ಸಚಿವ ರಾಜಣ್ಣರನ್ನು ಸಂಪುಟದಿಂದ ವಜಾ ಮಾಡುವಂತೆ ಖರ್ಗೆಗೆ ಡಿಕೆಶಿ ಮನವಿ;

ಡಿಸಿಎಂ ಡಿಕೆಶಿ-ಸಚಿವ ರಾಜಣ್ಣ ಜಟಾಪಟಿ

ಬೆಂಗಳೂರು :- ಸಹಕಾರಿ ಇಲಾಖೆ ಅಡಿಯಲ್ಲಿ ಬರುವ ಅಪೆಕ್ಸ್ ಬ್ಯಾಂಕ್, ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಸೇರಿದಂತೆ ಕೆಲವು ಸಂಸ್ಥೆಗಳಿಗೆ ಅಧ್ಯಕ್ಷರ ನೇಮಕ ವಿಚಾರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಹಾಗೂ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ನಡುವೆ ಬಹಿರಂಗ ಗುದ್ದಾಟ ನಡೆದಿದೆ. ಶಿವಕುಮಾರ ಶಿಫಾರಸು ಮಾಡುವ ಯಾವುದೇ ಅಭ್ಯರ್ಥಿಗಳನ್ನು ನನ್ನ ಇಲಾಖೆಯಡಿ ಬರುವ ಸಂಸ್ಥೆಗಳಿಗೆ ನೇಮಕ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಣ್ಣ ಸ್ಪಷ್ಟವಾಗಿ ತಿಳಿಸಿರುವುದಲ್ಲದೆ, ತಮ್ಮ ಅಭ್ಯರ್ಥಿ ಗಳ ಪಟ್ಟಿಯನ್ನೂ ನೀಡಿದ್ದಾರೆ. ಇದನ್ನರಿತ ಶಿವಕುಮಾರ್, ಬೆಂಗಳೂರಿನಲ್ಲಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ರಾಜಣ್ಣ ವಿರುದ್ಧ ದೂರು ನೀಡಿರುವು ದಲ್ಲದೆ, ಅವರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಮನವಿ ಮಾಡಿದ್ದಾರೆ. ಪಕ್ಷ ಸಂಘಟನೆ ಹಾಗೂ ಮುಂಬರುವ ಚುನಾವಣೆಗಳನ್ನು ಗಮನ ದಲ್ಲಿಟ್ಟುಕೊಂಡು ಸಹಕಾರಿ ಇಲಾಖೆಯಲ್ಲಿ ಅಧ್ಯಕ್ಷರ ಮತ್ತು ಸದಸ್ಯರ ನೇಮಕಾತಿ ಆಗಬೇಕಿದೆ, ಈ ವಿಷಯದಲ್ಲಿ ಅವರು ನಮ್ಮನ್ನು ಸಂಪೂರ್ಣ ಕಡೆಗಣಿಸುತ್ತಿದ್ದಾರೆ ಎಂದು ಹೇಳಿದ್ದಾರೆ.


ಆದರೆ, ಖರ್ಗೆ ಅವರು, ರಾಜಣ್ಣ ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ, ಈ ವಿಷಯದ ಬಗ್ಗೆ ಚರ್ಚೆ ಮಾಡಿ, ಮುಂದೆ ನೋಡೋಣ ಎಂದು ತಿಳಿ ಹೇಳಿದ್ದಾರೆ. ಖರ್ಗೆ ಅವರ ಸಲಹೆಯಂತೆ ಶಿವಕುಮಾರ್ ನಿನ್ನೆ ಮಧ್ಯಾಹ್ನ ರಾಜಣ್ಣ ಅವರಿಗೆ ಮಾಹಿತಿ ನೀಡಿ, ವಿಧಾನಸೌಧದಲ್ಲಿನ ಅವರ ಕಚೇರಿಗೆ ತೆರಳಿ, ಪಕ್ಷದ ಸಹಕಾರಿ ದಿಗ್ಗಜರ ಜೊತೆ ಸಭೆ ಮಾಡಿದರು. ಆದರೆ, ಈ ಸಭೆಗೆ ರಾಜಣ್ಣ ಬರಲೇ ಇಲ್ಲ, ನಂತರ ಶಿವಕುಮಾರ್ ಅವರೇ ಉಳಿದವರೊಂದಿಗೆ ಚರ್ಚೆ ನಡೆಸಿ ತೆರಳಿದ್ದಾರೆ. ತಮ್ಮನ್ನೇ ಸಂಪುಟದಿಂದ ಕೈಬಿಡುವಂತೆ ವರಿಷ್ಠರಿಗೆ ದೂರು ನೀಡಿರುವ ಶಿವಕುಮಾರ್ ವಿರುದ್ಧ ಸಿಡಿದೆದ್ದಿರುವ ರಾಜಣ್ಣ, ಲೋಕೋಪ ಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ವಾಲ್ಮೀಕಿ ಸಮುದಾಯದ, ಪಕ್ಷಕ್ಕೆ ಸೇರಿದ 17 ಶಾಸಕರ ಸಭೆ ನಡೆಸಿದ್ದಾರೆ.
ರಾಜಣ್ಣ ಅವರನ್ನು ಸಂಪುಟದಿಂದ ಕೈಬಿಡಬಾರದೆಂದು ಮುಖ್ಯಮಂತ್ರಿ ಅವರನ್ನು ಸಭೆ ಒತ್ತಾಯಿಸಿರುವುದಲ್ಲದೆ, ಲೋಕೋಪ ಯೋಗಿ ಮತ್ತು ಸಹಕಾರಿ ಇಲಾಖೆಯಲ್ಲಿ ಬೇರೆಯವರು ಹಸ್ತಕ್ಷೇಪ ಮಾಡಬಾರದೆಂಬ ಮನವಿ ಮಾಡಲು ತೀರ್ಮಾನ ಕೈಗೊಂಡಿದೆ.


