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!