ಸಸ್ಯಾಹಾರಿ ಕುಟುಂಬಗಳಿಗೆ ಮಾತ್ರ ಬಾಡಿಗೆ ನೀಡುವುದು ಎಂದ ಮನೆಯ ಮಾಲೀಕ….

ಬಾಡಿಗೆ ಮನೆ ನೀಡಲು ಈ ಮಾಲೀಕರು ಒಂದಲ್ಲ ಒಂದು ನಿಯಮಗಳನ್ನು ಮಾಡುತ್ತಾರೆ. ಬ್ಯಾಚುಲರ್​​​​ಗೆ ಬಾಡಿಗೆ ಮನೆ ನೀಡಲ್ಲ, ಒಳ್ಳೆಯ ಕೆಲಸದಲ್ಲಿ ಇದ್ರೆ ಮಾತ್ರ ಬಾಡಿಗೆ ಮನೆ , ಹೀಗೆ ಅನೇಕ ಕಾರಣಗಳು ಹಾಗೂ ನಿಯಮ, ಇದೀಗ ಮತ್ತೊಂದು ನಿಯಮ ಇದಕ್ಕೆ ಸೇರಿಕೊಂಡಿದೆ, ಮಾಂಸಹಾರಿಗಳಿಗೆ ಬಾಡಿಗೆ ಮನೆ ಇಲ್ಲ, ಸಸ್ಯಹಾರಿಗಳಿಗೆ ಮಾತ್ರ ಬಾಡಿಗೆ ನೀಡಲಾಗುವುದು ಎಂಬ ಸಂದೇಶ ವೈರಲ್​ ಆಗಿದೆ. ಚೆನ್ನೈನಲ್ಲಿ ಮನೆಗಳು ಬಾಡಿಗೆಗೆ ಸಿಗುವುದೇ ಕಷ್ಟ ಅದರಲ್ಲಿ ಈ ನಿಯಮ ಎಂದು ವ್ಯಕ್ತಿಯೊಬ್ಬರು ಎಕ್ಸ್​​ನಲ್ಲಿ ಮನೆ ಮಾಲೀಕರಿಂದ ಬಂದ ಸಂದೇಶದ ಸ್ಕ್ರೀನ್‌ಶಾಟ್‌ ಹಂಚಿಕೊಂಡಿದ್ದಾರೆ.

ಬೆಂಗಳೂರು, ಚೆನ್ನೈನಂತಹ ಮಹಾನಗರಗಳಲ್ಲಿ ಬಾಡಿಗೆಗೆ ಮನೆ ಸಿಗುವುದೇ ಕಷ್ಟ, ಅದರಲ್ಲೂ ಬ್ಯಾಚುಲರ್​​ಗೆ ಬಾಡಿಗೆ ಮನೆ ನೀಡಲು ಹಿಂದು-ಮುಂದು ನೋಡುತ್ತಾರೆ. ಆದರೆ ಇದೀಗ ಮತ್ತೊಂದು ವಿಚಾರಕ್ಕೆ ಬಾಡಿಗೆ ನೀಡುವವರು ಕಿರಿಕ್ ಮಾಡುತ್ತಿದ್ದಾರೆ ಎಂದು ಒಂದು ಪೋಸ್ಟ್​​​ ವೈರಲ್​​ ಆಗುತ್ತಿದೆ. ಹೌದು ಮಾಂಸಹಾರಿಗಳಿಗೆ ಬಾಡಿಗೆ ಮನೆ ನೀಡುತ್ತಿಲ್ಲ. ಇದರಿಂದ ಅದೆಷ್ಟು ಮಾಂಸಹಾರಿಗಳಿಗೆ ಬಾಡಿಗೆ ಮನೆ ಸಿಗದೇ ಕಷ್ಟಪಡುತ್ತಿದ್ದಾರೆ. 90%ದಷ್ಟು ಮನೆ ಬಾಡಿಗೆ ನೀಡುವವರು ಈ ವಿಚಾರವೊಂದು ಕೇಳಿ ಕೇಳುತ್ತಾರೆ ಎಂದು ಈ ವೈರಲ್​​ ಪೋಸ್ಟ್​​​ನಲ್ಲಿ ಹಂಚಿಕೊಂಡಿದ್ದಾರೆ. ಎಕ್ಸ್​​ ಖಾತೆಯಲ್ಲಿ ಚೆನ್ನೈ ನಿವಾಸಿ ಪ್ರಶಾಂತ್ ರಂಗಸ್ವಾಮಿ ಎಂಬುವವರು, ಮನೆ ಮಾಲೀಕರಿಂದ ಬಂದ ಸಂದೇಶದ ಸ್ಕ್ರೀನ್‌ಶಾಟ್‌ನ್ನು ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್​​​ ಹೀಗಿದೆ ನೋಡಿ: “ಕ್ಷಮಿಸಿ ಸರ್. ಸಸ್ಯಾಹಾರಿ ಕುಟುಂಬಗಳನ್ನು ಮಾತ್ರ ನೋಡುತ್ತಿದ್ದೇನೆ” ಎಂದು ಮನೆ ಮಾಲೀಕರ ಸಂದೇಶ ಹಾಕಿದ್ದಾರೆ. ಮಾಂಸಹಾರಿಗಳು ಚೆನ್ನೈನಲ್ಲಿ ಬಾಡಿಗೆಗೆ ಫ್ಲಾಟ್‌ಗಳನ್ನು ಹುಡುಕಲು ತುಂಬಾ ಕಷ್ಟ ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟ್​​​ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ದೊಡ್ಡ, ದೊಡ್ಡ ನಗರಗಳಲ್ಲಿ ಆಹಾರ ಆಧಾರಿತವಾಗಿ ತಾರತಮ್ಯ ಮಾಡುವ ಬಗ್ಗೆ ಅನೇಕರು ಬೇಸರ ವ್ಯಕ್ತಪಡಿಸಿದ್ದಾರೆ. ದೇಶದ ಅನೇಕ ಕಡೆಯಲ್ಲಿ ಇಂತಹ ಘಟನೆಗಳು ನಡೆದಿದೆ. ಇದೀಗ ಈ ಒಂದು ವಿಚಾರ ವೈರಲ್​ ಆಗಿದೆ. ಇಂತಹ ತಾರತಮ್ಯವನ್ನು ಮೊದಲು ನಿಲ್ಲಿಸಬೇಕು ಎಂದು ಸೋಶಿಯಲ್​​ ಮೀಡಿಯಾದಲ್ಲಿ ಒತ್ತಾಯ ಮಾಡಿದ್ದಾರೆ. ಕೆಲವು ಬಳಕೆದಾರರು ಈ ಪದ್ಧತಿಯನ್ನು ಖಂಡನೆ ಮಾಡಿದ್ದಾರೆ. ಜಾತಿ ಅಥವಾ ಧರ್ಮದ ಆಧಾರದ ಮೇಲೆ ಬಾಡಿಗೆದಾರರನ್ನು ತಿರಸ್ಕರಿಸುವ ಜನರು ಕಡಿಮೆ. ಇನ್ನು ಇದರಲ್ಲಿ ನೀವು ಮುಸ್ಲಿಮರಾಗಿದ್ದರೆ, ಕ್ಷಮಿಸಿ, ನಾವು ಮುಸ್ಲಿಮರಿಗೆ ಬಾಡಿಗೆಗೆ ನೀಡುವುದಿಲ್ಲ ಎಂಬ ಘಟನೆಗಳು ಕೂಡ ನಡೆದಿದೆ ಎಂದು ಕಾಮೆಂಟ್​​ ಮಾಡಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!