ವಿಮಾನ-ಹೆಲಿಕ್ಯಾಪ್ಟರ್ ನಡುವೆ ಮುಖಾಮುಖಿ ಡಿಕ್ಕಿ :ಎಲ್ಲ 67 ಪ್ರಯಾಣಿಕರು ಸಾ*, 28 ಶ* ಪತ್ತೆ.

ಆರ್ಲಿಂಗ್ಟನ್: 60 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಅಮೆರಿಕನ್ ಏರ್‌ಲೈನ್ಸ್ ಜೆಟ್ ವಿಮಾನವು ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದ್ದು, ಅತ್ಯಂತ ಭೀಕರ ಅಪಘಾತದಲ್ಲಿ ವಿಮಾನ ಮತ್ತು ಹೆಲಿಕಾಪ್ಟರ್ ನಲ್ಲಿ ಎಲ್ಲಾ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಪೊಟೊಮ್ಯಾಕ್ ನದಿಯ ಹಿಮಾವೃತ ನೀರಿನಿಂದ ಇದುವರೆಗೆ ಕನಿಷ್ಠ 28 ಶವಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ರಾತ್ರಿ ವಾಷಿಂಗ್ಟನ್ ಬಳಿಯ ರೊನಾಲ್ಡ್ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಯತ್ನಿಸುತ್ತಿದ್ದಾಗ ಜೆಟ್ ವಿಮಾನ ಡಿಕ್ಕಿ ಹೊಡೆದಿದೆ.


ಡಿಕ್ಕಿಯ ನಂತರ ಹೆಲಿಕಾಪ್ಟರ್ ಮತ್ತು ವಿಮಾನ ಎರಡೂ ನದಿಯಲ್ಲಿ ಪತನವಾಗಿದ್ದು, ಪೊಟೊಮ್ಯಾಕ್ ನದಿಯ ಹಿಮಾವೃತ ನೀರಿನಿಂದ ಇದುವರೆಗೆ ಕನಿಷ್ಠ 28 ಶವಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಂತದಲ್ಲಿ ಯಾವುದೇ ಪ್ರಯಾಣಿಕರು ಬದುಕುಳಿದಿದ್ದಾರೆ ಎಂಬ ನಾವು ನಂಬುವುದಿಲ್ಲ. ಹೀಗಾಗಿ ನಾವು ಈಗ ರಕ್ಷಣಾ ಕಾರ್ಯಾಚರಣೆಯನ್ನು ಮೃತದೇಹಗಳ ಪತ್ತೆ ಕಾರ್ಯಾಚರಣೆಯಾಗಿ ಬದಲಾಯಿಸುವ ಸ್ಥಿತಿ ನಿರ್ಮಾಣವಾಗಿದೆ ಎಂದು ವಾಷಿಂಗ್ಟನ್ ಅಗ್ನಿಶಾಮಕ ದಳದ ಮುಖ್ಯಸ್ಥ ಜಾನ್ ಡೊನ್ನೆಲ್ಲಿ ಅವರು ಹೇಳಿದ್ದಾರೆ.
ವಿಮಾನವು ಮೂರು ಭಾಗಗಳಾಗಿ ತಲೆಕೆಳಗಾಗಿ ನೀರಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಹೆಲಿಕಾಪ್ಟರ್ನ ಅವಶೇಷಗಳು ಸಹ ಕಂಡುಬಂದಿವೆ. ಇನ್ನೂ ಶವಗಳಿಗಾಗಿ ಹುಡುಕಾಟ ನಡೆದಿದೆ ಎಂದು ಡೊನ್ನೆಲ್ಲಿ ತಿಳಿಸಿದ್ದಾರೆ.
ಅಪಘಾತದ ಹಿಂದಿನ ಕಾರಣವನ್ನು ಅಧಿಕಾರಿಗಳು ಇನ್ನೂ ಖಚಿತಪಡಿಸಿಲ್ಲ. ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ (ಎನ್‌ಟಿಎಸ್‌ಬಿ) ಮತ್ತು ಫೆಡರಲ್ ವಿಮಾನಯಾನ ಆಡಳಿತ (ಎಫ್ಎಎ)ದ ತನಿಖಾಧಿಕಾರಿಗಳು ಅಪಘಾತದ ಸ್ಥಳದಲ್ಲಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!