ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಬೆಂಗಳೂರು :- ಟ್ರಾವೆಲ್ಸ್ ಮಾಲೀಕರು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಬಾಡಿಗೆಗೆ ನೀಡುತ್ತಿದ್ದಾರೆ. ಇದರಿಂದ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಸಾರಿಗೆ ಇಲಾಖೆ ಆ ಕಾರುಗಳನ್ನು ಸೀಜ್ ಮಾಡುವ ಮೂಲಕ ಟ್ರಾವೆಲ್ಸ್ ಮಾಲೀಕರಿಗೆ ಶಾಕ್ ನೀಡಿದೆ.
ನಗರದಲ್ಲಿ ಇಂದು ಸಾರಿಗೆ ಇಲಾಖೆ ಬೃಹತ್ ಕಾರ್ಯಾಚರಣೆ ಮಾಡುವ ಮೂಲಕ, ಜಾಗ್ವಾರ್, ಬಿಎಂಡಬ್ಲೂ, ರೇಂಜ್ ರೋವರ್, ಸೇರಿದಂತೆ ಕೋಟ್ಯಂತರ ರೂ. ಬೆಲೆಬಾಳುವ 25 ಐಷಾರಾಮಿ ಕಾರುಗಳನ್ನು ಆರ್ಡಿಓ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಜೊತೆಗೆ 50 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ.
ಯಶವಂತಪುರ, ರಾಜಾಜಿ ನಗರ, ಮತ್ತಿಕೆರೆ, ಪೀಣ್ಯ, ಮಲ್ಲೇಶ್ವರಂ ಸೇರಿದಂತೆ ಅಕ್ಕಪಕ್ಕದ ಏರಿಯಾಗಳಲ್ಲಿ ಪ್ರತಿ ತಂಡದಲ್ಲೂ ಸಾರಿಗೆ ಇಲಾಖೆಯ ಇನ್ಸ್ಪೆಕ್ಟರ್ ಒಳಗೊಂಡಂತೆ ಒಟ್ಟು 9 ತಂಡಗಳಿಂದ ಕಾರ್ಯಾಚರಣೆ ಮಾಡಲಾಗಿದೆ.
ಟ್ರಾವೆಲ್ಸ್ ಮಾಲೀಕರು ಔಡಿ, ಬಿಎಂಡಬ್ಲೂ, ಬೆನ್ಜ್, ವೋಲ್ವೋ ಸೇರಿದಂತೆ ಸಾಕಷ್ಟು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಯೆಲ್ಲೋ ಬೋರ್ಡ್ ರೀತಿಯಲ್ಲಿ ಬಾಡಿಗೆಗೆ ನೀಡುತ್ತಿದ್ದಾರೆ. ನಿಯಮದ ಪ್ರಕಾರ ವೈಟ್ ಬೋರ್ಡ್ ಕಾರು ಇರುವುದು ಸ್ವಂತ ಬಳಕೆಗೆ. ಆದರೆ, ವೈಟ್ ಬೋರ್ಡ್ ಐಷಾರಾಮಿ ಕಾರುಗಳನ್ನು ದೊಡ್ಡ ಸಿನಿಮಾ ನಟರು ಸೇರಿದಂತೆ ಸೆಲೆಬ್ರಿಟಿಗಳಿಗೆ ಬಾಡಿಗೆ ನೀಡಲು ಬಳಕೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಇಂದು ಆ ಕಾರುಗಳನ್ನು ಸೀಜ್ ಮಾಡಲಾಗಿದೆ.
ಇನ್ನು ಈ ವೇಳೆ ತೆರಿಗೆ ಕಟ್ಟದ, ವೈಟ್ ಬೋರ್ಡ್ನಲ್ಲಿ ಬೇರೆ ಬೇರೆ ರಾಜ್ಯದ ವಾಹನಗಳು ಅನಧಿಕೃತವಾಗಿ ಬೆಂಗಳೂರಿನಲ್ಲಿ ಸಂಚಾರ ಮಾಡುತ್ತಿರುವ ಮತ್ತು ಟ್ರಾವೆಲ್ಸ್ ನಡೆಸುತ್ತಿರುವ ವೈಟ್ ಬೋರ್ಡ್ ಕಾರುಗಳನ್ನು ಸೀಜ್ ಮಾಡಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!