ವಿಶ್ವ ಯೋಗ ದಿನದಂದು ಮತ್ತೆ ವೈರಲ್ ಆದ ಅಣ್ಣಾವ್ರ ವಿಡಿಯೋಗಳು….

ಜೂನ್ 21ರಂದು ವಿಶ್ವ ಯೋಗ ದಿನ ಆಚರಿಸಲಾಯಿತು. ಅನೇಕ ಸೆಲೆಬ್ರಿಟಿಗಳು ತಮ್ಮ ಫಿಟ್ನೆಸ್ ಸಲುವಾಗಿ ಯೋಗ ಮಾಡುತ್ತಾರೆ. ಕನ್ನಡ ಚಿತ್ರರಂಗದಿಂದ ಬಾಲಿವುಡ್ ತನಕ ಹಲವು ನಟ-ನಟಿಯರಿಗೆ ಯೋಗದಿಂದ ಲಾಭ ಆಗಿದೆ. ಸಿನಿಮಾದಲ್ಲಿ ಡಾ. ರಾಜ್ಕುಮಾರ್ ಅವರು ಮಾಡದೇ ಇರುವ ಪಾತ್ರಗಳೇ ಇಲ್ಲ. ದೇವರಿಂದ ದಾನವರ ತನಕ, ರಾಜನಿಂದ ರೈತನ ತನಕ ಎಲ್ಲ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡರು. ಅಂಥ ಪಾತ್ರಗಳಿಗೆ ಬಹಳ ಸುಲಭವಾಗಿ ಒಪ್ಪಿಕೊಳ್ಳಲು ಅವರಿಗೆ ಯೋಗ ಕೂಡ ಸಹಕಾರಿ ಆಯಿತು. ಯಾಕೆಂದರೆ, ಅಣ್ಣಾವ್ರು ಕೂಡ ಅತ್ಯುತ್ತಮ ಯೋಗಪಟು ಆಗಿದ್ದರು. ಹಠಯೋಗದಲ್ಲಿ ಅವರು ಪರಿಣತಿ ಹೊಂದಿದ್ದರು. ‘ಕಾಮನಬಿಲ್ಲು’ ಸಿನಿಮಾದಲ್ಲಿ ಅದನ್ನು ತೋರಿಸಲಾಗಿದೆ. ಅದೇ ರೀತಿ ಡಾ. ರಾಜ್ಕುಮಾರ್ ಅವರ ಹಲವು ವಿಡಿಯೋಗಳು ಮತ್ತೆ ವೈರಲ್ ಆಗಿವೆ.

ಡಾ. ರಾಜ್ಕುಮಾರ್ ಅವರು ಬಾಲ್ಯದಿಂದಲೇ ಯೋಗ ಕಲಿತವರಲ್ಲ. 50 ವರ್ಷ ವಯಸ್ಸಿನ ಬಳಿಕ ಅವರು ಯೋಗಾಭ್ಯಾಸ ಮಾಡಲು ಆರಂಭಿಸಿದರು. ಅದರಿಂದ ಅವರಿಗೆ ದೈಹಿಕ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಿಕ್ಕಿತು. ಇದರ ಬಗ್ಗೆ ಜನಸಾಮಾನ್ಯರಿಗೂ ಹೆಚ್ಚಾಗಿ ತಿಳಿಯಲಿ ಎಂಬ ಕಾರಣದಿಂದ ಸಿನಿಮಾದಲ್ಲೂ ಯೋಗಾಭ್ಯಾಸದ ದೃಶ್ಯಗಳನ್ನು ತೋರಿಸಿದರು.ಆಗಿನ ಕಾಲದಲ್ಲಿ ಸೋಶಿಯಲ್ ಮೀಡಿಯಾ ಇರಲಿಲ್ಲ. ಜನರನ್ನು ತಲುಪಲು ಸಿನಿಮಾವೇ ದೊಡ್ಡ ಮಾಧ್ಯಮ ಆಗಿತ್ತು. ‘ಕಾಮನಬಿಲ್ಲು’ ಸಿನಿಮಾದಲ್ಲಿ ಡಾ. ರಾಜ್ಕುಮಾರ್ ಅವರು ಯೋಗಾಭ್ಯಾಸ ಮಾಡುವುದು ನೋಡಿ ಸ್ಫೂರ್ತಿ ಪಡೆದವರು ಸಾಕಷ್ಟು ಮಂದಿ ಇದ್ದಾರೆ. ಆ ಬಳಿಕವೇ ಯೋಗ ಕಲಿತು, ಅದನ್ನು ಜೀವನದಲ್ಲಿ ಅಳವಡಿಸಿಕೊಂಡ ಅಭಿಮಾನಿಗಳ ಸಂಖ್ಯೆ ಅಪಾರ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!