ಶಿವಕುಮಾರ್ ತಮ್ಮ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಅವರನ್ನು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೂ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಸಂಬಂಧಿ ವಿಧಾನಪರಿಷತ್ ಸದಸ್ಯ ನೇಮನ ಮಾಡಲು ತಡಸ ಹೊಂದಿದ್ದಾನ,ಬಿಜೆಪಿ ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಪೆಕ್ಸ್ ಬ್ಯಾಂಕ್ನ ಹಾಲಿ ಅಧ್ಯಕ್ಷರು, ಅವ ರನ್ನು ಕೆಳಗಿಳಿಸಿ ರವಿ ಅವರನ್ನು ತರಬೇಕು. ಅದು ಸಾಧ್ಯವಾಗದಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಧುರೀಣ ರಾಜೇಂದ್ರ ಕುಮಾರ್, ಇಲ್ಲವೇ ಶಿವಮೊಗ್ಗದ ಮತ್ತೊಬ್ಬ ಸಹಕಾರಿ ಧುರೀಣ ಮಂಜುನಾಥ್ ಗೌಡ ಅವರಲ್ಲಿ ಒಬ್ಬರನ್ನು ಕೂರಿಸಬೇಕೆಂದು ಶಿವಕುಮಾರ್ ತೀರ್ಮಾನಿಸಿದ್ದಾರೆ.
ಶಿವಕುಮಾರ್ ಅವರ ತೀರ್ಮಾನವನ್ನು ರಾಜಣ್ಣ ಸಂಪೂರ್ಣ ತಳ್ಳಿಹಾಕಿ, ಅವರು ಕರೆದ ಸಭೆಗೂ ಹೋಗದೆ, ಬೆಳ್ಳಿ ಪ್ರಕಾಶ್ ಅವರನ್ನೇ ಮುಂದುವರೆಸೋಣ, ಅವರನ್ನು ಕಾಂಗ್ರೆಸ್ಗೆ ಕರೆ ತರೋಣ, ಬೇಡವೆಂದಾ ದರೆ, ಬೇರೆ ಧುರೀಣರನ್ನು ನೇಮಕ ಮಾಡೋಣ ಎಂದು ಪಟ್ಟು ಹಿಡಿದಿದ್ದಾರೆ. ರಾಜಣ್ಣ ಮಾತಿಗೆ ಮುಖ್ಯಮಂತ್ರಿಗಳ ಬೆಂಬಲವೂ ಇದ್ದಂತಿದೆ, ಆದರೆ, ಶಿವಕುಮಾರ್ ಮಾತ್ರ ತಮ್ಮ ಹೋರಾಟ ಮುಂದುವರೆಸಿರುವು ದಲ್ಲದೆ, ಎಐಸಿಸಿ ಬಾಗಿಲನ್ನೂ ತಟ್ಟಿದ್ದಾರೆ. ಈ ಮಧ್ಯೆ, ಸುದ್ದಿಗಾರರೊಂದಿಗೆ ಮಾತ ನಾಡಿದ ರಾಜಣ್ಣ, ಸಮುದಾಯದ ಸಮಸ್ಯೆ ಗಳ ಕುರಿತು ಚರ್ಚಿಸಲು ಸ್ವಾಮೀಜಿಗಳು ಸಭೆ ಕರೆದಿದ್ದರು, ಅದರಲ್ಲಿ ರಾಜಕೀಯ ವಿಚಾರವಿಲ್ಲ ಎಂದು ಸ್ಪಷ್ಟಪಡಿಸಿದರು. ನನ್ನ ಕರೆದಿದ್ದ ಸಭೆಗೆ ಹೊಡಗಲು ಸಾಧ್ಯವಾಗಲಿಲ್ಲ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ನೇಮಕಾತಿಗೆ ಅದರ ಮಂಡಳಿ ಸದಸ್ಯರು ತೀರ್ಮಾನ ಕೈಗೊಳ್ಳ ಬೇಕು, ಅಲ್ಲಿ ಯಾರಿಗೆ ಬಹುಮತವಿದೆಯೋ ಅವರು ಅಧಿಕಾರದ ಚುಕ್ಕಾಣಿ ಹಿಡಿಯು ತ್ತಾರೆ. ಹಾಲಿ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಅವರಿಗೆ ಬೆಂಬಲ ಇಲ್ಲ ಎಂದಾದರೆ, ಮತ್ತೊಬ್ಬರು ಅಧಿಕಾರಕ್ಕೆ ಬರುತ್ತಾರೆ ಎಂದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!