ವಿಶ್ವದ ಅತಿ ಉದ್ದನೆಯ ಟ್ರಾಫಿಕ್ ಜಾಮ್; ಬರೋಬ್ಬರಿ 12 ದಿನಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿದ್ದ ಜನ.

ಬೆಂಗಳೂರು ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಬೆಳಗ್ಗೆ ಕೆಲಸ ಹೋಗುವ ಮತ್ತು ಸಂಜೆ ಕೆಲಸದಿಂದ ವಾಪಸ್ ಆಗುವಂತಹ ಪೀಕ್ ಟೈಮ್ಗಳಲ್ಲಿ ತುಸು ಹೆಚ್ಚೇ ಸಂಚಾರ ದಟ್ಟಣೆ ಇರುತ್ತದೆ. ಈ ಟ್ರಾಫಿಕ್ ಜಾಮ್ನಲ್ಲಿ ಗಂಟೆಗಟ್ಟಲೆ ಸಿಲುಕಿ ನಗರ ಪ್ರದೇಶಗಳಲ್ಲಿನ ಜನ ಪ್ರತಿನಿತ್ಯ ಒದ್ದಾಡುತ್ತಿರುತ್ತಾರೆ. ಸಾಮಾನ್ಯವಾಗಿ ಹೆಚ್ಚೆಂದರೆ ಒಂದರಿಂದ ಎರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗುತ್ತವೆ. ಆದ್ರೆ ಇಲ್ಲೊಂದು ಕಡೆ ಬರೋಬ್ಬರಿ 12 ದಿನಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿ, ಜನ ಹೈರಾಣಾಗಿ ಹೋಗಿದ್ದರು. ಅಷ್ಟಕ್ಕೂ ಜಗತ್ತಿನ ಅತಿ ದೊಡ್ಡ ಟ್ರಾಫಿಕ್ ಜಾಮ್ ಆಗಿದ್ದೆಲ್ಲಿ? ಕಾರಣವೇನು? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ವಿಶ್ವದ ಅತಿ ಉದ್ದನೆಯ ಟ್ರಾಫಿಕ್ ಜಾಮ್:
2010 ರ ಆಗಸ್ಟ್ 14 ರಂದು ಚೀನಾದ ರಾಜಧಾನಿ ಬೀಜಿಂಗ್ನಲ್ಲಿ ವಿಶ್ವದ ಅತಿ ಉದ್ದನೆಯ ಟ್ರಾಪಿಕ್ ಜಾಮ್ ಉಂಟಾಗಿತ್ತು. 12 ದಿನಗಳ ಕಾಲ ಈ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಜನ ಹೈರಾಣಾಗಿ ಹೋಗಿದ್ದರು. ಬೀಜಿಂಗ್ನ ಬೀಜಿಂಗ್-ಟಿಬೆಟ್ ಎಕ್ಸ್ಪ್ರೆಸ್ ವೇ (ಚೀನಾ ರಾಷ್ಟ್ರೀಯ ಹೆದ್ದಾರಿ 110) ನಲ್ಲಿ ಈ ಉದ್ದನೆಯ ಸಂಚಾರ ದಟ್ಟಣೆ ಉಂಟಾಗಿದ್ದು, ಸುಮಾರು 100 ಕಿ.ಮೀ ವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಅಂದಿನ ಈ ಟ್ರಾಫಿಕ್ ಜಾಮ್ ಪ್ರಪಂಚದ ಅತ್ಯಂತ ಉದ್ದನೆಯ ಟ್ರಾಫಿಕ್ ಜಾಮ್ ಎಂಬ ಹೆಸರು ಪಡೆದಿದೆ.

