ವಿದ್ಯಾರ್ಥಿನಿಯ ಕೂದಲಿಗೆ ಬಿತ್ತು ಕತ್ತರಿ; ರೈಲು ನಿಲ್ದಾಣದಲ್ಲಿ ಕೂದಲು ಕಳ್ಳತನ!!

ಸಾಮಾನ್ಯವಾಗಿ ರೈಲು ನಿಲ್ದಾಣಗಳಲ್ಲಿ ಬ್ಯಾಗ್ಗಳು, ಪರ್ಸ್, ಮೊಬೈಲ್ ಕಳ್ಳತನವಾಗುವುದನ್ನು ಕೇಳಿದ್ದೇವೆ, ನೋಡಿದ್ದೇವೆ ಆದರೆ ಕೂದಲು ಕಳ್ಳತನ ಮಾಡಿರುವುದನ್ನು ಕೇಳಿರಲು ಸಾಧ್ಯವಿಲ್ಲ. ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿನಿಯ ಕೂದಲು ಕತ್ತರಿಸಿ ಕದ್ದೊಯ್ದಿರುವ ಘಟನೆ ದಾದರ್ ರೈಲು ನಿಲ್ದಾಣದಲ್ಲಿ ನಡೆದಿದೆ.
ದಾದರ್ ನಿಲ್ದಾಣದಲ್ಲಿ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯ ಕೂದಲನ್ನು ಕತ್ತರಿಸಲಾಗಿದೆ. ಕತ್ತರಿಸಿ ಬ್ಯಾಗ್ನಲ್ಲಿ ಹಾಕಿಕೊಂಡು ವ್ಯಕ್ತಿ ಓಡಿ ಹೋಗಿದ್ದಾನೆ. ಆಕೆ ಕಳ್ಳನ ಹಿಂದೆ ಓಡಿ ಹೋಗಿ ಹಿಡಿಯಲು ಪ್ರಯತ್ನಿಸಿದರೂ ಕೂಡ ಸಾಧ್ಯವಾಗಲಿಲ್ಲ. ಜನರ ಮಧ್ಯೆ ನುಸುಳಿ ಪರಾರಿಯಾಗಿದ್ದಾನೆ.
ವಿದ್ಯಾರ್ಥಿನಿ ದೂರಿನ ಮೇರೆಗೆ ಮುಂಬೈ ಸೆಂಟ್ರಲ್ ಲೋಹ್ಮಾರ್ಗ್ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಮೂಲಕ ಆರೋಪಿಯ ಹುಡುಕಾಟ ಆರಂಭಿಸಿದ್ದಾರೆ.
ಆಕೆ ಕಲ್ಯಾಣ್ ನಿವಾಸಿಯಾಗಿದ್ದು, ಬೆಳಗ್ಗೆ 8 ಗಂಟೆಗೆ ಕಾಲೇಜಿಗೆ ಹೊರಟವಳು ದಾದರ್ ನಿಲ್ದಾಣದಲ್ಲಿ ಇಳಿದಿದ್ದಳು. ದಾದರ್ ಬ್ರಿಡ್ಜ್ ಟಿಕೆಟ್ ಬುಕಿಂಗ್ ಬಳಿ ಬಂದಾಗ ಇದ್ದಕ್ಕಿದ್ದಂತೆ ಬೆನ್ನಿಗೆ ಚೂಪಾದ ವಸ್ತು ತಾಕಿದಂತಾಯಿತು. ಕೆಳಗೆ ನೋಡಿದಾಗ ಕೂದಲು ಬಿದ್ದಿತ್ತು.
ಓರ್ವ ವ್ಯಕ್ತಿ ಕೂದಲನ್ನು ಬ್ಯಾಗ್ಗೆ ತುಂಬಿಸಿಕೊಂಡು ಓಡಿ ಹೋಗುತ್ತಿರುವುದು ಕಂಡುಬಂದಿತ್ತು. ಆಕೆಯ ಅರ್ಧದಷ್ಟು ಕೂದಲನ್ನು ಕತ್ತರಿಸಲಾಗಿತ್ತು. ಆಕೆ ಹೆದರದೆ ಧೈರ್ಯವಾಗಿ ಆತನ ಹಿಂದೆ ಓಡಿ ಹಿಡಿಯಲು ಪ್ರಯತ್ನಿಸಿದಳು ಆದರೆ ಸಾಧ್ಯವಾಗಲಿಲ್ಲ.
ಮುಂಬೈ ಸೆಂಟ್ರಲ್ ಲೋಹ್ಮಾರ್ಗ್ ಪೊಲೀಸ್ ಠಾಣೆಗೆ ಬಂದು ಸಂಪೂರ್ಣ ಘಟನೆಯನ್ನು ವಿವರಿಸಿ ದೂರು ನೀಡಿದ್ದಾಳೆ. ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಠಾಣೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವ ಮೂಲಕ ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರೈಲ್ವೆ ಆಡಳಿತ ಭದ್ರತೆ ಬಗ್ಗೆ ನಿಗಾ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!