ಸಿಟ್ಟಿಗೆದ್ದ ಫೋಟೋಗ್ರಾಫರ್ ; ಡಿಲೀಟ್ ಆದ್ವು ಮದುವೆ ಫೋಟೋಗಳು….

ಬೆಳಗ್ಗೆಯಿಂದ ಸಂಜೆ ತನಕ ನಿಂತುಕೊಂಡೆ ಮದುವೆಯ ಸುಂದರ ಫೋಟೋಗಳನ್ನುಗಳನ್ನು ಕ್ಲಿಕಿಸಿಕೊಳ್ಳುವವರೇ ಈ ಫೋಟೋಗ್ರಾಫರ್. ಆದರೆ ಮದುವೆ ಮನೆಯವರು ಅಥವಾ ಮದುವೆ ಮಂಟಪದಲ್ಲಿ ಈ ಫೋಟೋಗ್ರಾಫರ್ ಬಗ್ಗೆ ವಿಚಾರಿಸುವುದೇ ಇಲ್ಲ. ಆದರೆ ಇಲ್ಲೊಬ್ಬ ಫೋಟೋಗ್ರಾಫರ್ ಈ ವಿಚಾರವಾಗಿ ಸಿಟ್ಟುಗೊಂಡಿದ್ದು, ಮಾಡಿದ ಕೆಲಸ ತಿಳಿದರೆ ಅಚ್ಚರಿಯಾಗುತ್ತದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಎಲ್ಲರೂ ಕೂಡ ತಮ್ಮ ಮದುವೆ ಕ್ಷಣಗಳನ್ನು ಸೆರೆಹಿಡಿಯಬೇಕೆಂದು ಅಂದುಕೊಂಡುತ್ತಾರೆ. ಹೀಗಾಗಿ ಎಷ್ಟೇ ಖರ್ಚು ಆದರೂ ಸರಿಯೇ ಚೆನ್ನಾಗಿ ಫೋಟೋ ತೆಗೆಯುವ ಫೋಟೋಗ್ರಾಫರ್ ಗಳನ್ನು ಮದುವೆಗೆಂದೇ ಹೇಳುತ್ತಾರೆ. ಆದರೆ ಬೆಳಗ್ಗೆ ಯಿಂದ ಸಂಜೆ ನಿಂತುಕೊಂಡೆ ಕೆಲಸ ಮಾಡುವ ಈ ಫೋಟೋಗ್ರಾಫರ್ ಕಷ್ಟ ಕೇಳುವವರು ಯಾರು, ಅವರಿಗೂ ಕೂಡ ಕೋಪ ಅನ್ನೋದು ಬರುತ್ತದೆ. ಆದರೆ ಕೆಲವೊಮ್ಮೆ ಅವರ ಬಳಿ ಯಾರು ಕೂಡ ಊಟ ತಿಂಡಿ ಆಯ್ತಾ, ನೀರು ಬೇಕಾ ಎಂದು ಕೇಳುವುದಿಲ್ಲ. ಇದೀಗ ಇಲ್ಲೊಬ್ಬ ಫೋಟೋಗ್ರಾಫರ್ ಊಟ ನೀರು ಕೊಡಲಿಲ್ಲ, ತನ್ನ ಬಗ್ಗೆ ಯಾರು ಕೂಡ ವಿಚಾರಿಸಿಲ್ಲ ಎಂದು ಕೋಪಗೊಂಡಿದ್ದು ಮದುವೆಯ ಫೋಟೋಗಳನ್ನೆ ಡಿಲೀಟ್ ಮಾಡಿದ್ದಾನೆ ಎನ್ನಲಾಗಿದೆ. ಈ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಈ ಘಟನೆಯ ಬಗ್ಗೆ ವಿವರವಾಗಿ ಬರೆಯಲಾಗಿದೆ.. ಫೋಟೊಗ್ರಾಫರ್ ತುಂಬಾ ಹೊತ್ತು ಪೋಟೊ ತೆಗೆದ ಕಾರಣ ಸುಸ್ತಾಗಿ ಸ್ವಲ್ಪ ಹೊತ್ತು ವಿಶ್ರಾಂತಿ ತೆಗೆದುಕೊಳ್ಳಲು ಮುಂದಾಗಿದ್ದಾನೆ. ಈ ವೇಳೆ ಯಲ್ಲಿ ವಧು ವರರ ಕಡೆಯವರ ಬಳಿ ಊಟ, ನೀರು ಕೊಡುವಂತೆ ಕೇಳಿಕೊಂಡಿದ್ದಾರೆ. ಆದರೆ ಮದುಮಕ್ಕಳ ಕಡೆಯವರು ಇವರ ಮಾತಿಗೆ ಯಾವುದೇ ಬೆಲೆ ಕೊಡಲೇ ಇಲ್ಲ. ಬೆಳಗ್ಗೆಯಿಂದ ನಿಂತುಕೊಂಡೆ ಫೋಟೋ ಕ್ಲಿಕಿಸಿದ ಈ ಫೋಟೋಗ್ರಾಫರ್ ಸ್ವಲ್ಪ ಸಮಯ ವಿಶ್ರಾಂತಿ ತೆಗೆದುಕೊಂಡದ್ದಕ್ಕೆ ನಿಷ್ಠುರವಾಗಿ ಮಾತನಾಡಿದ್ದಾರಂತೆ. ಇದರಿಂದ ಕೋಪಗೊಂಡ ಫೋಟೋಗ್ರಾಫರ್ ತನ್ನ ಕ್ಯಾಮೆರಾದಲ್ಲಿ ಸೆರೆ ಹಿಡಿದ ವಧುವರರ ಮದುವೆಯ ಎಲ್ಲಾ ಫೋಟೋಗಳನ್ನು ಡಿಲೀಟ್ ಮಾಡಿ ಅಲ್ಲಿಂದ ಹೊರಟು ಹೋಗಿದ್ದಾನೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!