ವಿದ್ಯುತ್ ಉತ್ಪಾದನೆ ಹೆಚ್ಚಳ: ಮೂರನೇ ಕ್ರಮಾಂಕಕ್ಕೇರಿದ ಭಾರತ….

ಕಳೆದ ಐದು ವರ್ಷದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿರುವ ದೇಶಗಳ ಸಾಲಿನಲ್ಲಿ ಭಾರತ 3ನೇ ಸ್ಥಾನ ಪಡೆದಿದೆ. ಚೀನಾ, ಅಮೆರಿಕ ನಂತರ ಭಾರತವು ವಿದ್ಯುತ್ ಉತ್ಪಾದನಾ ಸಾಮರ್ಥ್ಯದಲ್ಲಿ ಅತಿ ಹೆಚ್ಚಳದ ಪ್ರಾಧಾನ್ಯತೆಯನ್ನು ಕಂಡಿದೆ ಎಂದು ಐಇಎ ಹೇಳಿದೆ. ಭಾರತದಲ್ಲಿ ಕಮರ್ಷಿಯಲ್ ಮತ್ತು ರೆಸಿಡೆನ್ಷಿಯಲ್ ಸ್ಥಳ, ಎಸಿ, ಗೃಹೋಪಕರಣ, ಕೈಗಾರಿಕೆಗಳು ವಿದ್ಯುತ್ಗೆ ಬೇಡಿಕೆ ಹೆಚ್ಚಿಸಿವೆ ಎಂದು ಹೇಳಲಾಗ್ತಾ ಇದೆ.

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಸಾಂಪ್ರದಾಯಿಕವಾಗಿ ಕಲ್ಲಿದ್ದಲು ಮೂಲವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸರ್ಕಾರವು ಪರ್ಯಾಯ ಮತ್ತು ಸ್ವಚ್ಛ ಇಂಧನ ಉತ್ಪಾದನೆಗೆ ಒತ್ತು ಕೊಡುತ್ತಿದೆ. ಅದರಲ್ಲೂ ಸೌರ ವಿದ್ಯುತ್ ಉತ್ಪಾದನೆ ಗಣನೀಯವಾಗಿ ಹೆಚ್ಚುತ್ತಿದೆ. ಐಇಎ ವರದಿ ಪ್ರಕಾರ ಕಳೆದ ಐದು ವರ್ಷದಲ್ಲಿ ಭಾರತದಲ್ಲಿ ಸ್ವಚ್ಛ ಇಂಧನ ಕ್ಷೇತ್ರದಲ್ಲಿ ಮಾಡಲಾಗಿರುವ ಹೂಡಿಕೆಯಲ್ಲಿ ಅರ್ಧಕ್ಕಿಂತ ಹೆಚ್ಚಿನ ಮೊತ್ತವು ಸೌರಶಕ್ತಿ ಉತ್ಪಾದನೆಗೆ ವಿನಿಯೋಗ ಆಗಿದೆ. 2024ರಲ್ಲಂತೂ ವಿದ್ಯುತ್ ಕ್ಷೇತ್ರದಲ್ಲಿನ ಶೇ. 83ರಷ್ಟು ಹೂಡಿಕೆಯು ಸ್ವಚ್ಛ ಇಂಧನ ತಯಾರಿಕೆಗೆ ಹೋಗಿದೆ.


ಅತಿಹೆಚ್ಚು ವಿದ್ಯುತ್ ಉತ್ಪಾದಿಸುವ ದೇಶಗಳು (2023ರ ದತ್ತಾಂಶ)
ಚೀನಾ: 9,456 ಟಿಡಬ್ಲ್ಯುಎಚ್ (ಟೆರಾ ವ್ಯಾಟ್ ಅವರ್)
ಅಮೆರಿಕ: 4,254 TWh
ಭಾರತ: 1,958 TWh
ರಷ್ಯಾ: 1,178 TWh
ಜಪಾನ್: 1,013 TWh
ಬ್ರೆಜಿಲ್: 710 TWh
ಕೆನಡಾ: 633 TWh
ಸೌತ್ ಕೊರಿಯಾ: 618 TWh
ಫ್ರಾನ್ಸ್: 518 TWh
ಜರ್ಮನಿ: 497 TWh


ಈ ಮೇಲಿನ ಅಂಕಿ ಅಂಶವು ಒಟ್ಟಾರೆ ವಿದ್ಯುತ್ ಉತ್ಪಾದನೆಯ ಲೆಕ್ಕ ಹೇಳುತ್ತದೆ. ಇದರಲ್ಲಿ ಕಲ್ಲಿದ್ದಲು, ಜಲವಿದ್ಯುತ್, ಪರಮಾಣು, ಸೌರಶಕ್ತಿ, ವಾಯುಶಕ್ತಿ, ಜೈವಿಕ ಇಂಧನ ಇತ್ಯಾದಿ ಎಲ್ಲಾ ಶಕ್ತಿಮೂಲಗಳಿಂದ ಉತ್ಪಾದಿಸಲಾಗುವ ವಿದ್ಯುತ್ ಆಗಿದೆ.

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು