ಕರ್ನಾಟಕ ವಿಧಾನಮಂಡಲದ ಅಧಿವೇಶನ ಸೋಮವಾರದಿಂದ (ಮಾ.3) ಆರಂಭವಾಗಲಿದ್ದು, ಮಾ.21ರ ತನಕ ನಡೆಯಲಿದೆ. ಮಾ.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 16ನೇ ಬಜೆಟ್ ಹಾಗೂ ಮುಖ್ಯಮಂತ್ರಿ ಆಗಿ 9ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಮಾ.7ರಂದು ಸಿಎಂ ಸಿದ್ದರಾಮಯ್ಯನವರು ಸಚಿವ ಸಂಪುಟ ಸಭೆ ನಡೆಸಿ ಬಜೆಟ್ಗೆ ಅನುಮೋದನೆ ಪಡೆದುಕೊಂಡ ಬಳಿಕ ವಿಧಾನ ಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ.

ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿ ದ್ದಾರೆ. ಶನಿವಾರ ಮತ್ತು ಭಾನುವಾರ ಹೊರತುಪಡಿಸಿ 14 ದಿನ ಬಜೆಟ್ ಅಧಿವೇಶನ ಕಲಾಪಗಳು ನಡೆಯ ಲಿವೆ. ಮಾರ್ಚ್ 4ರಿಂದ 6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.
ಸಿಎಂ ಸಿದ್ದರಾಮಯ್ಯ ಅವರು ಮೊಣಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಅಧಿವೇಶನಕ್ಕೆ ಆಗಮಿಸುವ ಸಲುವಾಗಿ ವಿಧಾನಸೌಧದ ಪೂರ್ವ ದ್ವಾರದ ಬಳಿ ಪ್ರತ್ಯೇಕ ರ್ಯಾಂಪ್ ವ್ಯವಸ್ಥೆ ಮಾಡಲಾಗಿದೆ. ಬಜೆಟ್ ದಿನ ಕುಳಿತು ಕೊಂಡೇ ಅವರು ಬಜೆಟ್ ಭಾಷಣ ಓದಲಿದ್ದಾರೆ. ಸಿಎಂ
ಸಿದ್ದರಾಮಯ್ಯನವರು ಮಂಡಿಸುವ ಬಜೆಟ್ ಅನ್ನು ಸರ್ಕಾರದ ವಿಧಾನಸಭೆ ಅಧಿವೇಶನದ ವೆಬ್ ಪೋರ್ಟಲ್ ನಲ್ಲಿ ಲೈವ್ ವೀಕ್ಷಿಸಬಹುದು.
ದೂರದರ್ಶನ (ಡಿಡಿ ನ್ಯೂಸ್) ಹಾಗೂ ಇತರ ಸುದ್ದಿ ವಾಹಿನಿಗಳಲ್ಲಿ ಬಜೆಟ್ ಮಂಡನೆ ನೇರ ಪ್ರಸಾರ ವೀಕ್ಷಿಸಬಹುದು. ವಿಧಾನಮಂಡಲ ಅಧಿವೇಶನ ಮಾ.3 ರಿಂದ ಆರಂಭವಾಗುತ್ತಿರುವ ಹಿನ್ನೆಲೆ ಯಲ್ಲಿ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸುವ ಕುರಿತು ಚರ್ಚಿಸಲು ಮಾ.4 ರಂದು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಸೋಮವಾರ ರಾಜ್ಯಪಾಲರ ಭಾಷಣದಲ್ಲೇ ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆಯಿದೆ. ಗ್ಯಾರಂಟಿ ಗಳನ್ನು ವಿರೋಧಿಸಿದವರೇ ಅವು ಗಳನ್ನು ಅನುಸರಿಸಿರುವ ಬಗ್ಗೆ ರಾಜ್ಯಪಾಲ ರಿಂದ ಹೇಳಿಸುವ ಮೂಲಕ ಪರೋಕ್ಷ ವಾಗಿ ಬಿಜೆಪಿಗೆ ತಿರುಗೇಟು ನೀಡಲು ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದೆ ರಾಜ್ಯ ಪಾಲರ ಭಾಷಣದ ನಂತರ ಕೆಲಕಾಲ ಮುಂದೂಡಿದ ತರುವಾಯ ಸದನ ಮತ್ತೆ ಆರಂಭವಾಗಲಿದೆ. ಸಂತಾಪ ಸೂಚನೆ ನಿರ್ಣಯ ಮಂಡಿಸಿ ಸಭೆ ಮುಂದೂಡಲಾಗುವುದು. ಮಂಗಳವಾರ, ಬುಧವಾರ ಹಾಗೂ ಗುರುವಾರ ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದ್ದು, ಮಾ.6 ರಂದು ಸರ್ಕಾರ ಉತ್ತರ ನೀಡಲಿದೆ.
ಅಧಿವೇಶನದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ವಿಧೇಯಕ ಮಂಡಿಸಿ ಉಭಯ ಸದನಗಳ ಒಪ್ಪಿಗೆ ಪಡೆಯಬಹುದು.

ಬೆಂಗಳೂರು ಅರಮನೆ ಮೈದಾನದ ಭೂ ಸ್ವಾಧೀನ ಕುರಿತ ಸುಗ್ರೀವಾಜ್ಞೆ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿರುವು ದರಿಂದ ಈ ಸುಗ್ರೀವಾಜ್ಞೆ ಬಗ್ಗೆ ಅಧಿವೇಶನ ದಲ್ಲಿ ಯಾವ ನಿರ್ಧಾರ ಮಾಡಲಿದ್ದಾರೆ ಎಂಬುದು ಕಾದು ನೋಡಬೇಕಿದೆ.
ಮಾ. 21ರವರೆಗೆ ನಡೆಯುವ ಅಧಿ ವೇಶನದ ಉದ್ದಕ್ಕೂ ಬಸ್, ಮೆಟ್ರೋ ಪ್ರಯಾಣ ದರ ಏರಿಕೆ, ವಿದ್ಯುತ್, ನೀರು, ಹಾಲಿನ ದರ ಏರಿಕೆ ಪ್ರಸ್ತಾಪ ಸೇರಿ ಮೈಕ್ರೋ ಫೈನಾನ್ಸ್ ಕಿರುಕುಳ, ಗ್ಯಾರಂಟಿಗಳ ಹಣ ಬಿಡುಗಡೆ ವಿಳಂಬ, ಅಭಿವೃದ್ಧಿ ಕಾಮಗಾರಿ ಗಳಿಗೆ ಅನುದಾನ ಕೊರತೆ, ಕೆಪಿಎಸ್ಸಿ ಹಗರಣ, ರಾಜ್ಯಪಾಲ-ಸರ್ಕಾರದ ನಡುವಿನ ಜಟಾಪಟಿ, ಬೆಂಗಳೂರು ನಗರದ ಸಮಸ್ಯೆಗಳನ್ನು ಮುಖ್ಯ ಅಸ್ತವಾಗಿಟ್ಟು ಕೊಂಡು ಸರ್ಕಾರದ ಮೇಲೆ ಮುಗಿ ಬೀಳಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸಜ್ಜಾಗಿದ್ದು, ಉಭಯ ಸದನಗಳಲ್ಲಿ ತೀವ್ರ ಚರ್ಚೆ, ವಾಗ್ವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ.
ಇದಕ್ಕೆ ಪ್ರತಿಯಾಗಿ ನ್ಯಾ.ಕುನ್ಹಾ ವರದಿ, ಹೆಚ್.ಡಿ.ಕುಮಾರಸ್ವಾಮಿ ವಿರುದ್ಧದ ಪ್ರಕರಣ, ಮಹದಾಯಿ, ಕೃಷ್ಣಾ ಮೇಲ್ದಂಡೆ, ಮೇಕೆದಾಟು ಯೋಜನೆಗಳಿಗೆ ಅಂಗೀಕಾರ ನೀಡಲು ಸಂದಿಸದ ಕೇಂದ್ರಸರ್ಕಾರದ ಧೋರಣೆ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಮಾಡಿ ರುವ ಅನ್ಯಾಯ, ತೆರಿಗೆ ಪಾಲು ಕಡಿತ ಮತ್ತಿತರ ಅಂಕಿ-ಅಂಶಗಳನ್ನು ಮುಂದಿಟ್ಟು ಕೊಂಡು ಪ್ರತಿಪಕ್ಷಗಳ ವಿರುದ್ಧ ಹರಿಹಾ ಯಲು ಕಾಂಗ್ರೆಸ್ ಕೂಡ ಸಿದ್ಧವಾಗಿದೆ.





