ವೃತ್ತಿಜೀವನಕ್ಕಾಗಿ ಮುಂಬೈ ತಂಡ ತೊರೆಯಲು ನಿರ್ಧರಿಸಿದ ಪೃಥ್ವಿ ಶಾ….

ಒಂದು ಸಮಯದಲ್ಲಿ ಟೀಂ ಇಂಡಿಯಾದಲ್ಲಿ ಖಾಯಂ ಸ್ಥಾನ ಪಡೆದುಕೊಳ್ಳುವ ಎಲ್ಲಾ ಸೂಚನೆ ನೀಡಿದ್ದ ಯುವ ಆರಂಭಿಕ ಆಟಗಾರ ಪೃಥ್ವಿ ಶಾ ಗೆ, ಪ್ರಸ್ತುತ ರಾಜ್ಯ ತಂಡದಲ್ಲೂ ಸ್ಥಾನವಿಲ್ಲ. ಪೃಥ್ವಿ ಟೀಂ ಇಂಡಿಯಾದಿಂದ ಹೊರಗುಳಿದಿರುವುದಲ್ಲದೆ ಮುಂಬೈ ಕೂಡ ಅವರನ್ನು ರಣಜಿ ಟ್ರೋಫಿಯಿಂದ ಕೈಬಿಟ್ಟಿದೆ. ಇದರ ಜೊತೆಗೆ ಅವರಿಗೆ ಐಪಿಎಲ್‌ನಲ್ಲಿ ಅವಕಾಶವೂ ಸಿಗಲಿಲ್ಲ. ಹೀಗಾಗಿ ತಮ್ಮ ವೃತ್ತಿ ಜೀವನದ ಉಳಿವಿಗಾಗಿ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಪೃಥ್ವಿ, ಮುಂಬೈ ಕ್ರಿಕೆಟ್ ತಂಡವನ್ನು ತೊರೆದು ಬೇರೆಡೆಗೆ ಹೋಗಲಿದ್ದಾರೆ ಎಂಬ ವರದಿಗಳಿವೆ.

ಪೃಥ್ವಿ ಶಾ ಬರೆದ ಪತ್ರ ಹೀಗಿದೆ….

ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ನ ಮೂಲಗಳ ಪ್ರಕಾರ, ಪೃಥ್ವಿ ಶಾ ಅವರು ಎಂಸಿಎಗೆ ಇಮೇಲ್ ಮಾಡಿದ್ದಾರೆ. ಅದರಲ್ಲಿ ಅವರು, ‘ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ನ ಅಚಲ ಬೆಂಬಲ ಮತ್ತು ತಂಡಕ್ಕಾಗಿ ಆಡಲು ಅವಕಾಶ ನೀಡಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಎಂಸಿಎಯ ಭಾಗವಾಗಿರುವುದು ನಿಜಕ್ಕೂ ಗೌರವದ ಸಂಗತಿ. ನನ್ನ ವೃತ್ತಿಜೀವನದ ಈ ಹಂತದಲ್ಲಿ, ನನಗೆ ಬೇರೆ ರಾಜ್ಯ ಸಂಘದಿಂದ ವೃತ್ತಿಪರ ಕ್ರಿಕೆಟ್ ಆಡುವ ಅವಕಾಶ ಸಿಗುತ್ತಿದೆ, ಇದು ಕ್ರಿಕೆಟಿಗನಾಗಿ ನನ್ನ ಅಭಿವೃದ್ಧಿ ಮತ್ತು ಬೆಳವಣಿಗೆಗೆ ಮತ್ತಷ್ಟು ಕೊಡುಗೆ ನೀಡುತ್ತದೆ ಎಂದು ನನಗೆ ಖಚಿತವಾಗಿದೆ. ಭವಿಷ್ಯದಲ್ಲಿ ನಾನು ಆ ತಂಡಕ್ಕಾಗಿ ಆಡಲು ಸಾಧ್ಯವಾಗುವಂತೆ ನನಗೆ NOC ನೀಡುವಂತೆ ನಾನು ವಿನಮ್ರವಾಗಿ ವಿನಂತಿಸುತ್ತೇನೆ’ ಎಂದು ಬರೆದಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!