ಅಂದು ಬೀಜಿಂಗ್-ಟಿಬೆಟ್ ಎಕ್ಸ್ಪ್ರೆಸ್ವೇ ನಿರ್ಮಾಣ ಹಂತದಲ್ಲಿತ್ತು. ಈ ರಸ್ತೆ ಕಾಮಗಾರಿಗೆ ಬೇಕಾದ ಕಲ್ಲಿದ್ದಲು ಮತ್ತು ಇತರೆ ಸಾಮಾಗ್ರಿಗಳನ್ನು ಮಂಗೋಲಿಯಾದಿಂದ ಟ್ರಕ್ಗಳಲ್ಲಿ ತರಿಸಲಾಗಿತ್ತು. ಈ ದೈತ್ಯ ಟ್ರಕ್ಗಳ ಕಾರಣದಿಂದಾಗಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿತ್ತು. ಗಂಟೆಗಳು ಅಲ್ಲ, ಈ ಟ್ರಾಫಿಕ್ ಜಾಮ್ ಅನ್ನು ತೆರವು ಗೊಳಿಸಲು ಬರೋಬ್ಬರಿ 12 ದಿನಗಳು ಬೇಕಾದವು. ಸಂಚಾರ ದಟ್ಟಣೆ ಸಂಭವಿಸಿದ ಪರಿಣಾಮ ಹಲವು ವಾಹನಗಳು ಜಖಂಗೊಂಡಿದ್ದವು. ಇನ್ನೂ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ ಜನ ಮನೆಗೆ ಹೋಗಲು ಸಾಧ್ಯವಾಗದೆ ಎಕ್ಸ್ಪ್ರೆಸ್ವೇ ಉದ್ದಕ್ಕೂ ತಾತ್ಕಲಿಕ ಟೆಂಟ್ಗಳನ್ನು ನಿರ್ಮಿಸಿದ್ದರು. ಇನ್ನೂ ಕೆಲವರು ತಮ್ಮ ವಾಹನಗಳಲ್ಲಿ ಕುಳಿತು ದಿನ ಕಳೆದರು. ತಿಂಡಿ, ತಂಪು ಪಾನೀಯ, ಊಟ ಸೇರಿದಂತೆ ಆಹಾರ ಪದಾರ್ಥಗಳನ್ನು ಇಲ್ಲಿ ನಾಲ್ಕು ಪಟ್ಟು ಬೆಲೆಗೆ ಮಾರಾಟ ಮಾಡಲಾಗಿತ್ತು. ಇಲ್ಲಿನ ಸರ್ಕಾರ ಈ ಒಂದು ಟ್ರಾಫಿಕ್ ತೆರವುಗೊಳಿಸಲು ಹಗಲಿರುಳು ಶ್ರಮಿಸಿತ್ತು. 2010 ರ ಆಗಸ್ಟ್ 14 ರಂದು ಉಂಟಾದ ಈ ಟ್ರಾಫಿಕ್ ಜಾಮ್ ಆಗಸ್ಟ್ 26, 2010 ರಂದು ಕೊನೆಗೊಂಡಿತು. ಒಟ್ಟಾರೆ ಈ ಟ್ರಾಫಿಕ್ ತೆರವುಗೊಳಿಸಲು 12 ದಿನಗಳು ಬೇಕಾಯಿತು.

Related Posts

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

  ಒಡಿಶಾದ ಪುರಿಯಲ್ಲಿ ಭವ್ಯ ಜಗನ್ನಾಥ ರಥಯಾತ್ರೆ ಇಂದಿನಿಂದ ಆರಂಭಗೊಂಡಿದೆ. ಲಕ್ಷಾಂತರ ಭಕ್ತರು ‘ಜಯ ಜಗನ್ನಾಥ’ ಘೋಷಗಳೊಂದಿಗೆ ಈ ಮಹಾ ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ಜಗನ್ನಾಥ ಸ್ವಾಮಿ, ಬಲಭದ್ರ ಮತ್ತು ಸುಭದ್ರಾ ದೇವಿ ದೇವಾಲಯದಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಾರೆ. ಹೊಸ ರಥಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!