ಸಿಂಹಿಣಿ ಹಾಗೂ ಚಿರತೆಯ ರೋಚಕ ಕಾಳಗದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್.!

ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ಪ್ರಾಣಿ ಸಾಮ್ರಾಜ್ಯಗಳಿಗೆ ಸಂಬಂಧಪಟ್ಟ ಹಲವಾರು ಕುತೂಹಲಕಾರಿ ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದೀಗ ಮರದ ಮೇಲೆ ಸಿಂಹ ಮತ್ತು ಚಿರತೆಯೂ ಕಾದಾಟ ನಡೆಸಿದೆ. ಆದರೆ ಚಿರತೆ ತನ್ನ ಚಾಣಾಕ್ಷತೆಯಿಂದ ಸಿಂಹಿಣಿಯ ದಾಳಿಯನ್ನು ತಪ್ಪಿಸಿ ಕೊಂಡಿದೆ. ಈ ಪ್ರಾಣಿಗಳ ಕಾಳಗದ ವಿಡಿಯೋವು ಮೈ ಜುಮ್ಮ್ ಎನ್ನುವಂತಿದ್ದು,
ಪ್ರಾಣಿಗಳ ಲೋಕದಲ್ಲಿ ಬೇಟೆಗಾಗಿ ಪ್ರಾಣಿಗಳ ನಡುವೆ ಪರಸ್ಪರ ಕಾದಾಟಗಳು ನಡೆಯುತ್ತಲೇ ಇರುತ್ತವೆ. ಹೀಗಾಗಿ ಸಾಕಷ್ಟು ಪ್ರಾಣಿಗಳು ಬೇಟೆಯಲ್ಲಿ ಪಳಗಿರುತ್ತವೆ. ಈ ಪ್ರಾಣಿ ಪ್ರಪಂಚದಲ್ಲಿನ ಕಾದಾಟದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಈ ಕ್ರೂರ ಪ್ರಾಣಿಗಳಾದ ಹುಲಿ, ಚಿರತೆ, ಸಿಂಹವು ಹೊಂಚು ಹಾಕಿ ಬೇಟೆಯಾಡುವುದರಲ್ಲಿ ಒಂದು ಕೈ ಮುಂದೆ ಎನ್ನಬಹುದು. ಈ ಬಲಿಷ್ಠ ಜೀವಿಗಳು ಒಮ್ಮೆ ಗುರಿ ಇಟ್ಟು ಬೇಟೆಗಿಳಿದರೆ ಮುಗಿದೇ ಹೋಯಿತು ವಿಫಲವಾಗುವುದು ಬಹಳ ಕಡಿಮೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಮರದ ಮೇಲೆ ಸಿಂಹ ಹಾಗೂ ಚಿರತೆಯ ನಡುವಿನ ಕಾಳಗವು ಮೈ ಜುಮ್ಮ್ ಎನಿಸುವಂತಿದೆ.


AMAZlNGNATURE ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ಈ ಸಿಂಹ ಮತ್ತು ಚಿರತೆಯ ನಡುವಿನ ಸಂಘರ್ಷದ ವಿಡಿಯೋ ಇದಾಗಿದ್ದು, ಈ ಈ ಕಾಳಗ ಯಾವುದೇ ಕಾಡಿನಲ್ಲಿ ನಡೆಯದೇ ಮರದಲ್ಲಿ ನಡೆದಿದೆ. ಹೌದು, ಸಿಂಹ ಹಾಗೂ ಚಿರತೆ ನಡುವಿನ ಸಂಘರ್ಷ ನಡೆದಿದ್ದು, ಈ ಕ್ರೂರ ಪ್ರಾಣಿಗಳು ಮರದ ಮೇಲೆಯೇ ಉಗ್ರ ಹೋರಾಟಕ್ಕೆ ಇಳಿದಿದ್ದು, ಇತ್ತ ಈ ಸಿಂಹಿಣಿ ಕೂಡ ತನ್ನ ಶಕ್ತಿಯಿಂದ ಚಿರತೆಯನ್ನು ಮಣಿಸಲು ಮುಂದಾಗಿದೆ.
ಚಿರತೆಯು ನಾನೇನು ಕಮ್ಮಿ ಎಂದು ತನಗಿರುವ ಬಲದಿಂದ, ಸಿಂಹದ ಮೇಲೆ ಎರಗಿದೆ. ಆದರೆ ಕೊನೆಗೆ ಮರದ ಕೊಂಬೆಯೇ ಮುರಿದು ಬಿದಿದೆ. ಇತ್ತ ಚಿರತೆ ತನ್ನ ಚಾಣಾಕ್ಷತೆಯಿಂದ ಸಿಂಹಿಣಿಯ ದಾಳಿಯನ್ನು ತಪ್ಪಿಸಿ ಕೊಂಡಿದೆ. ಈ ಮೈ ಜುಮ್ಮ್ ಎನಿಸುವ ಕಾದಾಟದ ವಿಡಿಯೋ ವೈರಲ್ ಆಗುತ್ತಿದ್ದಂತೆ ಹತ್ತು ಮಿಲಿಯನ್ಸ್ ಗೂ ಅಧಿಕ ವೀಕ್ಷಣೆಗಳನ್ನು ಕಂಡಿದೆ.
ವೀಡಿಯೋ ನೋಡಿ ನೆಟ್ಟಿಗರು, ಕ್ರೂರ ಪ್ರಾಣಿಗಳ ಕಾದಾಟದ ಬಗ್ಗೆ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ. ಒಬ್ಬ ಬಳಕೆದಾರನು “ಪ್ರಕೃತಿಯನ್ನು ಪ್ರಕೃತಿಗಾಗಿ ನಿರ್ಮಿಸಲಾಗಿದೆ” ಎಂದು ಬರೆದಿದ್ದಾರೆ. ಮತ್ತೊಬ್ಬರು, ‘ಈ ಕ್ರೂರ ಪ್ರಾಣಿಗಳು ಮರದಲ್ಲಿ ಏನು ಮಾಡುತ್ತಿವೆ’ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರ ಬಳಕೆದಾರರು, ‘ಈ ಪ್ರಾಣಿಗಳ ಕಾದಾಟ ನೋಡುವುದಕ್ಕೆ ಭಯಂಕರವಾಗಿದೆ’ ಎಂದಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!