ಶ್ರೇಯಸ್ ಅಯ್ಯರ್ ಹೆಸರಿಗೆ ಮತ್ತೊಂದು ಐಪಿಎಲ್ ದಾಖಲೆ ….

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-18 ರಲ್ಲಿ ಪಂಜಾಬ್ ಕಿಂಗ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದೆ. ಈ ವೇಳೆ 8 ಗೆಲುವು ದಾಖಲಿಸಿರುವ ಪಂಜಾಬ್ ಪಡೆ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಈ ಮೂಲಕ 11 ವರ್ಷಗಳ ಬಳಿಕ ಪಂಜಾಬ್ ಕಿಂಗ್ಸ್ ತಂಡವು ಪ್ಲೇಆಫ್ ಆಡಲು ಸಜ್ಜಾಗಿ ನಿಂತಿದೆ.ಈ ಬಾರಿ ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿದಿರುವ ಪಂಜಾಬ್ ಕಿಂಗ್ಸ್ ಲೀಗ್ ಹಂತದ ಪಂದ್ಯಗಳ ಮುಕ್ತಾಯಕ್ಕೂ ಮುನ್ನವೇ ಪ್ಲೇಆಫ್​ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡಿದೆ.ಇದರೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಮೂರು ತಂಡಗಳನ್ನು ಪ್ಲೇಆಫ್​ಗೇರಿಸಿದ ಮೊದಲ ನಾಯಕ ಎಂಬ ದಾಖಲೆಯೊಂದು ಶ್ರೇಯಸ್ ಅಯ್ಯರ್ ಪಾಲಾಗಿದೆ. ಐಪಿಎಲ್​ನಲ್ಲಿ ಶ್ರೇಯಸ್ ಅಯ್ಯರ್ ಈವರೆಗೆ ಮೂರು ತಂಡಗಳನ್ನು ಮುನ್ನಡೆಸಿದ್ದಾರೆ. ಈ ಮೂರು ತಂಡಗಳು ಕೂಡ ಪ್ಲೇಆಫ್​ಗೆ ಪ್ರವೇಶಿಸಿದೆ ಎಂಬುದೇ ವಿಶೇಷ.

2019 ಮತ್ತು 2020 ರಲ್ಲಿ ಶ್ರೇಯಸ್ ಅಯ್ಯರ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ ಡೆಲ್ಲಿ ಪಡೆ ಪ್ಲೇಆಫ್​ಗೇರಿತ್ತು. ಅದರಲ್ಲೂ 2020 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಫೈನಲ್​ಗೇರಿಸುವಲ್ಲಿ ಶ್ರೇಯಸ್ ಅಯ್ಯರ್ ಪ್ರಮುಖ ಪಾತ್ರವಹಿಸಿದ್ದರು.

2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಶ್ರೇಯಸ್ ಅಯ್ಯರ್, ಕೆಕೆಆರ್​ ಪಡೆಗೆ 10 ವರ್ಷಗಳ ಬಳಿಕ ಟ್ರೋಫಿ ಗೆದ್ದು ಕೊಡುವಲ್ಲಿ ಯಶಸ್ವಿಯಾದರು. ಈ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್​​ ತಂಡಕ್ಕೆ ಟ್ರೋಫಿ ಗೆದ್ದುಕೊಟ್ಟ 2ನೇ ಕ್ಯಾಪ್ಟನ್ ಎನಿಸಿಕೊಂಡರು.

ಇದೀಗ ಶ್ರೇಯಸ್ ಅಯ್ಯರ್ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಲ್ಲದೆ ಚೊಚ್ಚಲ ಸೀಸನ್​ನಲ್ಲೇ ಪಂಜಾಬ್ ಪಡೆಯನ್ನು ಪ್ಲೇಆಫ್​ಗೆ ತಲುಪಿಸಿದ್ದಾರೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಮೂರು ತಂಡಗಳನ್ನು ಪ್ಲೇಆಫ್​ಗೇರಿಸಿದ ಏಕೈಕ ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರ್ ಹೊರಹೊಮ್ಮಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!