ಶಿಥಿಲಗೊಂಡ ಮೈಸೂರಿನ ಪಾರಂಪರಿಕ ಮಹಾರಾಣಿ ಕಾಲೇಜು ಕಟ್ಟಡ ಕುಸಿತ : ಅವಶೇಷಗಳಡಿ ಸಿಲುಕಿದ ಕಾರ್ಮಿಕ.

ಮೈಸೂರು: ಪಾರಂಪರಿಕ ಮಹಾರಾಣಿ ಕಾಲೇಜಿನಲ್ಲಿ ಕಾಮಗಾರಿ ವೇಳೆ ಕಟ್ಟಡ ಕುಸಿದಿರುವ ಘಟನೆ (ಜ.28) ನಡೆದಿದೆ. ಮಹಾರಾಣಿ ಕಾಲೇಜಿನ ಶಿಥಿಲಗೊಂಡಿದ್ದ ಕಟ್ಟಡ ದುರಸ್ತಿ ಕಾರ್ಯದ ವೇಳೆ ದುರಂತ ಸಂಭವಿಸಿದೆ. ಅವಶೇಷಗಳಡಿ ಸದ್ದಾಂ ಎಂಬ ಓರ್ವ ಕಾರ್ಮಿಕ ಸಿಲುಕಿದ್ದಾನೆ.
ಮಹಾರಾಣಿ ಕಾಲೇಜು ಕಟ್ಟಡ ಶಿಥಿಲಗೊಂಡಿದ್ದರಿಂದ ಹಿನ್ನೆಲೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಕಿಟಕಿಗಳನ್ನು ತೆಗೆದು ಹಾಕುವ ಕಟ್ಟಡ ಕುಸಿದಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಕಾರ್ಮಿಕನ ರಕ್ಷಣೆಗೆ ಮುಂದಾಗಿದ್ದಾರೆ. ಜೆಸಿಬಿ ಮೂಲಕ ಅವಶೇಷಗಳನ್ನು ತೆರವು ಮಾಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

‘ಕಾರ್ಮಿಕರು ಹೊಸ ಕಟ್ಟಡ ನಿರ್ಮಾಣಕ್ಕಾಗಿ ಶಿಥಿಲಗೊಂಡಿದ್ದ ಕಟ್ಟಡವನ್ನು ಒಡೆಯುವ ಕೆಲಸ ಮಾಡುತ್ತಿದ್ದರು. ಹಳೆಯ ಕಟ್ಟಡದಲ್ಲಿದ್ದ ಸಾಮಾಗ್ರಿಗಳನ್ನು ತೆರವುಗೊಳಿಸಿದ ಬಳಿಕ ಮೂವರು ಕಾರ್ಮಿಕರು ಕಿಟಕಿಗಳನ್ನು ತೆರವು ಮಾಡಲು ಮುಂದಾಗಿದ್ದಾರೆ. ಆಗ ಗೋಡೆ ಕುಸಿದಿದೆ. ಇಬ್ಬರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಓರ್ವ ಅವಶೇಷಗಳಡಿ ಸಿಲುಕಿಕೊಂಡಿದ್ದಾನೆ’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಮಹಾರಾಣಿ ಕಾಲೇಜಿನ ಹೊಸ ಕಟ್ಟಡ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಬಿಡುಗಡೆ ಮಾಡಿದ್ದರು.

‘ಕಟ್ಟಡ ಶಿಥಿಲವಾಗಿದ್ದ ಕಾರಣ ಕಳೆದ ನಾಲ್ಕು ದಿನಗಳಿಂದ ಕಟ್ಟಡ ತೆರವುಗೊಳಿಸುವ ಕೆಲಸ ನಡೆಯುತ್ತಿತ್ತು. ಸ್ಟಾರ್ ಇನ್ಫ್ರಾಟೆಕ್ ಕಂಪನಿಗೆ ಕಾಮಗಾರಿ ನೀಡಲಾಗಿದೆ. ಅವಘಢ ನಡೆದಾಗ 14 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕಟ್ಟಡದ ಕಿಟಕಿ, ಸರಳುಗಳನ್ನು ತೆಗೆಯುವ ಕೆಲಸ ಆಗುತ್ತಿತ್ತು. ಇದ್ದಕಿದ್ದಂತೆ ಮೊದಲ ಮಹಡಿಯ ಮೇಲ್ಚಾವಣಿ ಕುಸಿತ ಆಗಿದೆ. ತಕ್ಷಣ ಎಲ್ಲರೂ ಓಡಿ ಬಂದಿದ್ದಾರೆ. ಒಬ್ಬ ಮಾತ್ರ ಸಿಲುಕಿದ್ದಾನೆ. ದೇವರ ದಯೆಯಿಂದ ಆತನಿಗೆ ಏನೂ ಆಗದಿರಲಿ’ ಎಂದು ಶಾಸಕ ಹರೀಶ್ಗೌಡ ತಿಳಿಸಿದ್ದಾರೆ.

‘ಸುರಕ್ಷತಾ ಕ್ರಮಗಳನ್ನು ಅನುಸರಿಸಿಕೊಂಡು ಕಾಮಗಾರಿ ಮಾಡಬೇಕಿತ್ತು. ಮೊದಲು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಕಾರ್ಮಿಕನ ರಕ್ಷಣೆ ಆಗಬೇಕಿದೆ. ನಂತರದಲ್ಲಿ ತನಿಖೆ ಮಾಡಿ ಅವಘಡಕ್ಕೆ ಕಾರಣ ಆದವರ ಮೇಲೆ ಕ್ರಮ ಕೈಗೊಳ್ಳಲಾಗುವುದು’ ಎಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಹೇಳಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!