ಸಾವಿನಲ್ಲೂ ಸಾರ್ಥಕತೆ ಮೆರೆದ ಕಾನ್‌ ಸ್ಟೇಬಲ್

ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ ಸ್ವರೂಪದ ಗಾಯವಾಗಿ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಪೊಲೀಸ್‌ ಠಾಣೆ ಕಾನ್‌ಸ್ಟೆಬಲ್ ಹರೀಶ್ (28) ಎಂಬುವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾರೆ. ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕು ಗಾಯನಹಳ್ಳಿ ಗ್ರಾಮದ ನಿವಾಸಿಯಾಗಿದ್ದರು. ಬುಧವಾರ ಮಾಣಿ-ಮೈಸೂರು ರಸ್ತೆಯ, ಸುಳ್ಯ ತಾಲೂಕಿನ ಅರಂತೋಡು ಬಳಿ ಅವರು ಚಲಾಯಿಸುತ್ತಿದ್ದ ಬೈಕ್ ಅಪಘಾತವಾಗಿ ತಲೆಗೆ ಗಂಭೀರ ಸ್ವರೂಪದಲ್ಲಿ ಗಾಯವಾಗಿತ್ತು. ಮಿದುಳು ನಿಷ್ಕ್ರಿಯಗೊಂಡಿರುವ ಹರೀಶ್ ಅವರ ಅಂಗಾಂಗ ದಾನ ಬಗ್ಗೆ ವೈದ್ಯರು ಮನೆಯವರಿಗೆ ಸಲಹೆ ನೀಡಿದರು. ಅದಕ್ಕೆ ಸಹೋದರ ಗಿರೀಶ್, ತಂದೆ ಲಿಂಗದೇವರು, ತಾಯಿ ರೇಣುಕಾ ಸಮ್ಮತಿ ಸೂಚಿಸಿದ್ದು, ಕಣ್ಣು, ಲಿವರ್, ಕಿಡ್ನಿ ಮೊದಲಾದ ಅಂಗಾಂಗಳನ್ನು ದಾನ ಮಾಡಲಾಯಿತು.

 

 

  • Related Posts

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    (ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

    You Missed

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!