ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ : ಸಿಎಂ ಸಿದ್ದರಾಮಯ್ಯ ಆಕ್ರೋಶ.

ಬೆಂಗಳೂರು: ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಸೇತುವೆ ಉದ್ಘಾಟನೆಗೆ ಬೇರೆ ಸಮಯ ನಿಗದ ಮಾಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇಂದು ಆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದಿಂದ ಯಾರು ಕೂಡಾ ಭಾಗಿಯಾಗುತ್ತಿಲ್ಲ. ನಾನೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಫೋನ್ ಮಾಡಿ ಬೇರೆ ದಿನ ನಿಗದಿ ಮಾಡುವಂತೆ ಕೇಳಿಕೊಂಡಿದ್ದೆ. ಬಳಿಕ ಪತ್ರವನ್ನು ಬರೆದಿದ್ದೆ. ಅದಕ್ಕೆ ಗಡ್ಕರಿ ಅವರು ಕಾರ್ಯಕ್ರಮ ಮುಂದಕ್ಕೆ ಹಾಕೋದಾಗಿ ಹೇಳಿದರು. ಆದರೆ ಇಲ್ಲಿನ ಬಿಜೆಪಿ ನಾಯಕರು ಅವರಿಗೆ ಒತ್ತಡ ಹಾಕಿರಬಹುದು ಅನ್ನಿಸುತ್ತೆ. ಅವರು ನನಗೆ ಏನು ಹೇಳದೇ ಮಾಡುತ್ತಿದೆ ಎಂದು ಕಿಡಿಕಾರಿದರು.

ನಾನು ಮೊದಲೇ ನಿಗದಿಯಾಗಿರುವ ಇಂಡಿ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ಪ್ರತಿಭಟನಾರ್ಥವಾಗಿ ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಯಾರು ಹೋಗುತ್ತಿಲ್ಲ. ಲೋಕೋಪಯೋಗಿ ಸಚಿವರು, ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಸಾಗರ ಶಾಸಕರು ಹೋಗ್ತಿಲ್ಲ.ಕೇಂದ್ರ ಸರ್ಕಾರದವರು ಕರೆಯಬೇಕಿತ್ತು. ಸರ್ಕಾರಗಳ ನಡುವೆ ಹೀಗೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಶಿಷ್ಟಾಚಾರ ಪಾಲನೆ ಮಾಡದೇ ಉಲ್ಲಂಘನೆ ಮಾಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.

ಈ ಕಾರ್ಯಕ್ರಮ ನಮ್ಮ ರಾಜ್ಯದಲ್ಲಿ ನಡೆಯುತ್ತಿದ್ದು ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಇದ್ದೇವೆ. ಅನೇಕ ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರ 75% ಹಣ ಕೊಟ್ಟರೂ ಎಲ್ಲಾ ಕಾರ್ಯಕ್ರಮಕ್ಕೆ ಕೇಂದ್ರದವರನ್ನ ಕರೆಯುತ್ತೇವೆ. ರೈಲ್ವೇಯಲ್ಲಿ ಜಾಗ, 50% ಹಣ ನಾವೇ ಕೊಡುತ್ತೇವೆ. ಕೇಂದ್ರ ಸರ್ಕಾರದವರು ಶಿಷ್ಟಾಚಾರದ ಪ್ರಕಾರ ನನ್ನನ್ನ, ಇಲಾಖೆ ಮಂತ್ರಿ, ಉಸ್ತುವಾರಿ ಮಂತ್ರಿ, ಶಾಸಕರನ್ನ ಕರೆಯಬೇಕಿತ್ತು. ಆದರೆ ಯಾರನ್ನು ಕರೆದಿಲ್ಲ ಎಂದು ಸಿಟ್ಟು ಹೊರಹಾಕಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!