ಸಸ್ಯಾಹಾರಿ ಕುಟುಂಬಗಳಿಗೆ ಮಾತ್ರ ಬಾಡಿಗೆ ನೀಡುವುದು ಎಂದ ಮನೆಯ ಮಾಲೀಕ….

ಬಾಡಿಗೆ ಮನೆ ನೀಡಲು ಈ ಮಾಲೀಕರು ಒಂದಲ್ಲ ಒಂದು ನಿಯಮಗಳನ್ನು ಮಾಡುತ್ತಾರೆ. ಬ್ಯಾಚುಲರ್​​​​ಗೆ ಬಾಡಿಗೆ ಮನೆ ನೀಡಲ್ಲ, ಒಳ್ಳೆಯ ಕೆಲಸದಲ್ಲಿ ಇದ್ರೆ ಮಾತ್ರ ಬಾಡಿಗೆ ಮನೆ , ಹೀಗೆ ಅನೇಕ ಕಾರಣಗಳು ಹಾಗೂ ನಿಯಮ, ಇದೀಗ ಮತ್ತೊಂದು ನಿಯಮ ಇದಕ್ಕೆ ಸೇರಿಕೊಂಡಿದೆ, ಮಾಂಸಹಾರಿಗಳಿಗೆ ಬಾಡಿಗೆ ಮನೆ ಇಲ್ಲ, ಸಸ್ಯಹಾರಿಗಳಿಗೆ ಮಾತ್ರ ಬಾಡಿಗೆ ನೀಡಲಾಗುವುದು ಎಂಬ ಸಂದೇಶ ವೈರಲ್​ ಆಗಿದೆ. ಚೆನ್ನೈನಲ್ಲಿ ಮನೆಗಳು ಬಾಡಿಗೆಗೆ ಸಿಗುವುದೇ ಕಷ್ಟ ಅದರಲ್ಲಿ ಈ ನಿಯಮ ಎಂದು ವ್ಯಕ್ತಿಯೊಬ್ಬರು ಎಕ್ಸ್​​ನಲ್ಲಿ ಮನೆ ಮಾಲೀಕರಿಂದ ಬಂದ ಸಂದೇಶದ ಸ್ಕ್ರೀನ್‌ಶಾಟ್‌ ಹಂಚಿಕೊಂಡಿದ್ದಾರೆ.

ಬೆಂಗಳೂರು, ಚೆನ್ನೈನಂತಹ ಮಹಾನಗರಗಳಲ್ಲಿ ಬಾಡಿಗೆಗೆ ಮನೆ ಸಿಗುವುದೇ ಕಷ್ಟ, ಅದರಲ್ಲೂ ಬ್ಯಾಚುಲರ್​​ಗೆ ಬಾಡಿಗೆ ಮನೆ ನೀಡಲು ಹಿಂದು-ಮುಂದು ನೋಡುತ್ತಾರೆ. ಆದರೆ ಇದೀಗ ಮತ್ತೊಂದು ವಿಚಾರಕ್ಕೆ ಬಾಡಿಗೆ ನೀಡುವವರು ಕಿರಿಕ್ ಮಾಡುತ್ತಿದ್ದಾರೆ ಎಂದು ಒಂದು ಪೋಸ್ಟ್​​​ ವೈರಲ್​​ ಆಗುತ್ತಿದೆ. ಹೌದು ಮಾಂಸಹಾರಿಗಳಿಗೆ ಬಾಡಿಗೆ ಮನೆ ನೀಡುತ್ತಿಲ್ಲ. ಇದರಿಂದ ಅದೆಷ್ಟು ಮಾಂಸಹಾರಿಗಳಿಗೆ ಬಾಡಿಗೆ ಮನೆ ಸಿಗದೇ ಕಷ್ಟಪಡುತ್ತಿದ್ದಾರೆ. 90%ದಷ್ಟು ಮನೆ ಬಾಡಿಗೆ ನೀಡುವವರು ಈ ವಿಚಾರವೊಂದು ಕೇಳಿ ಕೇಳುತ್ತಾರೆ ಎಂದು ಈ ವೈರಲ್​​ ಪೋಸ್ಟ್​​​ನಲ್ಲಿ ಹಂಚಿಕೊಂಡಿದ್ದಾರೆ. ಎಕ್ಸ್​​ ಖಾತೆಯಲ್ಲಿ ಚೆನ್ನೈ ನಿವಾಸಿ ಪ್ರಶಾಂತ್ ರಂಗಸ್ವಾಮಿ ಎಂಬುವವರು, ಮನೆ ಮಾಲೀಕರಿಂದ ಬಂದ ಸಂದೇಶದ ಸ್ಕ್ರೀನ್‌ಶಾಟ್‌ನ್ನು ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್​​​ ಹೀಗಿದೆ ನೋಡಿ: “ಕ್ಷಮಿಸಿ ಸರ್. ಸಸ್ಯಾಹಾರಿ ಕುಟುಂಬಗಳನ್ನು ಮಾತ್ರ ನೋಡುತ್ತಿದ್ದೇನೆ” ಎಂದು ಮನೆ ಮಾಲೀಕರ ಸಂದೇಶ ಹಾಕಿದ್ದಾರೆ. ಮಾಂಸಹಾರಿಗಳು ಚೆನ್ನೈನಲ್ಲಿ ಬಾಡಿಗೆಗೆ ಫ್ಲಾಟ್‌ಗಳನ್ನು ಹುಡುಕಲು ತುಂಬಾ ಕಷ್ಟ ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟ್​​​ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ದೊಡ್ಡ, ದೊಡ್ಡ ನಗರಗಳಲ್ಲಿ ಆಹಾರ ಆಧಾರಿತವಾಗಿ ತಾರತಮ್ಯ ಮಾಡುವ ಬಗ್ಗೆ ಅನೇಕರು ಬೇಸರ ವ್ಯಕ್ತಪಡಿಸಿದ್ದಾರೆ. ದೇಶದ ಅನೇಕ ಕಡೆಯಲ್ಲಿ ಇಂತಹ ಘಟನೆಗಳು ನಡೆದಿದೆ. ಇದೀಗ ಈ ಒಂದು ವಿಚಾರ ವೈರಲ್​ ಆಗಿದೆ. ಇಂತಹ ತಾರತಮ್ಯವನ್ನು ಮೊದಲು ನಿಲ್ಲಿಸಬೇಕು ಎಂದು ಸೋಶಿಯಲ್​​ ಮೀಡಿಯಾದಲ್ಲಿ ಒತ್ತಾಯ ಮಾಡಿದ್ದಾರೆ. ಕೆಲವು ಬಳಕೆದಾರರು ಈ ಪದ್ಧತಿಯನ್ನು ಖಂಡನೆ ಮಾಡಿದ್ದಾರೆ. ಜಾತಿ ಅಥವಾ ಧರ್ಮದ ಆಧಾರದ ಮೇಲೆ ಬಾಡಿಗೆದಾರರನ್ನು ತಿರಸ್ಕರಿಸುವ ಜನರು ಕಡಿಮೆ. ಇನ್ನು ಇದರಲ್ಲಿ ನೀವು ಮುಸ್ಲಿಮರಾಗಿದ್ದರೆ, ಕ್ಷಮಿಸಿ, ನಾವು ಮುಸ್ಲಿಮರಿಗೆ ಬಾಡಿಗೆಗೆ ನೀಡುವುದಿಲ್ಲ ಎಂಬ ಘಟನೆಗಳು ಕೂಡ ನಡೆದಿದೆ ಎಂದು ಕಾಮೆಂಟ್​​ ಮಾಡಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!