ವಿಶ್ವದ ದುಬಾರಿ ಮಾವಿನ ಹಣ್ಣಿನ ಬೆಲೆ ಕೇಳಿದ್ರೆ ನೀವು ಖಂಡಿತ ಶಾಕ್ ಆಗ್ತೀರಾ!!!

ಹಣ್ಣುಗಳ ರಾಜ ಮಾವಿನ ಹಣ್ಣಿನ ಸೀಸನ್ ಆರಂಭವಾಗಿದೆ. ಮಾರುಕಟ್ಟೆಯ ತುಂಬೆಲ್ಲಾ ಬಗೆಬಗೆಯ ಕಣ್ಮನ ಸೆಳೆಯುವ ಮಾವುಗಳದ್ದೇ ರಾಶಿ. ಈ ಮಾವಿನ ಹಣ್ಣುಗಳನ್ನು ನೋಡಿದರೇನೇ ಬಾಯಲ್ಲಿ ನೀರೂರುತ್ತದೆ. ಆದರೆ ವಿಶ್ವದ ದುಬಾರಿ ಮಾವಿನ ಹಣ್ಣಿನ ಬಗ್ಗೆ ನಿಮಗೆ ತಿಳಿದಿದೆಯೇ. ವಜ್ರಕ್ಕಿಂತ ಬೆಲೆಬಾಳುವ ಆ ದುಬಾರಿ ಮಾವಿನ ಹಣ್ಣು ಯಾವುದು? ಏನಿದರ ವಿಶೇಷತೆ ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಮಾರ್ಚ್ ಏಪ್ರಿಲ್ ತಿಂಗಳಲ್ಲಿ ಮಾರುಕಟ್ಟೆಯ ತುಂಬೆಲ್ಲಾ ಮಾವಿನ ಹಣ್ಣಿನದ್ದೆ ದರ್ಬಾರ್. ಸಹಜವಾಗಿ ಎಲ್ಲರೂ ಕೂಡ ಇಷ್ಟ ಪಟ್ಟು ಸವಿಯುವ ಹಣ್ಣಾದ ಇದರ ರುಚಿ ಎಲ್ಲರೂ ಕೂಡ ಸವಿದೇ ಇರುತ್ತಾರೆ. ಆದರೆ ಮಾವಿನ ಕಾಯಿಯಿಂದ ಹಿಡಿದು ಹಣ್ಣಿನವರೆಗೂ ಎಲ್ಲವನ್ನು ವಿವಿಧ ರೀತಿಯಲ್ಲಿ ಬಳಸಲಾಗುತ್ತದೆ. ವಿವಿಧ ತಳಿಗಳಲ್ಲಿ ಮಾರುಕಟ್ಟೆಯಲ್ಲಿ ಸಿಗುವ ಮಾವಿನ ಹಣ್ಣು ರುಚಿಯಲ್ಲಿ ಮಾತ್ರ ಒಂದಕ್ಕಿಂತ ಇನ್ನೊಂದನ್ನು ಮೀರಿಸುತ್ತದೆ. ನಮ್ಮ ಭಾರತದಲ್ಲಿ ಬೈಂಗನಪಲ್ಲಿ, ದುಸ್ಸೆಹ್ರಿ, ಅಲ್ಫೊನ್ಸೊ, ಲಾಂಗ್ಡಾ ಸೇರಿ ಅನೇಕ ವಿವಿಧ ತಳಿಯ ಮಾವನ್ನು ಬೆಳೆಯಲಾಗುತ್ತದೆ.

ಆದರೆ ಈ ಮಾವಿನ ಹಣ್ಣು ಮಾತ್ರ ಬಲುದುಬಾರಿಯಂತೆ. ರುಚಿ ಹಾಗೂ ಇದರ ಬಣ್ಣ ದಿಂದಲೇ ಎಲ್ಲರ ಗಮನ ಸೆಳೆಯುತ್ತದೆ. ಬೆಲೆಯಲ್ಲಿ ದುಬಾರಿಯಾದ ಕಾರಣ ಮಧ್ಯಮವರ್ಗದ ಜನರಿಗೆ ಇದನ್ನು ಖರೀದಿಸಿ ರುಚಿ ಸವಿಯುವುದು ಕಷ್ಟ. ವಿಶ್ವದಲ್ಲೇ ಅತಂತ್ಯ ದುಬಾರಿ ಮಾವು ಎಂದು ಕರೆಸಿಕೊಂಡಿರುವ ಮಾವುಗಳಲ್ಲಿ ಮಿಯಾಝಾಕಿ ಮಾವು. ನೀವೆಲ್ಲಾ ಮಾವಿನ ಹಣ್ಣನ್ನು ಹೊರಗೆ ಹಸಿರು ಇಲ್ಲದಿದ್ದರೆ ಹಳದಿ ಬಣ್ಣದಿರುವುದರಲ್ಲೂ ಆದರೆ ಈ ದುಬಾರಿ ಮಾವಿನ ಬಣ್ಣ ನೇರಳೆ ಬಣ್ಣದಾಗಿದ್ದು ಹಣ್ಣಾದ ಮೇಲೆ ಕಡುಗೆಂಪು ಬಣ್ಣದಲ್ಲಿರುತ್ತದೆ. ಜಪಾನ್ನ ಮಿಯಾಝಾಕಿ ಎಂಬ ನಗರದಲ್ಲಿ ಇದನ್ನು ಬೆಳೆಯಲಾಗುತ್ತದೆಯಂತೆ. ಈ ಮಾವನ್ನು ಎಗ್ ಆಫ್ ದಿ ಸನ್ (ಸೂರ್ಯನ ಮೊಟ್ಟೆ) ಎಂದು ಕರೆಯಲಾಗುತ್ತಿದೆ. ಈ ಮಾವು ವಿಶ್ವದ ದುಬಾರಿ ಮಾವುಗಳಲ್ಲಿ ಮೊದಲ ಸ್ಥಾನದಲ್ಲಿದ್ದು, ಕೆಂಪು ಬಣ್ಣದ ಈ ಮಾವಿನ ಬೆಲೆ ಬರೋಬ್ಬರಿ 2.7 ಲಕ್ಷ ರೂಪಾಯಿಯಂತೆ. ಹೀಗಾಗಿ ಈ ಮಾವಿನ ಬೆಲೆ ವಜ್ರಕ್ಕಿಂತಲೂ ದುಬಾರಿ ಎನ್ನಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!