ಸಾ.ರಾ.ಮಹೇಶ್ ಕುಟುಂಬದ ಒಡೆತನದ “ಸಾರಾ ಕನ್‌ವೆನ್ನನ್ ಹಾಲ್” ಸಂಬಂಧ ತನಿಖೆಗೆ ಸರ್ಕಾರ ಆದೇಶ.

ಮೈಸೂರು : ಇಲ್ಲಿನ ದಟ್ಟಗಳ್ಳಿಯಲ್ಲಿರುವ ಜೆಡಿಎಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ, ಮಾಜಿ ಸಚಿವ ಸಾ.ರಾ.ಮಹೇಶ್ ಕುಟುಂಬದ ಒಡೆತನದ ‘ಸಾರಾ ಕನ್‌ವೆನ್ಸನ್ ಹಾಲ್’ ನಿರ್ಮಾಣದ ಕುರಿತು ತನಿಖೆಗೆ ಸರ್ಕಾರವು ಆದೇಶಿಸಿದೆ. ಈ ಬಗ್ಗೆ ನಗರಾಭಿ ವೃದ್ಧಿ ಇಲಾಖೆಯ ಅಧೀನ ಕಾರ್ಯ ದರ್ಶಿ ಕೆ. ಲತಾ, ಅಭಿವೃದ್ಧಿ ಪ್ರಾಧಿ ಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯು ಕಾಲಯದ ಆಯುಕ್ತರಿಗೆ ಮಾರ್ಚ್ 10ರಂದು ಪತ್ರ ಬರೆದಿದ್ದಾರೆ.
ದಟ್ಟಗಳ್ಳಿಯ ಸರ್ವೆ ಸಂಖ್ಯೆ 130/3ರಲ್ಲಿ 2 ಎಕರೆ 15 ಗುಂಟೆ ಜಾಗದಲ್ಲಿ ಮಾಲೀಕರು ಕಾನೂನು ಬಾಹಿರವಾಗಿ ಕಟ್ಟಡ ನಿರ್ಮಿಸಿದ್ದು, ಇದಕ್ಕೆ ಅಧಿಕಾರಿಗಳು ಸಹಕರಿಸಿದ್ದಾರೆ ಎಂದು ಗಂಗರಾಜು ಎಂಬುವರು ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಿದ್ದಾರೆ. ಈ ದೂರಿನ ಕುರಿತು ಆಯುಕ್ತರ ಮಟ್ಟದಲ್ಲಿ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಪತ್ರದಲ್ಲಿ ಸೂಚಿಸಿದ್ದಾರೆ.
ದೂರು: ಸಾ.ರಾ. ಮಹೇಶ್ ಪತ್ನಿ ಅನಿತಾ ಮಹೇಶ್ ಅವರು ಕಾನೂನುಬಾಹಿರ ವಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಸರ್ಕಾರ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಷ್ಟ ಉಂಟು ಮಾಡಿ, ದಟ್ಟಗಳ್ಳಿಯಲ್ಲಿ ಅಕ್ರಮವಾಗಿ ವಾಣಿಜ್ಯ ಕಟ್ಟಡವನ್ನು ನಿರ್ಮಿಸಿದ್ದಾರೆ. ನಿರ್ಮಾಣದ ವೇಳೆ ನಿಯಮಗಳನ್ನು ಉಲ್ಲಂಘಿಸಿದ್ದು, ಮುಡಾ ಆಸ್ತಿ ಅತಿಕ್ರಮಿಸಲಾಗಿದೆ. ಇದಕ್ಕೆ ಜಿಲ್ಲಾಡಳಿತ ಹಾಗೂ ಮುಡಾದ ಹಿರಿಯ ಅಧಿಕಾರಿ ಗಳು ಸಹಕರಿಸಿದ್ದಾರೆ. ಒತ್ತುವರಿ ಕುರಿತು ತನಿಖೆ ನಡೆಸಬೇಕು. ಅಕ್ರಮಕ್ಕೆ ಸಹಕರಿಸಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಎನ್. ಗಂಗರಾಜು ಕಳೆದ ಫೆ.9ರಂದು ಮುಖ್ಯಮಂತ್ರಿ ಕಚೇರಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು