ಸಿಎಂ ಎಲ್ಲಾ ವರ್ಗಗಳಿಗೂ ಸಮತೋಲಿತ ಬಜೆಟ್ ಮಂಡನೆ; ಡಾ. ಪುಷ್ಪಾ ಅಮರನಾಥ್ .

ಮೈಸೂರು :- ಸಿಎಂ ಸಿದ್ದರಾಮಯ್ಯ ಎಲ್ಲಾ ವರ್ಗಗಳಿಗೂ ಅನುಕೂಲವಾಗುವಂತೆ ಸಮತೋಲಿತ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ತಿಳಿಸಿದರು.
ಜಿಲ್ಲಾ ಪಂಚಾಯತ್ ನ ಡಿ.ದೇವರಾಜ ಅರಸು ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಪುಷ್ಪಾ ಅಮರನಾಥ್, ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಅನ್ನು ಪ್ರತಿಪಕ್ಷ ಬಿಜೆಪಿ ನಾಯಕರು ಇದು ಹಲಾಲ್ ಬಜೆಟ್, ಮುಸ್ಲಿಂ ಬಜೆಟ್ ಎಂದು ಟೀಕಿಸುತ್ತಿದ್ದಾರೆ. ಅಲ್ಪಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಮಾತ್ರವಲ್ಲ. ಜೈನ, ಸಿಖ್, ಬೌದ್ಧ ಸೇರಿದಂತೆ ಇನ್ನಿತರ ಅಲ್ಪಸಂಖ್ಯಾತ ಸಮುದಾಯಗಳು ಸೇರಿವೆ. ಆದರೂ ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರ ಜನಪರ ಬಜೆಟ್ ಸಹಿಸಲಾರದೇ ಹೊಟ್ಟೆಕಿಚ್ಚಿನಿಂದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಗ್ಯಾರಂಟಿ ಸಮಿತಿ ರಚನೆಯಿಂದ ಶಾಸಕರ ಅಧಿಕಾರ ಮೊಟಕಾಗಿಲ್ಲ.
ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಮಿತಿ ರಚಿಸಿರುವುದಕ್ಕೆ ವಿಪಕ್ಷಗಳ ಆಕ್ಷೇಪ, ಕೆಲವು ಶಾಸಕರಿಂದ ತೀವ್ರ ವಿರೋಧ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಾ.ಪುಷ್ಮಾ ಅಮರನಾಥ್, ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಲು ಸಮಿತಿಯ ಅವಶ್ಯಕತೆ ಇದೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಕೇವಲ ಅಧಿಕಾರಿಗಳಿಂದ ಮಾತ್ರ ಸಾಧ್ಯವಿಲ್ಲ. ಹಾಗಾಗಿ ಸಮಿತಿಗಳ ಅವಶ್ಯಕತೆ ಇದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಮಿತಿ ಇರುವುದರಿಂದ ಜನರಿಗೆ ಯೋಜನೆಗಳನ್ನು ತಲುಪಿಸಲು ಸಾಧ್ಯವಾಗುತ್ತಿದೆ. ಇಡೀ ರಾಜ್ಯಕ್ಕೆ ಕೇವಲ ಹದಿನೈದು ಜನರ ಸಮಿತಿಯನ್ನು ಮಾತ್ರ ರಚನೆ ಮಾಡಲಾಗಿದೆ. ನಮಗೇನು ಸರ್ಕಾರ ಸಂಬಳ ಕೊಡುತ್ತಿಲ್ಲ. ಕೇವಲ ಗೌರವ ಧನ ಕೊಡುತ್ತಿದ್ದು, ಬೇರೆ ಯಾವುದೇ ಸವಲತ್ತುಗಳನ್ನು ಕೊಡುತ್ತಿಲ್ಲ. ಗ್ಯಾರಂಟಿ ಸಮಿತಿ ರಚನೆಯಿಂದ ಶಾಸಕರ ಅಧಿಕಾರ ಮೊಟಕಾಗಿಲ್ಲ. ಇದರಿಂದ ಶಾಸಕರಿಗೇ ಅನುಕೂಲವಾಗಿದೆ. ನಾವು ಯಾವುದೇ ಆಸೆ ಆಮಿಷದಿಂದ ಈ ಕೆಲಸ ಮಾಡುತ್ತಿಲ್ಲ ಎಂದು ಡಾ ಪುಷ್ಪ ಅಮರನಾಥ್ ಸ್ಪಷ್ಟಪಡಿಸಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!