ಸಿಂಹಿಣಿ ಹಾಗೂ ಚಿರತೆಯ ರೋಚಕ ಕಾಳಗದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್.!

ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ಪ್ರಾಣಿ ಸಾಮ್ರಾಜ್ಯಗಳಿಗೆ ಸಂಬಂಧಪಟ್ಟ ಹಲವಾರು ಕುತೂಹಲಕಾರಿ ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದೀಗ ಮರದ ಮೇಲೆ ಸಿಂಹ ಮತ್ತು ಚಿರತೆಯೂ ಕಾದಾಟ ನಡೆಸಿದೆ. ಆದರೆ ಚಿರತೆ ತನ್ನ ಚಾಣಾಕ್ಷತೆಯಿಂದ ಸಿಂಹಿಣಿಯ ದಾಳಿಯನ್ನು ತಪ್ಪಿಸಿ ಕೊಂಡಿದೆ. ಈ ಪ್ರಾಣಿಗಳ ಕಾಳಗದ ವಿಡಿಯೋವು ಮೈ ಜುಮ್ಮ್ ಎನ್ನುವಂತಿದ್ದು,
ಪ್ರಾಣಿಗಳ ಲೋಕದಲ್ಲಿ ಬೇಟೆಗಾಗಿ ಪ್ರಾಣಿಗಳ ನಡುವೆ ಪರಸ್ಪರ ಕಾದಾಟಗಳು ನಡೆಯುತ್ತಲೇ ಇರುತ್ತವೆ. ಹೀಗಾಗಿ ಸಾಕಷ್ಟು ಪ್ರಾಣಿಗಳು ಬೇಟೆಯಲ್ಲಿ ಪಳಗಿರುತ್ತವೆ. ಈ ಪ್ರಾಣಿ ಪ್ರಪಂಚದಲ್ಲಿನ ಕಾದಾಟದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಈ ಕ್ರೂರ ಪ್ರಾಣಿಗಳಾದ ಹುಲಿ, ಚಿರತೆ, ಸಿಂಹವು ಹೊಂಚು ಹಾಕಿ ಬೇಟೆಯಾಡುವುದರಲ್ಲಿ ಒಂದು ಕೈ ಮುಂದೆ ಎನ್ನಬಹುದು. ಈ ಬಲಿಷ್ಠ ಜೀವಿಗಳು ಒಮ್ಮೆ ಗುರಿ ಇಟ್ಟು ಬೇಟೆಗಿಳಿದರೆ ಮುಗಿದೇ ಹೋಯಿತು ವಿಫಲವಾಗುವುದು ಬಹಳ ಕಡಿಮೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಮರದ ಮೇಲೆ ಸಿಂಹ ಹಾಗೂ ಚಿರತೆಯ ನಡುವಿನ ಕಾಳಗವು ಮೈ ಜುಮ್ಮ್ ಎನಿಸುವಂತಿದೆ.


AMAZlNGNATURE ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ಈ ಸಿಂಹ ಮತ್ತು ಚಿರತೆಯ ನಡುವಿನ ಸಂಘರ್ಷದ ವಿಡಿಯೋ ಇದಾಗಿದ್ದು, ಈ ಈ ಕಾಳಗ ಯಾವುದೇ ಕಾಡಿನಲ್ಲಿ ನಡೆಯದೇ ಮರದಲ್ಲಿ ನಡೆದಿದೆ. ಹೌದು, ಸಿಂಹ ಹಾಗೂ ಚಿರತೆ ನಡುವಿನ ಸಂಘರ್ಷ ನಡೆದಿದ್ದು, ಈ ಕ್ರೂರ ಪ್ರಾಣಿಗಳು ಮರದ ಮೇಲೆಯೇ ಉಗ್ರ ಹೋರಾಟಕ್ಕೆ ಇಳಿದಿದ್ದು, ಇತ್ತ ಈ ಸಿಂಹಿಣಿ ಕೂಡ ತನ್ನ ಶಕ್ತಿಯಿಂದ ಚಿರತೆಯನ್ನು ಮಣಿಸಲು ಮುಂದಾಗಿದೆ.
ಚಿರತೆಯು ನಾನೇನು ಕಮ್ಮಿ ಎಂದು ತನಗಿರುವ ಬಲದಿಂದ, ಸಿಂಹದ ಮೇಲೆ ಎರಗಿದೆ. ಆದರೆ ಕೊನೆಗೆ ಮರದ ಕೊಂಬೆಯೇ ಮುರಿದು ಬಿದಿದೆ. ಇತ್ತ ಚಿರತೆ ತನ್ನ ಚಾಣಾಕ್ಷತೆಯಿಂದ ಸಿಂಹಿಣಿಯ ದಾಳಿಯನ್ನು ತಪ್ಪಿಸಿ ಕೊಂಡಿದೆ. ಈ ಮೈ ಜುಮ್ಮ್ ಎನಿಸುವ ಕಾದಾಟದ ವಿಡಿಯೋ ವೈರಲ್ ಆಗುತ್ತಿದ್ದಂತೆ ಹತ್ತು ಮಿಲಿಯನ್ಸ್ ಗೂ ಅಧಿಕ ವೀಕ್ಷಣೆಗಳನ್ನು ಕಂಡಿದೆ.
ವೀಡಿಯೋ ನೋಡಿ ನೆಟ್ಟಿಗರು, ಕ್ರೂರ ಪ್ರಾಣಿಗಳ ಕಾದಾಟದ ಬಗ್ಗೆ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ. ಒಬ್ಬ ಬಳಕೆದಾರನು “ಪ್ರಕೃತಿಯನ್ನು ಪ್ರಕೃತಿಗಾಗಿ ನಿರ್ಮಿಸಲಾಗಿದೆ” ಎಂದು ಬರೆದಿದ್ದಾರೆ. ಮತ್ತೊಬ್ಬರು, ‘ಈ ಕ್ರೂರ ಪ್ರಾಣಿಗಳು ಮರದಲ್ಲಿ ಏನು ಮಾಡುತ್ತಿವೆ’ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರ ಬಳಕೆದಾರರು, ‘ಈ ಪ್ರಾಣಿಗಳ ಕಾದಾಟ ನೋಡುವುದಕ್ಕೆ ಭಯಂಕರವಾಗಿದೆ’ ಎಂದಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು