ವಿಧಾನಮಂಡಲದ ಬಜೆಟ್ ಅಧಿವೇಶನ ಇಂದಿನಿಂದ.

ಬೆಂಗಳೂರು, ಮಾ, 3 :- ರಾಜ್ಯದಲ್ಲಿ ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ ಶುರುವಾಗಲಿದ್ದು, ಆಡಳಿತ ಪಕ್ಷ ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆ ಸಜ್ಜಾಗಿದೆ. ಇಂದು ಬೆಳಗ್ಗೆ 11ಕ್ಕೆ ಉಭಯ ಸದನಗಳ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ರಾಜ್ಯಪಾಲರಿಗೆ ಬೀಳ್ಕೊಟ್ಟ ಬಳಿಕ ಕಲಾಪ ಆರಂಭವಾಗಲಿದೆ. ಬಳಿಕ ಇತ್ತೀಚಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಿದ್ದಾರೆ.
ಕರ್ನಾಟಕ ವಿಧಾನಮಂಡಲದ ಅಧಿವೇಶನ ಸೋಮವಾರದಿಂದ (ಮಾ.3) ಆರಂಭವಾಗಲಿದ್ದು, ಮಾ.21ರ ತನಕ ನಡೆಯಲಿದೆ. ಮಾ.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 16ನೇ ಬಜೆಟ್ ಹಾಗೂ ಮುಖ್ಯಮಂತ್ರಿ ಆಗಿ 9ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಮಾ.7ರಂದು ಸಿಎಂ ಸಿದ್ದರಾಮಯ್ಯನವರು ಸಚಿವ ಸಂಪುಟ ಸಭೆ ನಡೆಸಿ ಬಜೆಟ್ಗೆ ಅನುಮೋದನೆ ಪಡೆದುಕೊಂಡ ಬಳಿಕ ವಿಧಾನ ಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ.

ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿ ದ್ದಾರೆ. ಶನಿವಾರ ಮತ್ತು ಭಾನುವಾರ ಹೊರತುಪಡಿಸಿ 14 ದಿನ ಬಜೆಟ್ ಅಧಿವೇಶನ ಕಲಾಪಗಳು ನಡೆಯ ಲಿವೆ. ಮಾರ್ಚ್ 4ರಿಂದ 6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.
ಸಿಎಂ ಸಿದ್ದರಾಮಯ್ಯ ಅವರು ಮೊಣಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಅಧಿವೇಶನಕ್ಕೆ ಆಗಮಿಸುವ ಸಲುವಾಗಿ ವಿಧಾನಸೌಧದ ಪೂರ್ವ ದ್ವಾರದ ಬಳಿ ಪ್ರತ್ಯೇಕ ರ್ಯಾಂಪ್ ವ್ಯವಸ್ಥೆ ಮಾಡಲಾಗಿದೆ. ಬಜೆಟ್ ದಿನ ಕುಳಿತು ಕೊಂಡೇ ಅವರು ಬಜೆಟ್ ಭಾಷಣ ಓದಲಿದ್ದಾರೆ. ಸಿಎಂ
ಸಿದ್ದರಾಮಯ್ಯನವರು ಮಂಡಿಸುವ ಬಜೆಟ್ ಅನ್ನು ಸರ್ಕಾರದ ವಿಧಾನಸಭೆ ಅಧಿವೇಶನದ ವೆಬ್ ಪೋರ್ಟಲ್ ನಲ್ಲಿ ಲೈವ್ ವೀಕ್ಷಿಸಬಹುದು.
ದೂರದರ್ಶನ (ಡಿಡಿ ನ್ಯೂಸ್) ಹಾಗೂ ಇತರ ಸುದ್ದಿ ವಾಹಿನಿಗಳಲ್ಲಿ ಬಜೆಟ್ ಮಂಡನೆ ನೇರ ಪ್ರಸಾರ ವೀಕ್ಷಿಸಬಹುದು. ವಿಧಾನಮಂಡಲ ಅಧಿವೇಶನ ಮಾ.3 ರಿಂದ ಆರಂಭವಾಗುತ್ತಿರುವ ಹಿನ್ನೆಲೆ ಯಲ್ಲಿ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸುವ ಕುರಿತು ಚರ್ಚಿಸಲು ಮಾ.4 ರಂದು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಸೋಮವಾರ ರಾಜ್ಯಪಾಲರ ಭಾಷಣದಲ್ಲೇ ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆಯಿದೆ. ಗ್ಯಾರಂಟಿ ಗಳನ್ನು ವಿರೋಧಿಸಿದವರೇ ಅವು ಗಳನ್ನು ಅನುಸರಿಸಿರುವ ಬಗ್ಗೆ ರಾಜ್ಯಪಾಲ ರಿಂದ ಹೇಳಿಸುವ ಮೂಲಕ ಪರೋಕ್ಷ ವಾಗಿ ಬಿಜೆಪಿಗೆ ತಿರುಗೇಟು ನೀಡಲು ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದೆ ರಾಜ್ಯ ಪಾಲರ ಭಾಷಣದ ನಂತರ ಕೆಲಕಾಲ ಮುಂದೂಡಿದ ತರುವಾಯ ಸದನ ಮತ್ತೆ ಆರಂಭವಾಗಲಿದೆ. ಸಂತಾಪ ಸೂಚನೆ ನಿರ್ಣಯ ಮಂಡಿಸಿ ಸಭೆ ಮುಂದೂಡಲಾಗುವುದು. ಮಂಗಳವಾರ, ಬುಧವಾರ ಹಾಗೂ ಗುರುವಾರ ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದ್ದು, ಮಾ.6 ರಂದು ಸರ್ಕಾರ ಉತ್ತರ ನೀಡಲಿದೆ.
ಅಧಿವೇಶನದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ವಿಧೇಯಕ ಮಂಡಿಸಿ ಉಭಯ ಸದನಗಳ ಒಪ್ಪಿಗೆ ಪಡೆಯಬಹುದು.

ಬೆಂಗಳೂರು ಅರಮನೆ ಮೈದಾನದ ಭೂ ಸ್ವಾಧೀನ ಕುರಿತ ಸುಗ್ರೀವಾಜ್ಞೆ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿರುವು ದರಿಂದ ಈ ಸುಗ್ರೀವಾಜ್ಞೆ ಬಗ್ಗೆ ಅಧಿವೇಶನ ದಲ್ಲಿ ಯಾವ ನಿರ್ಧಾರ ಮಾಡಲಿದ್ದಾರೆ ಎಂಬುದು ಕಾದು ನೋಡಬೇಕಿದೆ.
ಮಾ. 21ರವರೆಗೆ ನಡೆಯುವ ಅಧಿ ವೇಶನದ ಉದ್ದಕ್ಕೂ ಬಸ್, ಮೆಟ್ರೋ ಪ್ರಯಾಣ ದರ ಏರಿಕೆ, ವಿದ್ಯುತ್, ನೀರು, ಹಾಲಿನ ದರ ಏರಿಕೆ ಪ್ರಸ್ತಾಪ ಸೇರಿ ಮೈಕ್ರೋ ಫೈನಾನ್ಸ್ ಕಿರುಕುಳ, ಗ್ಯಾರಂಟಿಗಳ ಹಣ ಬಿಡುಗಡೆ ವಿಳಂಬ, ಅಭಿವೃದ್ಧಿ ಕಾಮಗಾರಿ ಗಳಿಗೆ ಅನುದಾನ ಕೊರತೆ, ಕೆಪಿಎಸ್ಸಿ ಹಗರಣ, ರಾಜ್ಯಪಾಲ-ಸರ್ಕಾರದ ನಡುವಿನ ಜಟಾಪಟಿ, ಬೆಂಗಳೂರು ನಗರದ ಸಮಸ್ಯೆಗಳನ್ನು ಮುಖ್ಯ ಅಸ್ತವಾಗಿಟ್ಟು ಕೊಂಡು ಸರ್ಕಾರದ ಮೇಲೆ ಮುಗಿ ಬೀಳಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸಜ್ಜಾಗಿದ್ದು, ಉಭಯ ಸದನಗಳಲ್ಲಿ ತೀವ್ರ ಚರ್ಚೆ, ವಾಗ್ವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ.
ಇದಕ್ಕೆ ಪ್ರತಿಯಾಗಿ ನ್ಯಾ.ಕುನ್ಹಾ ವರದಿ, ಹೆಚ್.ಡಿ.ಕುಮಾರಸ್ವಾಮಿ ವಿರುದ್ಧದ ಪ್ರಕರಣ, ಮಹದಾಯಿ, ಕೃಷ್ಣಾ ಮೇಲ್ದಂಡೆ, ಮೇಕೆದಾಟು ಯೋಜನೆಗಳಿಗೆ ಅಂಗೀಕಾರ ನೀಡಲು ಸಂದಿಸದ ಕೇಂದ್ರಸರ್ಕಾರದ ಧೋರಣೆ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಮಾಡಿ ರುವ ಅನ್ಯಾಯ, ತೆರಿಗೆ ಪಾಲು ಕಡಿತ ಮತ್ತಿತರ ಅಂಕಿ-ಅಂಶಗಳನ್ನು ಮುಂದಿಟ್ಟು ಕೊಂಡು ಪ್ರತಿಪಕ್ಷಗಳ ವಿರುದ್ಧ ಹರಿಹಾ ಯಲು ಕಾಂಗ್ರೆಸ್ ಕೂಡ ಸಿದ್ಧವಾಗಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!