ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು!

ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು!ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿರುವ ಸಿಎಂ ಸಿದ್ದರಾಮಯ್ಯ ಅದನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ರಾಜ್ಯಪಾಲರು ಕೂಡ ಕೆ.ಎನ್ ರಾಜಣ್ಣ ಅವರ ಹೆಸರನ್ನು ತಕ್ಷಣದಿಂದಲೇ ಸಂಪುಟದಿಂದ ತೆಗೆದುಹಾಕುವಂತೆ ಆದೇಶಿಸಿದ್ದಾರೆ. ಹಾಗಾದರೆ, ದಿಢೀರನೆ ಇಷ್ಟೆಲ್ಲ ಬೆಳವಣಿಗೆಗಳು ನಡೆಯಲು ಕಾರಣವೇನು? ಕೆಎನ್ ರಾಜಣ್ಣ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಿದರೇ? ಅಥವಾ ಯಾರದ್ದಾದರೂ ಒತ್ತಡಕ್ಕೆ ಕಟ್ಟುಬಿದ್ದು ಅವರು ಈ ನಿರ್ಧಾರ ತೆಗೆದುಕೊಂಡರೇ? ಎಂಬ ಕುತೂಹಲಗಳಿಗೆ ಉತ್ತರ ಇಲ್ಲಿದೆ.

ಇಂದು ವಿಧಾನಸಭಾ ಕಲಾಪ ಸಲಹಾ ಸಮಿತಿ ಸಭೆ ನಡೆಯುತ್ತಿದ್ದಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಕಾರ್ಯದರ್ಶಿಗೆ ಕೆಎನ್ ರಾಜಣ್ಣ ರಾಜೀನಾಮೆ ಪತ್ರ ನೀಡಿ ವಿಧಾನಸೌಧದಿಂದ ಹೊರಟಿದ್ದಾರೆ. ಬಳಿಕ ಸಿಎಂ ಆ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದರು. ಹೀಗೆ ದಿಢೀರೆಂದು ಸಚಿವ ಸ್ಥಾನಕ್ಕೆ ಕೆ.ಎನ್.ರಾಜಣ್ಣ ರಾಜೀನಾಮೆ ಹಿಂದೆ ಕಾಂಗ್ರೆಸ್ ಹೈಕಮಾಂಡ್ನ ನಿರ್ಧಾರವಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಅವರು ಮಾಡಿದ್ದ ಮತ ಕಳ್ಳತನ ಆರೋಪದ ವಿಚಾರದಲ್ಲಿ ಕೆಎನ್ ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದರು. ಈ ಮೂಲಕ ಕೆಎನ್ ರಾಜಣ್ಣ ಅವರು ತಮ್ಮ ಪಕ್ಷದ ವರಿಷ್ಠ ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ತೊಡೆ ತಟ್ಟಿದ್ದರು. ಇದು ಮಾಜಿ ಸಚಿವ ಕೆಎನ್ ರಾಜಣ್ಣ ಅವರಿಗೆ ಮುಳುವಾಗಿ ಪರಿಣಮಿಸಿದೆ. ಶಾಸಕ ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಈ ಬಗ್ಗೆ ರಾಜಭವನದಿಂದ ಸರ್ಕಾರಕ್ಕೆ ಅಧಿಕೃತ ಪತ್ರ ರವಾನಿಸಲಾಗಿದೆ.
ಹೌದು, ಸಚಿವ ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. ಕೆಎನ್ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜಭವನದಿಂದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಹೋಗಿದೆ. “ಮುಂದಿನ ಅಗತ್ಯ ಕ್ರಮಕ್ಕಾಗಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕುವ ಕುರಿತು ರಾಜ್ಯಪಾಲರು ಸಹಿ ಮಾಡಿದ ಮೂಲ ಅಧಿಸೂಚನೆಯನ್ನು ಈ ಪತ್ರದೊಂದಿಗೆ ಕಳುಹಿಸಲು ನನಗೆ ನಿರ್ದೇಶಿಸಲಾಗಿದೆ” ಎಂದು ಪತ್ರದಲ್ಲಿದೆ.

ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ ಶಾಸಕ ಕೆಎನ್ ರಾಜಣ್ಣ ಅವರು ಸೋಮವಾರ ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಕೆ.ಎನ್.ರಾಜಣ್ಣ ನೀಡಿದ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗೀಕರಿಸಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಳುಹಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೆಎನ್ ರಾಜಣ್ಣ ರಾಜೀನಾಮೆಯನ್ನು ಅಂಗೀಕರಿಸಿದರು.ಲೋಕಸಭಾ ಚುನಾವಣೆಯಲ್ಲಿ ಸಮಯದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ಮತಗಳ ಕಳ್ಳತನವಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದರು. ಆದರೆ, “ವೋಟರ್ ಲಿಸ್ಟ್ನ್ನು ನಮ್ಮದೇ ಸರ್ಕಾರ ಇರುವಾಗ ಮಾಡಿರುವುದು. ಆಗ ಕಣ್ಮುಚ್ಚಿ ಕುಳಿತಿದ್ದು ಈಗ ಹೇಳಿದರೆ ಏನು ಪ್ರಯೋಜನ” ಎಂದು ಸಚಿವ ಕೆ.ಎನ್ ರಾಜಣ್ಣ ಹೇಳುವ ಮೂಲಕ ತಮ್ಮದೇ ಪಕ್ಷದ ನಾಯಕರು ಮುಜುಗರಕ್ಕೀಡಾಗುವಂತೆ ಮಾಡಿದ್ದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!